AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಪುಂಡಾಟಿಕೆ ಪ್ರಕರಣ: ನಿಷೇಧಾಜ್ಞೆ ಮುಂದುವರಿಕೆ; ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ ಪ್ರಕರಣ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ತಾಲೂಕಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ ಮಾಡಲಾಗಿದೆ. ಡಿಸೆಂಬರ್ 20ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ.

ಬೆಳಗಾವಿಯಲ್ಲಿ ಪುಂಡಾಟಿಕೆ ಪ್ರಕರಣ: ನಿಷೇಧಾಜ್ಞೆ ಮುಂದುವರಿಕೆ; ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಎಂಇಎಸ್​ ಪುಂಟಾಟಿಕೆ ಖಂಡಿಸಿ ಪ್ರತಿಭಟನೆ
TV9 Web
| Edited By: |

Updated on: Dec 18, 2021 | 7:24 PM

Share

ಬೆಂಗಳೂರು: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿಭಾಗ ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಹೋಟೆಲ್​ಗಳ ಸಂಘದಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಭಾಷೆಯ ಹೆಸರನ್ನು ಮುಂದಿಟ್ಟುಕೊಂಡು ಅನಗತ್ಯ ಪುಂಡಾಟಿಕೆ ಮಾಡಲಾಗಿದೆ. ಮಹಾರಾಷ್ಟ್ರ ಗಡಿಪ್ರದೇಶದಲ್ಲಿ ಹೋಟೆಲ್​ಗಳ ಮೇಲೆ ಪುಂಡಾಟ ನಡೆಸಲಾಗಿದೆ. ಹೋಟೆಲ್​ಗಳ ಮೇಲೆ ಪುಂಡಾಟಿಕೆ ಮಾಡಿದ್ದು ಖಂಡನಿಯ. ಆತಿಥ್ಯ ಕ್ಷೇತ್ರದಲ್ಲಿ ಎಲ್ಲರನ್ನೂ ಸಮಾನವಾಗಿ ನೋಡುತ್ತೇವೆ. ನಾವು ಎಲ್ಲ ಭಾಷೆ, ಜಾತಿ, ಮತದವರನ್ನ ಸಮಾನವಾಗಿ ನೋಡ್ತೇವೆ. ನಮ್ಮ ಉದ್ಯಮಕ್ಕೆ ತೊಂದರೆ ಕೊಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲಿನ ಸರ್ಕಾರಗಳು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಿ. ಕರ್ನಾಟಕ ಸರ್ಕಾರವೂ ಕನ್ನಡಿಗರಿಗೆ ನಮ್ಮ ನಾಡಿನಲ್ಲಿ, ಹೊರ ರಾಜ್ಯಗಳಲ್ಲಿ ತೊಂದರೆಯಾಗುವುದನ್ನ ತಡೆಗಟ್ಟಬೇಕು ಎಂದು ಮಾಧ್ಯಮ ಪ್ರಕಟಣೆ ಮೂಲಕ ಸರ್ಕಾರಕ್ಕೆ ಬೃಹತ್ ಬೆಂಗಳೂರು ಹೋಟೆಲ್​​ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ ಪ್ರಕರಣ ಖಂಡಿಸಿ ಬೃಹತ್ ಬೆಂಗಳೂರು ಹೋಟೆಲ್​ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಭಾಷೆಯ ಹೆಸರನ್ನು ಮುಂದಿಟ್ಟುಕೊಂಡು ಮಹಾರಾಷ್ಟ್ರ ಗಡಿಪ್ರದೇಶದಲ್ಲಿ ಹೋಟೆಲ್​ಗಳ ಮೇಲೆ ಪುಂಡಾಟ ಮಾಡಿರುವ ಆರೋಪಿಗಳ ವಿರುದ್ಧ ಸರ್ಕಾರಗಳು ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.

ಬೆಳಗಾವಿ: ಬೆಳಗಾವಿ ನಗರ, ತಾಲೂಕಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ ಪ್ರಕರಣ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ತಾಲೂಕಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ ಮಾಡಲಾಗಿದೆ. ಡಿಸೆಂಬರ್ 20ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ತ್ಯಾಗರಾಜನ್ ಈ ಬಗ್ಗೆ ಆದೇಶ‌ ಹೊರಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಪುಂಡಾಟಿಕೆ ಪ್ರಕರಣ: ಘಟನೆಗೆ ಪೊಲೀಸರ ವೈಫಲ್ಯವೇ ನೇರ ಕಾರಣ- ಶಾಸಕ ಅಭಯ್ ಪಾಟೀಲ್ ಆರೋಪ

ಇದನ್ನೂ ಓದಿ: ಕನ್ನಡಿಗರು ಮರಾಠಿಗರ ಗುದ್ದಾಟ, ಗಡಿ ವಿವಾದ; ಡಿಸೆಂಬರ್ 13 ರಿಂದ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!