AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಮಳೆಯಿಂದ ಮನೆಗೋಡೆ ಕುಸಿದು ಅಥಣಿಯಲ್ಲಿ ಯುವಕ, ವಿಜಯನಗರದಲ್ಲಿ ವೃದ್ಧೆ ಸಾವು

ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಈ ಹಿನ್ನಲೆ ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿದೆ. ಅದರಂತೆ ಅನೇಕ ಜಿಲ್ಲೆಗಳ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದೀಗ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಅಗಸಿಯಲ್ಲಿ ಮನೆಗೋಡೆ ಕುಸಿದು 23 ವರ್ಷದ ಯುವಕ ಸಾವನ್ನಪ್ಪಿದ್ದರೆ, ಇತ್ತ ವಿಜಯನಗರದಲ್ಲೂ ವೃದ್ಧೆ ಕೊನೆಯುಸಿರೆಳೆದ ಧಾರುಣ ಘಟನೆ ನಡೆದಿದೆ.

ಪ್ರತ್ಯೇಕ ಘಟನೆ: ಮಳೆಯಿಂದ ಮನೆಗೋಡೆ ಕುಸಿದು ಅಥಣಿಯಲ್ಲಿ ಯುವಕ, ವಿಜಯನಗರದಲ್ಲಿ ವೃದ್ಧೆ ಸಾವು
ಮೃತ ವೃದ್ಧೆ, ಯುವಕ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on:Jul 27, 2023 | 9:42 AM

Share

ಬೆಳಗಾವಿ, ಜು.27: ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಈ ಹಿನ್ನಲೆ ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿದೆ. ಅದರಂತೆ ಅನೇಕ ಜಿಲ್ಲೆಗಳ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದೀಗ ಬೆಳಗಾವಿ(Belagavi) ಜಿಲ್ಲೆಯ ಅಥಣಿ ಪಟ್ಟಣದ ಅಗಸಿಯಲ್ಲಿ ಮಳೆಯಿಂದ ಮನೆಗೋಡೆ ಕುಸಿದು 23 ವರ್ಷದ ಯುವಕ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಕಾಶಿನಾಥ್ ಸುತಾರ್(23) ಮೃತ ರ್ದುದೈವಿ. ನಿರಂತರ ಮಳೆಗೆ ಮನೆ ಗೋಡೆ ನೆನೆದು ಈ ಅವಘಡ ಸಂಭವಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೋಗಳಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ವೃದ್ಧೆ ಸಾವು

ವಿಜಯನಗರ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭರ್ಜರಿ ಮಳೆಯಾಗುತ್ತಿದ್ದು, ಕೊಟ್ಟೂರು ತಾಲೂಕಿನ‌ ಕೋಗಳಿ ಗ್ರಾಮದಲ್ಲಿ ನಿನ್ನೆ(ಜು.26) ರಾತ್ರಿ ಮನೆಗೋಡೆ ಕುಸಿದು ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ 60 ವರ್ಷದ ಹಿರಿಯಮ್ಮ ಕೊನೆಯುಸಿರೆಳೆದಿದ್ದಾಳೆ. ಈ ಘಟನೆ ಹೂವಿನಹಡಗಲಿ ತಾಲೂಕಿನ ಇಟಗಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ಧಾರಾಕಾರ ಮಳೆ, ರೆಡ್ ಅಲರ್ಟ್​ ಘೋಷಣೆ

ನಿನ್ನೆ ಅಡಿಕೆ ತೋಟ ನೋಡಲು ಹೋಗಿದ್ದ ವೃದ್ಧೆ ಸಾವು

ರಾಜ್ಯದಲ್ಲಿ ಮಳೆಗೆ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಅನೇಕರು ಸಾವನ್ನಪ್ಪಿದ್ದಾರೆ. ಅದರಂತೆ ನಿನ್ನೆ(ಜು.26) ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಹೊಸಸಿದ್ರಳ್ಳಿ ಗ್ರಾಮದಲ್ಲಿ ಅಧಿಕ ಮಳೆಯಿಂದ ಮುಳುಗಡೆಯಾದ ಅಡಿಕೆ ತೋಟ ನೋಡಲು ಹೋಗಿದ್ದ ವೃದ್ಧೆ ಸಾವನ್ನಪ್ಪಿರುವ ಘಟನೆ ನಡೆದಿತ್ತು. ರಾಮಮ್ಮ (65) ಮೃತ ವೃದ್ಧೆ. ಹೀಗೆ ತೋಟಕ್ಕೆ ಹೋದ ರಾಮಮ್ಮ ಮರಳಿ ಬಾರದ ಹಿನ್ನೆಲೆ ಕುಟುಂಬಸ್ಥರು ಅವರನ್ನು ಹುಡುಕಿದ್ದಾರೆ. ಈ ವೇಳೆ ತಾಯಿಹಳ್ಳದ ಬಳಿ ರಾಮಮ್ಮ ಅವರ ಚಪ್ಪಲಿ ಉರುಗೋಲು ಪತ್ತೆಯಾಗಿತ್ತ. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿಯವರು ಮೃತ ದೇಹವನ್ನ ಹೊರಗಡೆ ತಗೆದಿದ್ದರು.

ಮನೆಗೋಡೆ ಕುಸಿದು ಬಾಲಕಿ ಗಾಯ

ಬಾಗಲಕೋಟೆ:  ತೇರದಾಳ ಪಟ್ಟಣದ ಹಿರೇಮಠ ಗಲ್ಲಿಯಲ್ಲಿ ಮನೆಗೋಡೆ ಕುಸಿದು ಬಾಲಕಿ ಗಾಯಗೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಗಾಯಾಳು ಅಶ್ವಿನಿ ಪಾರಾಗಿದ್ದು, ತೇರದಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ತೇರದಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:25 am, Thu, 27 July 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?