AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Crime: ಮೂರೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಇಬ್ಬರ ಬಂಧನ

ಘಟನೆ ಬಳಿಕ ಸಂತ್ರಸ್ತ ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದೀಗ, ಸಂಬಂಧಿಕರಿಗೆ ಮಾಹಿತಿ ತಿಳಿದು ಆರೋಪಿಗಳಿಗೆ ಧರ್ಮದೇಟು ಕೊಡಲಾಗಿದೆ. ಆರೋಪಿಗಳನ್ನು ಹಿಗ್ಗಾಮುಗ್ಗಾ ಥಳಿಸಿ ಸಂಬಂಧಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ.

Belagavi Crime: ಮೂರೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಇಬ್ಬರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 28, 2021 | 10:11 PM

Share

ಬೆಳಗಾವಿ: ಮೂರೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ಆರೋಪ ಕೇಳಿಬಂದಿದೆ. ಬೆಳಗಾವಿಯ ಕ್ಯಾಂಪ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ. ಈ ದುಷ್ಕೃತ್ಯಕ್ಕೆ ಸಂಬಂಧಿಸಿ ಮುಂಬೈ ಮೂಲದ ಯುವಕ ಸೇರಿದಂತೆ ಇಬ್ಬರ ಬಂಧನವಾಗಿದೆ. ಒಂದು ವಾರದ ಹಿಂದೆ ಬೆಳಗಾವಿಯಲ್ಲಿ ದುಷ್ಕೃತ್ಯ ನಡೆದಿತ್ತು ಎಂದು ತಿಳಿದುಬಂದಿದೆ. ವಾರದ ಹಿಂದೆ ಸಂಬಂಧಿಕರ ಮನೆಗೆ ಬಂದಿದ್ದ ಯುವಕ, ನೆರೆಮನೆಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಕೇಳಿಬಂದಿದೆ. ಆದರೆ, ಮರ್ಯಾದೆಗೆ ಹೆದರಿ ಮಗು ಪೋಷಕರು ದೂರು ನೀಡಿರಲಿಲ್ಲ ಎಂದು ಹೇಳಲಾಗಿದೆ.

ಘಟನೆ ಬಳಿಕ ಸಂತ್ರಸ್ತ ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದೀಗ, ಸಂಬಂಧಿಕರಿಗೆ ಮಾಹಿತಿ ತಿಳಿದು ಆರೋಪಿಗಳಿಗೆ ಧರ್ಮದೇಟು ಕೊಡಲಾಗಿದೆ. ಆರೋಪಿಗಳನ್ನು ಹಿಗ್ಗಾಮುಗ್ಗಾ ಥಳಿಸಿ ಸಂಬಂಧಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಿಸಿ ಪ್ರಕರಣದ ತನಿಖೆ ನಡೆಸಲಾಗುವ ಬಗ್ಗೆ ಹೇಳಲಾಗಿದೆ. ಬೆಳಗಾವಿ ಕಮಿಷನರೇಟ್​ ವ್ಯಾಪ್ತಿ ಕ್ಯಾಂಪ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಧ್ಯೆ, ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳಗಾವಿಯ ಬಾಪಟ್​ಗಟ್ಟಿಯಲ್ಲಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದ್ದಾರೆ. ಅಂಗಡಿ ಮುಂಗಟ್ಟು ಬಂದ್ ಮಾಡಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದಾರೆ.

ಪೊಲೀಸ್ ಹೆಡ್ ಕಾನ್​ಸ್ಟೇಬಲ್​ನಿಂದ ಬಾಲಕಿಗೆ ಲೈಂಗಿಕ ಕಿರುಕುಳ ದೂರು ನೀಡಲು ಬಂದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಅಡಿಯಲ್ಲಿ ಇಂದು (ಜುಲೈ 28) ಮಂಗಳೂರಿನ ಪೊಲೀಸ್ ಠಾಣೆ ಹೆಡ್​ ಕಾನ್ಸ್​​ಟೇಬಲ್​ ಬಂಧಿಸಲಾಗಿರುವ ಘಟನೆ ನಡೆದಿದೆ. ಮಹಿಳಾ ಠಾಣೆಯಲ್ಲಿ ಪ್ರಕರಣ​ ದಾಖಲಿಸಿಕೊಂಡು, ಪೋಕ್ಸೊ ಕಾಯ್ದೆಯಡಿ ಹೆಡ್​​ಕಾನ್ಸ್​​ಟೇಬಲ್​ ಬಂಧನ ಮಾಡಲಾಗಿದೆ. ಮಂಗಳೂರಿನ ಕಂಕನಾಡಿ ಠಾಣೆ ಹೆಡ್​ ಕಾನ್ಸ್​​ಟೇಬಲ್​ ಸುನಿಲ್ ಎಂಬಾತನನ್ನು ಮಹಿಳಾ ಠಾಣೆಯಲ್ಲಿ ಪ್ರಕರಣ​ ದಾಖಲಿಸಿಕೊಂಡು ಬಂಧಿಸಲಾಗಿದೆ.

ಇದನ್ನೂ ಓದಿ: ಮಂಗಳೂರು: ದೂರು ನೀಡಲು ಬಂದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಪೊಲೀಸ್ ಹೆಡ್ ಕಾನ್​ಸ್ಟೇಬಲ್ ಬಂಧನ

Crime News: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗೆ ಗಲ್ಲು ಶಿಕ್ಷೆ

(Sexual Harassment to Girl Child in Belagavi two persons Arrested)

Published On - 9:57 pm, Wed, 28 July 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು