AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಮುಜರಾಯಿ ಇಲಾಖೆ ದೇಗುಲಗಳಲ್ಲಿ ಗೋಶಾಲೆ ಆರಂಭಿಸಲಾಗುವುದು; ಗೋಪೂಜೆ ಬಳಿಕ ಶಶಿಕಲಾ ಜೊಲ್ಲೆ ಹೇಳಿಕೆ

ದೇವಸ್ಥಾನಗಳಲ್ಲಿ ಗೋಶಾಲೆ ತೆರೆಯಲು ಜಾಗ ಗುರುತಿಸಲಾಗುತ್ತಿದೆ ಎಂದು ಕಪಿಲೇಶ್ವರ ದೇವಸ್ಥಾನದಲ್ಲಿ ಗೋಪೂಜೆ ಸಲ್ಲಿಸಿದ ನಂತರ ಮುಜರಾಯಿ ಸಚಿವ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಕರ್ನಾಟಕದ ಮುಜರಾಯಿ ಇಲಾಖೆ ದೇಗುಲಗಳಲ್ಲಿ ಗೋಶಾಲೆ ಆರಂಭಿಸಲಾಗುವುದು; ಗೋಪೂಜೆ ಬಳಿಕ ಶಶಿಕಲಾ ಜೊಲ್ಲೆ ಹೇಳಿಕೆ
ಶಶಿಕಲಾ ಜೊಲ್ಲೆ
TV9 Web
| Updated By: ganapathi bhat|

Updated on:Nov 05, 2021 | 9:45 PM

Share

ಬೆಳಗಾವಿ: ಕರ್ನಾಟಕ ರಾಜ್ಯದ 35,000 ದೇಗುಲಗಳಲ್ಲಿ ಗೋಪೂಜೆ ನೆರವೇರಿಸಲಾಗಿದೆ. ಪ್ರತಿ ವರ್ಷ ದೀಪಾವಳಿಯಂದು ಗೋಪೂಜೆ ಮಾಡಲಾಗುವುದು. ರಾಜ್ಯದ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಗೋಶಾಲೆ ಆರಂಭಿಸಲಾಗುವುದು. ಎ ಮತ್ತು ಬಿ ಗ್ರೇಡ್​ ದೇವಸ್ಥಾನಗಳಲ್ಲಿ ಗೋಶಾಲೆ ಆರಂಭಿಸುತ್ತೇವೆ. ಗೋಶಾಲೆ ಆರಂಭಿಸುವ ಸಂಬಂಧ 2 ಬಾರಿ ಸಭೆ ನಡೆಸಲಾಗಿದೆ ಎಂದು ಬೆಳಗಾವಿಯ ಕಪಿಲೇಶ್ವರ ದೇಗುಲದಲ್ಲಿ ಹಜ್ ಮತ್ತು ವಕ್ಫ್​ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಇಂದು (ನವೆಂಬರ್ 5) ಹೇಳಿಕೆ ನೀಡಿದ್ದಾರೆ.

ಗೋಶಾಲೆ ಆರಂಭಿಸುವ ವಿಚಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಸ್ಪಂದಿಸಿದ್ದು ಆದಷ್ಟು ಬೇಗ ಜಾರಿಗೆ ತರಲಾಗುವುದು. ದೇವಸ್ಥಾನಗಳಲ್ಲಿ ಗೋಶಾಲೆ ತೆರೆಯಲು ಜಾಗ ಗುರುತಿಸಲಾಗುತ್ತಿದೆ ಎಂದು ಕಪಿಲೇಶ್ವರ ದೇವಸ್ಥಾನದಲ್ಲಿ ಗೋಪೂಜೆ ಸಲ್ಲಿಸಿದ ನಂತರ ಮುಜರಾಯಿ ಸಚಿವ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಕಪಿಲೇಶ್ವರ ದೇವಸ್ಥಾನದಲ್ಲಿ ಗೋಮಾತೆಗೆ ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನ್ನಿಸಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಸಂಸದೆ ಮಂಗಳಾ ಅಂಗಡಿ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ, ಮಹಾಂತೇಶ್​ ದೊಡ್ಡಗೌಡರ್ ಮತ್ತಿತರರು ಉಪಸ್ಥಿತರಿದ್ದರು.

ಬಾಲಗಕೋಟೆ ಜಿಲ್ಲೆ ಬಾದಾಮಿ ತಾಲೂಕು ವ್ಯಾಪ್ತಿಯ ಶಕ್ತಿಪೀಠ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಗೋಪೂಜೆ ನೆರವೇರಿಸಲಾಯಿತು. ಸಂಸದ ಪಿ.ಸಿ. ಗದ್ದಿಗೌಡರ್​ ಗೋಪೂಜೆಯಲ್ಲಿ ಭಾಗಿಯಾಗಿದ್ದರು. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಸೋಮೇಶ್ವರ ದೇವಸ್ಥಾನದಲ್ಲಿ ಗೋಪೂಜೆ ನೆರವೇರಿಸಲಾಯಿತು. ಹೆಚ್ಚುವರಿ ಡಿಸಿ ಸತೀಶ್​ ಕುಮಾರ್, ತಹಶೀಲ್ದಾರ್​ ಉಪಸ್ಥಿತರಿದ್ದರು. ಮುಜರಾಯಿ ಇಲಾಖೆ ಆದೇಶದಂತೆ ಸಿಬ್ಬಂದಿಯಿಂದ ಗೋಪೂಜೆ ಮಾಡಲಾಯಿತು.

ಇದನ್ನೂ ಓದಿ: ಗೋಪೂಜೆ ಮಾಡಿದ ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ, ಸಚಿವ ಕೋಟ ಶ್ರೀನಿವಾಸಪೂಜಾರಿ

ಇದನ್ನೂ ಓದಿ: Diwali Sales: 10 ವರ್ಷದಲ್ಲೇ ದೀಪಾವಳಿಯಲ್ಲಿ ದಾಖಲೆ ಮಾರಾಟ; 1.25 ಲಕ್ಷ ಕೋಟಿ ರೂಪಾಯಿಯಷ್ಟು ಖರೀದಿಸಿದ ಜನರು

Published On - 9:44 pm, Fri, 5 November 21

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!