AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂಪರ ಸಂಘಟನೆಗಳು ಮಾಡುತ್ತಿರುವುದು ಸರಿ ಅನಿಸುತ್ತಿದೆ; ಬೆಳಗಾವಿಯಲ್ಲಿ ಶಶಿಕಲಾ ಜೊಲ್ಲೆ ಹೇಳಿಕೆ

ಹಲಾಲ್ ಹಾಗೂ ಜಟಕಾ ಕಟ್ ಬಗ್ಗೆ ಆಳವಾಗಿ ತಿಳಿದುಕೊಳ್ಳಬೇಕು. ತಿಳಿದುಕೊಳ್ಳದೇ ಜವಾಬ್ದಾರಿಯುತ ಸಚಿವೆಯಾಗಿ ಮಾತನಾಡಲು ಆಗುವುದಿಲ್ಲ. ತಿಳಿದುಕೊಳ್ಳದೇ ಮಾತನಾಡುವುದು ನನಗೆ ಮುಜುಗುರ ಅನ್ನಿಸುತ್ತದೆ.

ಹಿಂದೂಪರ ಸಂಘಟನೆಗಳು ಮಾಡುತ್ತಿರುವುದು ಸರಿ ಅನಿಸುತ್ತಿದೆ; ಬೆಳಗಾವಿಯಲ್ಲಿ ಶಶಿಕಲಾ ಜೊಲ್ಲೆ ಹೇಳಿಕೆ
ಸಚಿವೆ ಶಶಿಕಲಾ ಜೊಲ್ಲೆ
TV9 Web
| Edited By: |

Updated on:Apr 02, 2022 | 11:47 AM

Share

ಬೆಳಗಾವಿ: ಹಿಂದೂಪರ ಸಂಘಟನೆಗಳು ಮಾಡುತ್ತಿರುವುದು ಸರಿ ಅನಿಸುತ್ತಿದೆ ಅಂತ ಬೆಳಗಾವಿ ಜಿಲ್ಲೆ ನಿಪ್ಪಾಣಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ (Shashikala jolle) ಹೇಳಿಕೆ ನೀಡಿದ್ದಾರೆ. ಹಲಾಲ್ ಕಟ್ (Halal Cut) ಮಾಡಿದಂತೆಯೇ ಜಟ್ಕಾ ಕಟ್ (Jatka Cut) ಮಾಡಬೇಕು. ಇದು ಆಯಾ ದೇವರಿಗೆ ಅರ್ಪಣೆಯಾಗುವ ವಿಷಯವಾಗಿದೆ. ನಾವು ಹಿಂದೂ ಪರ ಸಂಘಟನೆಗಳ ಪರವಾಗಿ ಇದ್ದೇವೆ. ಉತ್ತರ ಕರ್ನಾಟಕ ಭಾಗಕ್ಕಿಂತ ಕರಾವಳಿ ಭಾಗದಲ್ಲಿ ಈ ಹಲಾಲ ಕಟ್ ವಿಷಯ ಇದೆ. ಹಾಗಾಗಿ ಹಿಂದೂಪರ ಸಂಘಟನೆ ವಿರೋಧ ಮಾಡುವುದು ಸರಿ ಅನ್ನಿಸುತ್ತದೆ ಎಂದು ಅಭಿಪ್ರಾಪಟ್ಟರು.

ಹಲಾಲ್ ಹಾಗೂ ಜಟಕಾ ಕಟ್ ಬಗ್ಗೆ ಆಳವಾಗಿ ತಿಳಿದುಕೊಳ್ಳಬೇಕು. ತಿಳಿದುಕೊಳ್ಳದೇ ಜವಾಬ್ದಾರಿಯುತ ಸಚಿವೆಯಾಗಿ ಮಾತನಾಡಲು ಆಗುವುದಿಲ್ಲ. ತಿಳಿದುಕೊಳ್ಳದೇ ಮಾತನಾಡುವುದು ನನಗೆ ಮುಜುಗುರ ಅನ್ನಿಸುತ್ತದೆ. ತಿಳಿದುಕೊಂಡು ಮಾತನಾಡುತ್ತೇನೆ. ಈ ಬಗ್ಗೆ ಸಿಎಂ, ಹಿರಿಯ ಸಚಿವರು ನಿರ್ಧಾರ ಮಾಡುತ್ತಾರೆ. ಹಲಾಲ್ ಕಟ್ ಅವರು ಅವರದೇ ದೇವರಿಗೆ ಅರ್ಪಿಸುತ್ತಾರೆ ಎಂದರು.

ಯುಗಾದಿ ಹಬ್ಬ ಹಿಂದೂಗಳ ಹೊಸ ವರ್ಷಾಚರಣೆ ಹಿನ್ನೆಲೆ ಯುಗಾದಿ ಹಬ್ಬವನ್ನು ಧಾರ್ಮಿಕ ದಿನವಾಗಿ ಆಚರಣೆ ಮಾಡಲಾಗುತ್ತದೆ. ಜನವರಿ 1 ರಂದು ಹಿಂದೂಗಳ ಹೊಸ ವರ್ಷಾಚಾರಣೆ ಅಲ್ಲ. ಯುಗಾದಿ ಹಬ್ಬದ ದಿನವೇ ಹಿಂದೂಗಳ ಹೊಸ ವರ್ಚಾರಣೆ. ಮುಂದಿನ ಪೀಳಿಗೆಗೆ ನಮ್ಮ ಧರ್ಮ ಆಚರಣೆ ತಿಳಿಸಬೇಕಿದೆ. ಹೀಗಾಗಿ ಹಬ್ಬವನ್ನು ವಿಶಿಷ್ಟವಾಗಿ ಆಚರಣೆ ಮಾಡುತ್ತಿದ್ದೇವೆ ಎಂದು ಸಚಿವೆ ಹೇಳಿದರು.

ಹೊಸತೊಡಕು ದಿನ ಯಾವುದೇ ಅಹಿತಕರ ಘಟನೆ ನಡೀಬಾರದು- ಬೊಮ್ಮಾಯಿ: ಹಲಾಲ್ ಮಾಂಸಕ್ಕೆ ಹಿಂದೂ ಸಂಘಟನೆಗಳ ವಿರೋಧ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಗುವುದು ಎಂದು  ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹೊಸತೊಡಕು ದಿನ ಯಾವುದೇ ಅಹಿತಕರ ಘಟನೆ ನಡೀಬಾರದು. ಹೀಗಾಗಿ ಎಲ್ಲ ಎಸ್​ಪಿಗಳು, ಡಿಸಿಗಳಿಗೆ ಸೂಚನೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಹಬ್ಬ ಆಚರಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ

Shreyas Iyer: ಪಂದ್ಯ ಮುಗಿದ ಬಳಿಕ ಆಂಡ್ರೆ ರಸೆಲ್ ಬಗ್ಗೆ ಶ್ರೇಯಸ್ ಅಯ್ಯರ್ ಹೇಳಿದ್ದೇನು ಗೊತ್ತೇ?

ನಾಥೂರಾಂ ಗೋಡ್ಸೆಯನ್ನು ಹೊಗಳಿ ಜೈಲು ಸೇರಿದ್ದ ಕಾಳಿಚರಣ್ ಮಹಾರಾಜ್​ಗೆ ಜಾಮೀನು; 3 ತಿಂಗಳ ನಂತರ ಬಿಡುಗಡೆ ಭಾಗ್ಯ

Published On - 11:41 am, Sat, 2 April 22

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು