AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟದಿಂದ ಎರಡು ವರ್ಷದ ಬಳಿಕ ಬೆಳಗಾವಿಯಲ್ಲಿ ಮನೆಮಾಡಿದ ಶಿವಾಜಿ ಜಯಂತಿ ಸಂಭ್ರಮ

Shivaji Jayanti in Belagavi: ಗುರುವಾರ ಬೆಳಗ್ಗೆ ಆರು ಗಂಟೆವರೆಗೂ ರೂಪಕಗಳ ಮೆರವಣಿಗೆ ಜರುಗಲಿದೆ. ಶಿವಾಜಿ ಜೀವನ ಚರಿತ್ರೆ ಸಾರುವ 75ಕ್ಕೂ ಅಧಿಕ ರೂಪಕಗಳು ಮೆರವಣಿಗೆಯಲ್ಲಿ ಸಾಗಲಿವೆ. ಮೆರವಣಿಗೆಯಲ್ಲಿ ಶಿವಾಜಿ ಬಾಲ್ಯದಿಂದ ಹಿಡಿದು ರಾಜ್ಯಭಾರದ ವರೆಗಿನ ನಾಟಕ ಪ್ರದರ್ಶನಗಳು ನಡೆಯಲಿವೆ.

ಕೊರೊನಾ ಕಾಟದಿಂದ ಎರಡು ವರ್ಷದ ಬಳಿಕ ಬೆಳಗಾವಿಯಲ್ಲಿ ಮನೆಮಾಡಿದ ಶಿವಾಜಿ ಜಯಂತಿ ಸಂಭ್ರಮ
ಕೊರೊನಾ ಕಾಟದಿಂದ ಎರಡು ವರ್ಷದ ಬಳಿಕ ಬೆಳಗಾವಿಯಲ್ಲಿ ಮನೆಮಾಡಿದ ಶಿವಾಜಿ ಜಯಂತಿ ಸಂಭ್ರಮ
TV9 Web
| Updated By: ಸಾಧು ಶ್ರೀನಾಥ್​|

Updated on:May 04, 2022 | 9:22 PM

Share

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಶಿವಾಜಿ ಜಯಂತಿ (Chhatrapati Shivaji Maharaj Jayanti celebration) ಅದ್ದೂರಿ ಮೆರವಣಿಗೆಗೆ ಜಿಲ್ಲಾಡಳಿತ ಚಾಲನೆ ನೀಡಿದೆ. ಬೆಳಗಾವಿಯ ನರಗುಂದಕರ ವೃತ್ತದಿಂದ ಮೆರವಣಿಗೆ ಚಾಲನೆ ನೀಡಲಾಗಿದೆ. ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ್ ಅವರು ಶಿವಾಜಿ ಮೂರ್ತಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಶಾಸಕರಿಗೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ, ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ, ಪಾಲಿಕೆ ಕಮೀಷನರ್ ರುದ್ರೆ ಘಾಳಿ ಸಾಥ್ ನೀಡಿದರು. ಕೊವಿಡ್ ಮಹಾಮಾರಿಯಿಂದಾಗಿ (coronavirus) ಎರಡು ವರ್ಷಗಳಿಂದ ಬೆಳಗಾವಿಯಲ್ಲಿ (Belagavi) ಶಿವಾಜಿ ಜಯಂತಿ ಆಚರಣೆ ಸ್ಥಗಿತಗೊಳಿಸಲಾಗಿತ್ತು. ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಆಚರಣೆ ಈ ಬಾರಿ 103 ನೆಯದು. ಸ್ವಾತಂತ್ರ್ಯಕ್ಕೂ ಮುನ್ನ 1919ರಲ್ಲಿ ಶಿವಾಜಿ ಜಯಂತಿ ಇಲ್ಲಿ ಆಚರಣೆ ಆರಂಭವಾಯಿತು.

ಬೆಳಗಾವಿಯಲ್ಲಿ ಶಿವಾಜಿ ಜಯಂತಿ ಅದ್ದೂರಿ ಮೆರವಣಿಗೆಗೆ ಜಿಲ್ಲಾಡಳಿತದಿಂದ ಚಾಲನೆ ಗುರುವಾರ ಬೆಳಗ್ಗೆ ಆರು ಗಂಟೆವರೆಗೂ ರೂಪಕಗಳ ಮೆರವಣಿಗೆ ಜರುಗಲಿದೆ. ಶಿವಾಜಿ ಜೀವನ ಚರಿತ್ರೆ ಸಾರುವ 75ಕ್ಕೂ ಅಧಿಕ ರೂಪಕಗಳು ಮೆರವಣಿಗೆಯಲ್ಲಿ ಸಾಗಲಿವೆ. ಮೆರವಣಿಗೆಯಲ್ಲಿ ಶಿವಾಜಿ ಬಾಲ್ಯದಿಂದ ಹಿಡಿದು ರಾಜ್ಯಭಾರದ ವರೆಗಿನ ನಾಟಕ ಪ್ರದರ್ಶನಗಳು ನಡೆಯಲಿವೆ. ಸಾಂಪ್ರದಾಯಿಕ ಉಡುಗೆ, ಕಿರು ನಾಟಕ, ವಾರಕರೀ ಸಂಗೀತ, ಡಿಜೆ ಒಳಗೊಂಡ ರೂಪಕಗಳ ವಿಜೃಂಭಣೆ ಕಾಣಬರಲಿವೆ. ಮೆರವಣಿಗೆ ಮಾರ್ಗದೂದ್ದಕ್ಕೂ‌ ಬಿಗಿ ಪೊಲೀಸ್ ಭದ್ರತೆ ಹಾಕಲಾಗಿದ್ದು, ಎರಡು ಸಾವಿರಕ್ಕೂ ಅಧಿಕ ಪೊಲೀಸರು ನಿಯೋಜನೆಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಪೊಲೀಸರಿಂದ ಮೆರವಣಿಗೆ ಮೇಲೆ ಡ್ರೋಣ್ ಕಣ್ಗಾವಲು ಹಾಕಲಾಗಿದೆ.

ಇದನ್ನೂ ಓದಿ: ಸಿಡಿಲಿನಿಂದ ತಾಯಿ ಮಗ ದುರ್ಮರಣ; ಬೈಕ್​​ನಲ್ಲಿ ತೆರಳ್ತಿದ್ದ ದಂಪತಿ ಜೊತೆ ಮೊಮ್ಮಗಳ ಸಾವು, ಬಸ್ ಡಿಕ್ಕಿ ಬೈಕ್​​ನಲ್ಲಿ ತೆರಳ್ತಿದ್ದ ಇಬ್ಬರ ಸಾವು ಇದನ್ನೂ ಓದಿ: Chanakya Niti: ಈ ಮೂರು ಕಾರ್ಯಗಳು ಆದ ತಕ್ಷಣ ಸ್ನಾನ ಮಾಡಲೇಬೇಕು! ಅವು ಯಾವುವು? ಏಕೆ?

Published On - 8:06 pm, Wed, 4 May 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ