ಕೊರೊನಾ ಕಾಟದಿಂದ ಎರಡು ವರ್ಷದ ಬಳಿಕ ಬೆಳಗಾವಿಯಲ್ಲಿ ಮನೆಮಾಡಿದ ಶಿವಾಜಿ ಜಯಂತಿ ಸಂಭ್ರಮ

Shivaji Jayanti in Belagavi: ಗುರುವಾರ ಬೆಳಗ್ಗೆ ಆರು ಗಂಟೆವರೆಗೂ ರೂಪಕಗಳ ಮೆರವಣಿಗೆ ಜರುಗಲಿದೆ. ಶಿವಾಜಿ ಜೀವನ ಚರಿತ್ರೆ ಸಾರುವ 75ಕ್ಕೂ ಅಧಿಕ ರೂಪಕಗಳು ಮೆರವಣಿಗೆಯಲ್ಲಿ ಸಾಗಲಿವೆ. ಮೆರವಣಿಗೆಯಲ್ಲಿ ಶಿವಾಜಿ ಬಾಲ್ಯದಿಂದ ಹಿಡಿದು ರಾಜ್ಯಭಾರದ ವರೆಗಿನ ನಾಟಕ ಪ್ರದರ್ಶನಗಳು ನಡೆಯಲಿವೆ.

ಕೊರೊನಾ ಕಾಟದಿಂದ ಎರಡು ವರ್ಷದ ಬಳಿಕ ಬೆಳಗಾವಿಯಲ್ಲಿ ಮನೆಮಾಡಿದ ಶಿವಾಜಿ ಜಯಂತಿ ಸಂಭ್ರಮ
ಕೊರೊನಾ ಕಾಟದಿಂದ ಎರಡು ವರ್ಷದ ಬಳಿಕ ಬೆಳಗಾವಿಯಲ್ಲಿ ಮನೆಮಾಡಿದ ಶಿವಾಜಿ ಜಯಂತಿ ಸಂಭ್ರಮ
Follow us
| Updated By: ಸಾಧು ಶ್ರೀನಾಥ್​

Updated on:May 04, 2022 | 9:22 PM

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಶಿವಾಜಿ ಜಯಂತಿ (Chhatrapati Shivaji Maharaj Jayanti celebration) ಅದ್ದೂರಿ ಮೆರವಣಿಗೆಗೆ ಜಿಲ್ಲಾಡಳಿತ ಚಾಲನೆ ನೀಡಿದೆ. ಬೆಳಗಾವಿಯ ನರಗುಂದಕರ ವೃತ್ತದಿಂದ ಮೆರವಣಿಗೆ ಚಾಲನೆ ನೀಡಲಾಗಿದೆ. ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ್ ಅವರು ಶಿವಾಜಿ ಮೂರ್ತಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಶಾಸಕರಿಗೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ, ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ, ಪಾಲಿಕೆ ಕಮೀಷನರ್ ರುದ್ರೆ ಘಾಳಿ ಸಾಥ್ ನೀಡಿದರು. ಕೊವಿಡ್ ಮಹಾಮಾರಿಯಿಂದಾಗಿ (coronavirus) ಎರಡು ವರ್ಷಗಳಿಂದ ಬೆಳಗಾವಿಯಲ್ಲಿ (Belagavi) ಶಿವಾಜಿ ಜಯಂತಿ ಆಚರಣೆ ಸ್ಥಗಿತಗೊಳಿಸಲಾಗಿತ್ತು. ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಆಚರಣೆ ಈ ಬಾರಿ 103 ನೆಯದು. ಸ್ವಾತಂತ್ರ್ಯಕ್ಕೂ ಮುನ್ನ 1919ರಲ್ಲಿ ಶಿವಾಜಿ ಜಯಂತಿ ಇಲ್ಲಿ ಆಚರಣೆ ಆರಂಭವಾಯಿತು.

ಬೆಳಗಾವಿಯಲ್ಲಿ ಶಿವಾಜಿ ಜಯಂತಿ ಅದ್ದೂರಿ ಮೆರವಣಿಗೆಗೆ ಜಿಲ್ಲಾಡಳಿತದಿಂದ ಚಾಲನೆ ಗುರುವಾರ ಬೆಳಗ್ಗೆ ಆರು ಗಂಟೆವರೆಗೂ ರೂಪಕಗಳ ಮೆರವಣಿಗೆ ಜರುಗಲಿದೆ. ಶಿವಾಜಿ ಜೀವನ ಚರಿತ್ರೆ ಸಾರುವ 75ಕ್ಕೂ ಅಧಿಕ ರೂಪಕಗಳು ಮೆರವಣಿಗೆಯಲ್ಲಿ ಸಾಗಲಿವೆ. ಮೆರವಣಿಗೆಯಲ್ಲಿ ಶಿವಾಜಿ ಬಾಲ್ಯದಿಂದ ಹಿಡಿದು ರಾಜ್ಯಭಾರದ ವರೆಗಿನ ನಾಟಕ ಪ್ರದರ್ಶನಗಳು ನಡೆಯಲಿವೆ. ಸಾಂಪ್ರದಾಯಿಕ ಉಡುಗೆ, ಕಿರು ನಾಟಕ, ವಾರಕರೀ ಸಂಗೀತ, ಡಿಜೆ ಒಳಗೊಂಡ ರೂಪಕಗಳ ವಿಜೃಂಭಣೆ ಕಾಣಬರಲಿವೆ. ಮೆರವಣಿಗೆ ಮಾರ್ಗದೂದ್ದಕ್ಕೂ‌ ಬಿಗಿ ಪೊಲೀಸ್ ಭದ್ರತೆ ಹಾಕಲಾಗಿದ್ದು, ಎರಡು ಸಾವಿರಕ್ಕೂ ಅಧಿಕ ಪೊಲೀಸರು ನಿಯೋಜನೆಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಪೊಲೀಸರಿಂದ ಮೆರವಣಿಗೆ ಮೇಲೆ ಡ್ರೋಣ್ ಕಣ್ಗಾವಲು ಹಾಕಲಾಗಿದೆ.

ಇದನ್ನೂ ಓದಿ: ಸಿಡಿಲಿನಿಂದ ತಾಯಿ ಮಗ ದುರ್ಮರಣ; ಬೈಕ್​​ನಲ್ಲಿ ತೆರಳ್ತಿದ್ದ ದಂಪತಿ ಜೊತೆ ಮೊಮ್ಮಗಳ ಸಾವು, ಬಸ್ ಡಿಕ್ಕಿ ಬೈಕ್​​ನಲ್ಲಿ ತೆರಳ್ತಿದ್ದ ಇಬ್ಬರ ಸಾವು ಇದನ್ನೂ ಓದಿ: Chanakya Niti: ಈ ಮೂರು ಕಾರ್ಯಗಳು ಆದ ತಕ್ಷಣ ಸ್ನಾನ ಮಾಡಲೇಬೇಕು! ಅವು ಯಾವುವು? ಏಕೆ?

Published On - 8:06 pm, Wed, 4 May 22

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ