AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ; ಪೊಲೀಸರ ವಶಕ್ಕೆ

ಕರ್ನಾಟಕ-ಮಹಾರಾಷ್ಟ್ರ ಗಡಿ ಕೊಗನೊಳ್ಳಿ ಹೊರವಲಯದಲ್ಲಿ ಶಿವಸೇನೆ ಪುಂಡರು ಇಂದು ಅರ್ಧಗಂಟೆ ಕಾಲ ಕರ್ನಾಟಕ ವಿರುದ್ಧ ಘೋಷಣೆ ಕೂಗಿದರು. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಸೇರಬೇಕೆಂದು ಘೋಷಣೆ ಹಾಕಿದರು.

ಬೆಳಗಾವಿ ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ; ಪೊಲೀಸರ ವಶಕ್ಕೆ
ಪೊಲೀಸರ ವಶಕ್ಕೆ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on:Nov 01, 2023 | 1:05 PM

Share

ಚಿಕ್ಕೋಡಿ ನ.1: ಕನ್ನಡ ರಾಜ್ಯೋತ್ಸವ (Kannada Rajyotsava) ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ (Shivasene) ಉದ್ಧವ್ ಠಾಕ್ರೆ ಬಣದ ಪುಂಡರನ್ನು ಮಹಾರಾಷ್ಟ್ರ (Maharashtra) ಪೊಲೀಸರು ವಶಕ್ಕೆ ಪಡೆದರು. ಶಿವಸೇನೆ ಉದ್ಧವ್ ಠಾಕ್ರೆ ಬಣ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಮಹಾರಾಷ್ಟ್ರದ ಗಡಿಯಲ್ಲೇ ತಡೆಯಲಾಯಿತು. ಪೊಲೀಸರು ವಾಹನದಲ್ಲಿ ವಾಪಸ್ ಕಾಗಲ್‌ಗೆ ಕರೆದುಕೊಂಡು ಹೋದರು.

ಶಿವಸೇನೆ ಉದ್ಧವ್ ಠಾಕ್ರೆ ಬಣ ಗಡಿ ವಿವಾದದಲ್ಲಿ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದೆ. ಶಿವಸೇನೆ ಪುಂಡರು ಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಅರ್ಧ ಗಂಟೆ ಹೈಡ್ರಾಮಾ ಸೃಷ್ಟಿಸುತ್ತಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ಕೊಗನೊಳ್ಳಿ ಹೊರವಲಯದಲ್ಲಿ ಶಿವಸೇನೆ ಪುಂಡರು ಇಂದು ಅರ್ಧಗಂಟೆ ಕಾಲ ಕರ್ನಾಟಕ ವಿರುದ್ಧ ಘೋಷಣೆ ಕೂಗಿದರು. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಸೇರಬೇಕೆಂದು ಘೋಷಣೆ ಹಾಕಿದರು.

ನಾಯಕರು ಗಡಿ ಪ್ರವೇಶಕ್ಕೆ ಯತ್ನಿಸಿದರೇ ಕಾನೂನು ಕ್ರಮ: ನಗರ ಪೊಲೀಸ್ ಆಯುಕ್ತ

ನಿಷೇಧದ ನಡುವೆಯೂ ಬುಧವಾರ ಬೆಳಗ್ಗೆ 9 ಗಂಟೆಗೆ ಮರಾಠಾ ಭವನ ಬಳಿ ಎಂಇಎಸ್ ಕಾರ್ಯಕರ್ತರು ಜಮಾವಣೆಗೊಳ್ಳಲಿದ್ದಾರೆ. ಮಹಾರಾಷ್ಟ್ರದ ಮೂರು ಜನ ಸಚಿವರು ಹಾಗೂ ಓರ್ವ ಸಂಸದನಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಈ ನಾಯಕರನ್ನು ತಡೆಯಲು ಗಡಿ ಭಾಗದಲ್ಲಿ 18 ಚೆಕ್ ಪೋಸ್ಟ್​​ಗಳನ್ನು ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ: MES ಕರಾಳ ದಿನಾಚರಣೆ: ನಿಷೇಧದ ನಡುವೆಯೂ ಉದ್ಧವ್ ಠಾಕ್ರೆ ಶಿವಸೇನೆ ಬಣದಿಂದ ಬೆಳಗಾವಿ ಚಲೋ ಕರೆ

ಮಹಾರಾಷ್ಟ್ರದ ನಾಯಕರು ಗಡಿ ಪ್ರವೇಶಕ್ಕೆ ಯತ್ನಿಸಿದರೇ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕರಾಳ ದಿನ ಆಚರಣೆ ಹೆಸರಲ್ಲಿ ಕಾನೂನು ಉಲ್ಲಂಘಿಸಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಎಚ್ಚರಿಕೆ ನೀಡಿದ್ದಾರೆ.

ಕರಾಳ‌ ದಿನಾಚರಣೆಗೆ ಅವಕಾಶವಿಲ್ಲ: ನಿತೇಶ್​ ಪಾಟೀಲ್​

ಮಹಾರಾಷ್ಟ್ರ ನಾಯಕರಿಗೆ ಬೆಳಗಾವಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದೇವೆ. ಕರಾಳ‌ ದಿನಾಚರಣೆಗೆ ಅವಕಾಶವಿಲ್ಲ. ಅಧಿವೇಶನ ವೇಳೆಯೂ ಮಹಾಮೇಳಾವಗೆ ಅವಕಾಶ ಕೊಡುವುದಿಲ್ಲ. ಕಳೆದ ವರ್ಷವೂ ಅವಕಾಶ ಕೊಟ್ಟಿಲ್ಲ. ಈ ವರ್ಷವೂ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ. ಮಹಾರಾಷ್ಟ್ರ ನಾಯಕರು ಬೆಳಗಾವಿ ಜಿಲ್ಲೆಯ ಪ್ರವೇಶಿಸದಂತೆ ಎಸ್ಪಿ ಮತ್ತು ಪೊಲೀಸ್ ಕಮೀಷನರ್ ಕ್ರಮವಹಿಸುತ್ತಾರೆ‌ ಎಂದು ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್​ ಮಾಹಿತಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:46 am, Wed, 1 November 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್