AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dalit: ದಲಿತ ನಾಯಕರ ಬೆಳವಣಿಗೆ ಹತ್ತಿಕ್ಕಿರುವ ಸಿದ್ದರಾಮಯ್ಯಗೆ ಸಾಮಾಜಿಕ ನ್ಯಾಯದ ಬಗ್ಗೆ ಬಿಜೆಪಿಗೆ ಹೇಳುವ ನೈತಿಕತೆ ಇಲ್ಲ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Pralhad Joshi: ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಬಗ್ಗೆ ಹೋದ ಕಡೆಯಲೆಲ್ಲಾ ಮಾತಾಡ್ತಾರೆ. ಆದರೆ ಕಾಂಗ್ರೆಸ್ ನಲ್ಲಿ ದಲಿತ ನಾಯಕರ ಬೆಳವಣಿಗೆಯನ್ನ ಹತ್ತಿಕ್ಕುತ್ತಿರುವವರು ಇದೇ ಸಿದ್ದರಾಮಯ್ಯ ಎಂದು ಟೀಕಿಸಿದ ಜೋಶಿಯವರು, ಸಾಮಾಜಿಕ ನ್ಯಾಯದ ಬಗ್ಗೆ ಸಿದ್ದರಾಮಯ್ಯ ಅವರಿಂದ ಬಿಜೆಪಿ ಪಾಠ ಕಲಿಯಬೇಕಿಲ್ಲ ಎಂದು ಹೇಳಿದರು.

Dalit: ದಲಿತ ನಾಯಕರ ಬೆಳವಣಿಗೆ ಹತ್ತಿಕ್ಕಿರುವ ಸಿದ್ದರಾಮಯ್ಯಗೆ ಸಾಮಾಜಿಕ ನ್ಯಾಯದ ಬಗ್ಗೆ ಬಿಜೆಪಿಗೆ ಹೇಳುವ ನೈತಿಕತೆ ಇಲ್ಲ - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ದಲಿತ ನಾಯಕರ ಬೆಳವಣಿಗೆ ಹತ್ತಿಕ್ಕಿರುವ ಸಿದ್ದರಾಮಯ್ಯಗೆ ಸಾಮಾಜಿಕ ನ್ಯಾಯದ ಬಗ್ಗೆ ಬಿಜೆಪಿಗೆ ಹೇಳುವ ನೈತಿಕತೆ ಇಲ್ಲ - ಪ್ರಲ್ಹಾದ್ ಜೋಶಿ
TV9 Web
| Edited By: |

Updated on:Mar 04, 2023 | 10:49 PM

Share

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ (Siddaramaiah) ಮನೆಗೆ ಹೋಗುವುದು ಗ್ಯಾರಂಟಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಬೈಲಹೊಂಗಲ, ಸವದತ್ತಿಯಲ್ಲಿ ಇಂದು ಬಿಎಸ್ ಯಡಿಯೂರಪ್ಪ (BS Yediyurappa) ಜೊತೆ ಬಿಜೆಪಿ (BJP) ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಮಾತನಾಡಿದರು. ಕಾಂಗ್ರೆಸ್ ನಾಯಕರು ಎಲ್ಲೆಡೆ ಈ ಬಾರಿ ಕಾಂಗ್ರೆಸ್ ಗ್ಯಾರಂಟಿ ಅಂತಾ ಹೇಳಿಕೊಂಡು ತಿರುಗಾಡ್ತಿದ್ದಾರೆ, ಅದು ಕಾಂಗ್ರೆಸ್ ಗ್ಯಾರಂಟಿ ಅಲ್ಲ, ಕಾಂಗ್ರೆಸ್ ಮನೆಗೆ ಹೋಗುವುದು ಗ್ಯಾರಂಟಿ ಎಂದು ಜೋಶಿಯವರು ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಬಗ್ಗೆ ಹೋದ ಕಡೆಯಲೆಲ್ಲಾ ಮಾತಾಡ್ತಾರೆ. ಆದರೆ ಕಾಂಗ್ರೆಸ್ ನಲ್ಲಿ ದಲಿತ ನಾಯಕರ ಬೆಳವಣಿಗೆಯನ್ನ ಹತ್ತಿಕ್ಕುತ್ತಿರುವವರು ಇದೇ ಸಿದ್ದರಾಮಯ್ಯ ಎಂದು ಟೀಕಿಸಿದ ಜೋಶಿಯವರು, ಸಾಮಾಜಿಕ ನ್ಯಾಯದ ಬಗ್ಗೆ ಸಿದ್ದರಾಮಯ್ಯ ಅವರಿಂದ ಬಿಜೆಪಿ ಪಾಠ ಕಲಿಯಬೇಕಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಮೊದಲು ಮಲ್ಲಿಕಾರ್ಜುನ ಖರ್ಗೆ ಅವರನ್ನ ರಾಜ್ಯ ರಾಜಕಾರಣದಿಂದ ದೂರ ಸರಿಸಿದರು. ನಂತರ ಜಿ. ಪರಮೇಶ್ವರ್ ಅವರನ್ನ ಹತ್ತಿಕ್ಕಿದರು. ಇದೀಗ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಹೋಗಿ ಕೆ.ಎಚ್. ಮುನಿಯಪ್ಪ ಅವರನ್ನ ಮುಗಿಸಲು ಹೊರಟಿದ್ದಾರೆ. ಮೂವರು ದಲಿತ ನಾಯಕರನ್ನ ಹತ್ತಿಕ್ಕಿರುವ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಬಗ್ಗೆ ಮಾತಾಡ್ತಿರೋದು ವಿಪರ್ಯಾಸ ಅಂತಾ ಪ್ರಲ್ಹಾದ್ ಜೋಶಿ ಟೀಕಿಸಿದರು.

58 ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಏನೂ ಮಾಡಲಿಲ್ಲ. ರೈತರ ಸಾಲ ಮನ್ನಾ ಮಾಡ್ತೀವಿ, ರೈತರ ಅಕೌಂಟ್ ಗೆ ನೇರ ಹಣ ವರ್ಗಾವಣೆ ಮಾಡ್ತಿವಿ ಅಂತಾ ಸುಳ್ಳು ಹೇಳಿದ್ರು. ಆದ್ರೆ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ರೈತರ ಖಾತೆ 6 ಸಾವಿರ ಮೋದಿ ಅವರು ಕೊಟ್ರು. ಅಲ್ಲದೇ ರೈತ ನಾಯಕ ಬಿಎಸ್ ವೈ 4 ಸಾವಿರ ಹೆಚ್ಚಿಗೆ ಸೇರಿಸಿ ಒಟ್ಟು 10 ಸಾವಿರ ರೈತರ ಖಾತೆಗೆ ಜಮಾ ಮಾಡಿಸಿದ್ದಾರೆ.

ಈಗ ಕಾಂಗ್ರೆಸ್ ನವರು ಫ್ರೀ ಕರೆಂಟ್ ಕೊಡ್ತೇವೆ ಅಂತಾ ಬುರುಡೆ ಬಿಡ್ತಿದ್ದಾರೆ. ಕಾಂಗ್ರೆಸ್ ಕಾಲದಲ್ಲಿ ಕರೆಂಟೇ ಕೊಡ್ತಿರಲಿಲ್ಲ. ಕೇಂದ್ರದಲ್ಲಿ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಬಂದ ಮೇಲೆ 24 ಗಂಟೆ ಕರೆಂಟ್ ಕೊಡ್ತಿದ್ದೇವೆ. ಫ್ರೀ ಕರೆಂಟ್ ಕೊಡಲು ಸಾಧ್ಯವಿಲ್ಲ. ಬಿಜೆಪಿ ಕ್ವಾಲಿಟಿ ಕರೆಂಟ್ ಕೊಡುವ ನೀತಿ ಅನುಸರಿಸುತ್ತಿದೆ. ಜನರು ಕಾಂಗ್ರೆಸ್ ಸುಳ್ಳುಗಳಿಗೆ ಮರುಳಾಗಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಮನವಿ ಮಾಡಿದರು.

ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಕೇವಲ ರಾಜಕೀಯ ಮಾಡಿತು. ಗೋವಾಗೆ ಹೋಗಿ ಹನಿ ನೀರು ಕೊಡಲ್ಲ ಎಂದವರು ಸೋನಿಯಾ ಗಾಂಧಿಯವರು. ಆದರೆ, ಮಹದಾಯಿ ಯೋಜನೆ ಅನುಷ್ಠಾನಗೊಳಿಸಲು ಬಿಜೆಪಿ ಸರ್ಕಾರ ದಿಟ್ಟಹೆಜ್ಜೆಯಿಟ್ಟಿದೆ. ಮಹದಾಯಿ ನೀರು ಬೈಲಹೊಂಗಲ, ಸವದತ್ತಿಗೆ ತರುತ್ತಿದ್ದರೆ ಅದು ಬಿಜೆಪಿ ಅನ್ನೋದನ್ನ ಜನ ಮರೆಯಬಾರದು ಎಂದು ಇದೇ ವೇಳೆ ಪ್ರಲ್ಹಾದ ಜೋಶಿಯವರು ಹೇಳಿದರು.

Published On - 9:23 pm, Sat, 4 March 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ