AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಾಂತರ ನಿಷೇಧ ಕಾಯ್ದೆ ಆರ್​ಎಸ್​ಎಸ್​ನವರ ಕೂಸು; ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ರಾಜ್ಯದಲ್ಲಿ ಜ್ವಲಂತ ಸಮಸ್ಯೆ ಸಾಕಷ್ಟಿವೆ, ಅದರ ಬಗ್ಗೆ ಚರ್ಚಿಸಲಿ. ಈ ಕಾಯ್ದೆ ಆರ್​ಎಸ್​ಎಸ್​​ನವರ ಕೂಸು. ಜನರ ಮನಸ್ಸು ಕೆಡಿಸಲು ತಂದಿರುವಂತಹ ಕಾಯ್ದೆ ಇದು ಎಂದು ಮತಾಂತರ ನಿಷೇಧ ಕಾಯ್ದೆ ಕುರಿತು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ಆರ್​ಎಸ್​ಎಸ್​ನವರ ಕೂಸು; ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 23, 2021 | 5:31 PM

Share

ಬೆಳಗಾವಿ: ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಗೆ ವಿರೋಧ ಪಕ್ಷದಲ್ಲಿ ಮಾತ್ರವಲ್ಲದೆ ಬಿಜೆಪಿಯಲ್ಲೂ ಕೆಲವರಿಂದ ವಿರೋಧ ಕೇಳಿಬರುತ್ತಿದೆ. ಈ ನಡುವೆ ಇಂದು ಸುವರ್ಣಸೌಧದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತಾಂತರ ನಿಷೇಧ ಕಾಯ್ದೆ ಕುರಿತು ಪ್ರತಿಕ್ರಿಯೆ ನೀಡಿದ್ದು, ಯಾವ ಉದ್ದೇಶಕ್ಕೆ ಈ ಮಸೂದೆ ಜಾರಿಗೆ​ ತರುತ್ತಾರೆ ಎಂದು ನಮಗೆ ಗೊತ್ತಾಗ್ತಿಲ್ಲ. ರಾಜ್ಯದಲ್ಲಿ ಜ್ವಲಂತ ಸಮಸ್ಯೆ ಸಾಕಷ್ಟಿವೆ, ಅದರ ಬಗ್ಗೆ ಚರ್ಚಿಸಲಿ. ಈ ಕಾಯ್ದೆ ಆರ್​ಎಸ್​ಎಸ್​​ನವರ ಕೂಸು. ಜನರ ಮನಸ್ಸು ಕೆಡಿಸಲು ತಂದಿರುವಂತಹ ಕಾಯ್ದೆ ಇದು ಎಂದು ಮತಾಂತರ ನಿಷೇಧ ಕಾಯ್ದೆ ಕುರಿತು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕಾಯ್ದೆ ಬಗ್ಗೆ ಇನ್ನೂ ಚರ್ಚೆ ಮುಗಿದಿಲ್ಲ. ಚರ್ಚೆ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು. ಜೆಡಿಎಸ್​ನವರು ಏನು ಮಾಡುತ್ತಾರೋ ನಮಗೆ ಗೊತ್ತಿಲ್ಲ. ನಾವು ಮತಾಂತರ ನಿಷೇಧ ಕಾಯ್ದೆಯ ಪ್ರಸ್ತಾಪಕ್ಕೇ ವಿರೋಧ ವ್ಯಕ್ತಪಡಿಸಿದ್ದೇವೆ ಎಂದಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ. ನಾವು ಜನತಾ ನ್ಯಾಯಾಲಯದ ಮುಂದೆ ಹೋಗುತ್ತೇವೆ. ಒಂದು ವೇಳೆ ಕಾಯ್ದೆ ಜಾರಿಯಾದ್ರೆ ಕಾಯ್ದೆ ತೆಗೆದುಹಾಕುತ್ತೇವೆ. 2023ಕ್ಕೆ ಮತ್ತೆ ನಾವೇ ಅಧಿಕಾರಕ್ಕೆ ಬಂದು ಈ ಕಾಯ್ದೆಯನ್ನು ತೆಗೆದುಹಾಕುತ್ತೇವೆ ಎಂದು ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಚಿದಾನಂದಮೂರ್ತಿ, ಜಯದೇವ, ಎಸ್​.ಆರ್​. ಲೀಲಾ ಅರ್ಜಿ ಕೊಟ್ಟಿದ್ದರು. ಆ ದಾಖಲೆಗಳನ್ನ ಮುಂದಿಟ್ಟು ಈ ಕಾನೂನು ತರಲಾಗಿದೆ ಎಂದು ಸಿದ್ದರಾಮಯ್ಯ ದಾಖಲೆಗಳನ್ನು ಪ್ರದರ್ಶಿಸಿದ್ದಾರೆ. ಚಿದಾನಂದ ಮೂರ್ತಿ, ನರಹರಿ, ಬಿ.ಎನ್ ಮೂರ್ತಿ, ಜಯದೇವ್, ಎಸ್​. ಆರ್ ಲೀಲಾ ಇವರೆಲ್ಲರೂ ಆರ್​ಎಸ್​ಎಸ್​ನವರು. ಇವರು ಲಾ ಕಮಿಷನ್ ಗೆ ಅರ್ಜಿ ಕೊಟ್ಟಿದ್ದರು. ಕಾನೂನು ಎಲ್ಲರಿಗೂ ಒಂದೇ. ನಾನು ಸಿಎಂ ಆಗಿದ್ದಾಗ ಮಾಡುವ ಮನಸು ಇದ್ದಿದ್ದರೆ ಎರಡು ವರ್ಷ ಟೈಮ್‌ ‌ಇತ್ತು. ಆದರೆ ನಾನು ಮಾಡಲಿಲ್ಲ. ಇದೊಂದು ಅಸಂವಿಧಾನಿಕ ಕಾನೂನು. ಉತ್ತರ ಪ್ರದೇಶ, ಗುಜರಾತ್ ಮತ್ತು ಇವರು ತಂದಿರುವ ಕಾನೂನು ಒಂದೇ ರೀತಿಯಲ್ಲಿ ಇದೆ‌. ಇದರ ಹಿಂದೆ ಆರ್.ಎಸ್.ಎಸ್ ಕೈವಾಡವಿದೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಮ್ಯಾಚ್​ ಫಿಕ್ಸಿಂಗ್ ಆರೋಪಕ್ಕೆ ಸಿದ್ದರಾಮಯ್ಯ ಕಿಡಿ: ಬಿಜೆಪಿ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಎಂಬ ಶಾಸಕ ಹೆಚ್​.ಡಿ. ರೇವಣ್ಣ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದು, ನಾನು‌ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿಲ್ಲ. ಮ್ಯಾಚ್ ಫಿಕ್ಸಿಂಗ್ ಅನ್ನೋದೇ ನನಗೆ ಗೊತ್ತಿಲ್ಲ. ಸಿಎಂ‌ ಆಗಿದ್ದಾಗ ನಾನು ಅವರ್ಯಾರ ಮನೆಗೂ ಹೋಗಿಲ್ಲ. ಒಂದು ಕೆಲಸ ಮಾಡಿಕೊಡಿ ಅಂತ ನಾನು ಯಾವ ಸಚಿವನ ಮನೆಗೆ, ಸಿಎಂ ಮನೆಗೂ ಹೋಗಿಲ್ಲ. ನಾನು ರಾಜಕೀಯ ಜೀವನದಲ್ಲಿ ನಾನು ಹಾಗೆ ನಡೆದುಕೊಂಡಿದ್ದೇನೆ. ನೀವು ಬಿಜೆಪಿ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದೀರೇ ವಿನಃ ನಾವಲ್ಲ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಬೇಜವಾಬ್ದಾರಿ ವಿರೋಧ ಪಕ್ಷ: ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಬೊಮ್ಮಾಯಿ

Anti Conversion Bill: ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಗೆ ಬಿಜೆಪಿ ಶಾಸಕರ ಮನವಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ