AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗನ ಮೇಲೆ PSI ಹಲ್ಲೆ? ಹಲ್ಲೆ ಮಾಡಿದ ಕಾನ್ಸ್​ಟೇಬಲ್​​ ಸಸ್ಪೆಂಡ್​

belagavi sp: ಸಹೋದರ ಸಂಬಂಧಿ ಮಹಿಳೆ ಜತೆ ಪಿಎಸ್​ಐ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು PSI ಮಗ ರಾಹುಲ್ ಮಹಿಳೆಯ ಮನೆಗೆ ಹೋಗಿ ಆವಾಜ್ ಹಾಕಿದ್ದನಂತೆ. ಈ ವೇಳೆ ಘಟಪ್ರಭಾ ಪೊಲೀಸರನ್ನು ಕರೆಸಿ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಸದರಿ ಮಹಿಳೆ ಈ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ.

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗನ ಮೇಲೆ PSI ಹಲ್ಲೆ? ಹಲ್ಲೆ ಮಾಡಿದ ಕಾನ್ಸ್​ಟೇಬಲ್​​ ಸಸ್ಪೆಂಡ್​
ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗನ ಮೇಲೆ PSI ಹಲ್ಲೆ? ಹಲ್ಲೆ ಮಾಡಿದ ಕಾನ್ಸ್​ಟೇಬಲ್​​ ಸಸ್ಪೆಂಡ್​
TV9 Web
| Edited By: ಸಾಧು ಶ್ರೀನಾಥ್​|

Updated on:Jun 03, 2022 | 6:08 PM

Share

ಬೆಳಗಾವಿ: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗನ ಮೇಲೆ ಪೊಲೀಸ್ ಸಬ್​ ಇನ್ಸ್​​ಪೆಕ್ಟರ್​​ (PSI) ಹಲ್ಲೆ ಮಾಡಿಸಿರುವ ಪ್ರಕರಣ ವರದಿಯಾಗಿದ್ದು, PSI ಮಗನ ಮೇಲೆ ಪೊಲೀಸರಿಂದ ಹಲ್ಲೆ ಮಾಡಿಸಿದ್ದರು ಎನ್ನಲಾಗಿತ್ತು. ಇದೀಗ PSI ಆಣತಿಯಂತೆ ಹಲ್ಲೆ ಮಾಡಿದ್ದ ಕಾನ್ಸ್​ಟೇಬಲ್​​ ನನ್ನು ಸಸ್ಪೆಂಡ್​ ಮಾಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿ ಜಿಲ್ಲೆ ಘಟಪ್ರಭಾ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್​​ ಶಿವಾನಂದ ಪತ್ತಾರನನ್ನು ಅಮಾನತು ಮಾಡಿ ಎಸ್​ಪಿ ಲಕ್ಷ್ಮಣ ನಿಂಬರಗಿ ಆದೇಶಿಸಿದ್ದಾರೆ. ಕುಲಗೋಡ ಠಾಣೆ ಪಿಎಸ್‌ಐ ಸಿದ್ದಪ್ಪ ಕರನಿಂಗ್ ಮಗ ರಾಹುಲ್ ಮೇಲೆ ಹಲ್ಲೆ ನಡೆಸಿರುವ ಪೊಲೀಸ್​ ಅಧಿಕಾರಿ. ಮೇ 23ರಂದು ಕೊಣ್ಣೂರ ಗ್ರಾಮದಲ್ಲಿ ರಾಹುಲ್ ಮೇಲೆ ಹಲ್ಲೆ ನಡೆದಿತ್ತು ಎನ್ನಲಾಗಿದೆ.

ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿರುವ ಮಹಿಳೆ:

ಸಹೋದರ ಸಂಬಂಧಿ ಮಹಿಳೆ ಜತೆ ಪಿಎಸ್​ಐ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು PSI ಮಗ ರಾಹುಲ್ ಮಹಿಳೆಯ ಮನೆಗೆ ಹೋಗಿ ಆವಾಜ್ ಹಾಕಿದ್ದನಂತೆ. ಈ ವೇಳೆ ಘಟಪ್ರಭಾ ಪೊಲೀಸರನ್ನು ಕರೆಸಿ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಸದರಿ ಮಹಿಳೆ ಈ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ.

ಇದನ್ನು ಓದಿ: ಆರ್ಯ ಸಮಾಜ ನೀಡಿದ ವಿವಾಹ ಸರ್ಟಿಫಿಕೇಟ್​​ಗೆ ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್

ಪೊಲೀಸರನ್ನ ಕರೆಸಿ ನನ್ನ ಮೇಲೆ ಹಲ್ಲೆ ಮಾಡಿಸಿದ್ದಾರೆಂದು PSI ಮಗ ರಾಹುಲ್ ಸ್ವತಃ ಆರೋಪ ಮಾಡಿದ್ದಾನೆ. ಹಲ್ಲೆಯಿಂದ 1 ವಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೆ ಎಂದಿರುವ ರಾಹುಲ್, ಮೂವರು ಪೊಲೀಸರು, ತಂದೆ ಮತ್ತು ಮಹಿಳೆಯ ವಿರುದ್ಧ ಎಸ್‌ಪಿ ಲಕ್ಷ್ಮಣ ನಿಂಬರಗಿಗೆ ದೂರು ನೀಡಿದ್ದ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಇದನ್ನು ಓದಿ: ಯುವಕರನ್ನು ಕಾಡುತ್ತಿರುವ ಪರಿಧಮನಿ ಕಾಯಿಲೆ ಬಗ್ಗೆ ಉಪಯುಕ್ತ ಮಾಹಿತಿ

Published On - 6:06 pm, Fri, 3 June 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ