AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗನ ಮೇಲೆ PSI ಹಲ್ಲೆ? ಹಲ್ಲೆ ಮಾಡಿದ ಕಾನ್ಸ್​ಟೇಬಲ್​​ ಸಸ್ಪೆಂಡ್​

belagavi sp: ಸಹೋದರ ಸಂಬಂಧಿ ಮಹಿಳೆ ಜತೆ ಪಿಎಸ್​ಐ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು PSI ಮಗ ರಾಹುಲ್ ಮಹಿಳೆಯ ಮನೆಗೆ ಹೋಗಿ ಆವಾಜ್ ಹಾಕಿದ್ದನಂತೆ. ಈ ವೇಳೆ ಘಟಪ್ರಭಾ ಪೊಲೀಸರನ್ನು ಕರೆಸಿ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಸದರಿ ಮಹಿಳೆ ಈ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ.

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗನ ಮೇಲೆ PSI ಹಲ್ಲೆ? ಹಲ್ಲೆ ಮಾಡಿದ ಕಾನ್ಸ್​ಟೇಬಲ್​​ ಸಸ್ಪೆಂಡ್​
ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗನ ಮೇಲೆ PSI ಹಲ್ಲೆ? ಹಲ್ಲೆ ಮಾಡಿದ ಕಾನ್ಸ್​ಟೇಬಲ್​​ ಸಸ್ಪೆಂಡ್​
TV9 Web
| Edited By: |

Updated on:Jun 03, 2022 | 6:08 PM

Share

ಬೆಳಗಾವಿ: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗನ ಮೇಲೆ ಪೊಲೀಸ್ ಸಬ್​ ಇನ್ಸ್​​ಪೆಕ್ಟರ್​​ (PSI) ಹಲ್ಲೆ ಮಾಡಿಸಿರುವ ಪ್ರಕರಣ ವರದಿಯಾಗಿದ್ದು, PSI ಮಗನ ಮೇಲೆ ಪೊಲೀಸರಿಂದ ಹಲ್ಲೆ ಮಾಡಿಸಿದ್ದರು ಎನ್ನಲಾಗಿತ್ತು. ಇದೀಗ PSI ಆಣತಿಯಂತೆ ಹಲ್ಲೆ ಮಾಡಿದ್ದ ಕಾನ್ಸ್​ಟೇಬಲ್​​ ನನ್ನು ಸಸ್ಪೆಂಡ್​ ಮಾಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿ ಜಿಲ್ಲೆ ಘಟಪ್ರಭಾ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್​​ ಶಿವಾನಂದ ಪತ್ತಾರನನ್ನು ಅಮಾನತು ಮಾಡಿ ಎಸ್​ಪಿ ಲಕ್ಷ್ಮಣ ನಿಂಬರಗಿ ಆದೇಶಿಸಿದ್ದಾರೆ. ಕುಲಗೋಡ ಠಾಣೆ ಪಿಎಸ್‌ಐ ಸಿದ್ದಪ್ಪ ಕರನಿಂಗ್ ಮಗ ರಾಹುಲ್ ಮೇಲೆ ಹಲ್ಲೆ ನಡೆಸಿರುವ ಪೊಲೀಸ್​ ಅಧಿಕಾರಿ. ಮೇ 23ರಂದು ಕೊಣ್ಣೂರ ಗ್ರಾಮದಲ್ಲಿ ರಾಹುಲ್ ಮೇಲೆ ಹಲ್ಲೆ ನಡೆದಿತ್ತು ಎನ್ನಲಾಗಿದೆ.

ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿರುವ ಮಹಿಳೆ:

ಸಹೋದರ ಸಂಬಂಧಿ ಮಹಿಳೆ ಜತೆ ಪಿಎಸ್​ಐ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು PSI ಮಗ ರಾಹುಲ್ ಮಹಿಳೆಯ ಮನೆಗೆ ಹೋಗಿ ಆವಾಜ್ ಹಾಕಿದ್ದನಂತೆ. ಈ ವೇಳೆ ಘಟಪ್ರಭಾ ಪೊಲೀಸರನ್ನು ಕರೆಸಿ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಸದರಿ ಮಹಿಳೆ ಈ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ.

ಇದನ್ನು ಓದಿ: ಆರ್ಯ ಸಮಾಜ ನೀಡಿದ ವಿವಾಹ ಸರ್ಟಿಫಿಕೇಟ್​​ಗೆ ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್

ಪೊಲೀಸರನ್ನ ಕರೆಸಿ ನನ್ನ ಮೇಲೆ ಹಲ್ಲೆ ಮಾಡಿಸಿದ್ದಾರೆಂದು PSI ಮಗ ರಾಹುಲ್ ಸ್ವತಃ ಆರೋಪ ಮಾಡಿದ್ದಾನೆ. ಹಲ್ಲೆಯಿಂದ 1 ವಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೆ ಎಂದಿರುವ ರಾಹುಲ್, ಮೂವರು ಪೊಲೀಸರು, ತಂದೆ ಮತ್ತು ಮಹಿಳೆಯ ವಿರುದ್ಧ ಎಸ್‌ಪಿ ಲಕ್ಷ್ಮಣ ನಿಂಬರಗಿಗೆ ದೂರು ನೀಡಿದ್ದ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಇದನ್ನು ಓದಿ: ಯುವಕರನ್ನು ಕಾಡುತ್ತಿರುವ ಪರಿಧಮನಿ ಕಾಯಿಲೆ ಬಗ್ಗೆ ಉಪಯುಕ್ತ ಮಾಹಿತಿ

Published On - 6:06 pm, Fri, 3 June 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ