AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಮನೆಗೆ ಪಡಿತರ ತಲುಪಿಸುವ ಯೋಜನೆ ಕೈಬಿಟ್ಟ ಸರ್ಕಾರ: ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್ ವಿತರಣೆ

ಬಡ ಕುಟಂಬಗಳಿಗೆ ಏಪ್ರಿಲ್​ 1ರಿಂದ ಪ್ರಾಯೋಗಿಕವಾಗಿ ಪೊರ್ಟಿಫೈಡ್ ರೈಸ್ ವಿತರಿಸಲಾಗುವುದು. ಮೊದಲಿಗೆ ಯಾದಗಿರಿ, ಕಲಬುರಗಿ, ಬೀದರ್​ ಜಿಲ್ಲೆಯಲ್ಲಿ ವಿತರಣೆ ಮಾಡಲಾಗುವುದು. ಬಳಿಕ ರಾಜ್ಯಾದ್ಯಂತ ಪೊರ್ಟಿಫೈಡ್ ರೈಸ್ ವಿತರಣೆ ಮಾಡುತ್ತೇವೆ ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ಸಚಿವ ಉಮೇಶ್​ ಕತ್ತಿ ತಿಳಿಸಿದ್ದಾರೆ.

ಮನೆಮನೆಗೆ ಪಡಿತರ ತಲುಪಿಸುವ ಯೋಜನೆ ಕೈಬಿಟ್ಟ ಸರ್ಕಾರ: ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್ ವಿತರಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 05, 2022 | 6:44 PM

Share

ಬೆಳಗಾವಿ: ಮನೆಮನೆಗೆ ಪಡಿತರ ತಲುಪಿಸುವ ಯೋಜನೆಯನ್ನು ಸರ್ಕಾರ(State Government) ಕೈಬಿಟ್ಟಿದೆ. ಆಂಧ್ರ ಪ್ರದೇಶ, ತಮಿಳುನಾಡಿನಲ್ಲಿ ಈ ಯೋಜನೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಈಗಿರುವ ಪಡಿತರ( Ration) ಅಂಗಡಿಗಳ ಮೂಲಕವೇ ಕರ್ನಾಟಕದಲ್ಲಿ ರೇಷನ್ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿಆಹಾರ ಹಾಗೂ ಅರಣ್ಯ ಸಚಿವ ಉಮೇಶ್​ ಕತ್ತಿ(Umesh Katti) ಹೇಳಿದ್ದಾರೆ.

ಬಡ ಕುಟಂಬಗಳಿಗೆ ಏಪ್ರಿಲ್​ 1ರಿಂದ ಪೊರ್ಟಿಫೈಡ್ ರೈಸ್ ವಿತರಣೆ

ಬಡ ಕುಟಂಬಗಳಿಗೆ ಏಪ್ರಿಲ್​ 1ರಿಂದ ಪ್ರಾಯೋಗಿಕವಾಗಿ ಪೊರ್ಟಿಫೈಡ್ ರೈಸ್ ವಿತರಿಸಲಾಗುವುದು. ಮೊದಲಿಗೆ ಯಾದಗಿರಿ, ಕಲಬುರಗಿ, ಬೀದರ್​ ಜಿಲ್ಲೆಯಲ್ಲಿ ವಿತರಣೆ ಮಾಡಲಾಗುವುದು. ಬಳಿಕ ರಾಜ್ಯಾದ್ಯಂತ ಪೊರ್ಟಿಫೈಡ್ ರೈಸ್ ವಿತರಣೆ ಮಾಡುತ್ತೇವೆ ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ಸಚಿವ ಉಮೇಶ್​ ಕತ್ತಿ ತಿಳಿಸಿದ್ದಾರೆ.

ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಕುರಿತು ಸಚಿವ ಕತ್ತಿ ಪ್ರಶಂಸೆ

ಬಜೆಟ್​ನಲ್ಲಿ ಕೃಷಿಗೆ 8 ಸಾವಿರ ಕೋಟಿ ನೀಡಿ ರೈತ ಪರ ಬಜೆಟ್ ಮಂಡಿಸಿದ್ದಾರೆ. ಆದರೆ ವಿರೋಧ ಪಕ್ಷದ ನಾಯಕರು ಬೋಗಸ್ ಬಜೆಟ್ ಎಂದಿದ್ದಾರೆ. ರಾಜ್ಯದಲ್ಲಿ ಜನ ಪರ ಬಜೆಟ್ ಸಿಎಂ ಮಂಡಿಸಿದ್ದಾರೆ. ರಾಜ್ಯಕ್ಕೆ ಬೇಕಾದ ಸೌಲಭ್ಯಗಳನ್ನು ಒದಗಿಸುವ ಬಜೆಟ್ ಮಂಡಿಸಿದ್ದಾರೆ. ನೀರಾವರಿ ಯೋಜನೆಗೆ 25 ಸಾವಿರ ಕೋಟಿ ರೂಪಾಯಿಗಳ ಬಜೆಟ್ ನೀಡಲಾಗಿದೆ. ಹಿಡಕಲ್ ಜಲಾಶಯ ಅಭಿವೃದ್ಧಿ ಪಡಿಸಲು 148 ಕೋಟಿ ರೂಪಾಯಿ ನೀಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಸಾಲ ಮಾಡಿಲ್ಲ. ಸಿದ್ದರಾಮಯ್ಯ ಸರಕಾರದಲ್ಲಿ ಸಾಲ ಮಾಡಲಾಗಿದೆ. ಸಿದ್ದರಾಮಯ್ಯ ಸರಕಾರದಲ್ಲಿದ್ದ ಸಾಲ ಕೊರೊನಾ ಸಂದರ್ಭದಲ್ಲಿ ಆದ ಸಾಲ ತೀರಿಸುವ ಜವಾಬ್ದಾರಿ ಸರಕಾರದ ಮೇಲಿದೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಈ ರಾಜ್ಯಗಳಲ್ಲಿ ಲಸಿಕೆ ಹಾಕದವರಿಗೆ ಉಚಿತ ಕೊವಿಡ್ ಚಿಕಿತ್ಸೆ ಇಲ್ಲ, ಪಡಿತರ ಮತ್ತು ಪಿಂಚಣಿಯೂ ಸಿಗಲ್ಲ; ಯಾವ ರಾಜ್ಯ ಯಾವ ರೀತಿಯ ಕ್ರಮ ಕೈಗೊಂಡಿದೆ?

ಮಂಡ್ಯದಲ್ಲಿ ಜಪ್ತಿ ಮಾಡಿದ್ದ ಪಡಿತರ ಅಕ್ಕಿ ರಾತ್ರೋರಾತ್ರಿ ಸಾಗಾಟ; ಪೊಲೀಸರ ವಿರುದ್ಧ ದೂರು ದಾಖಲು

Published On - 6:38 pm, Sat, 5 March 22

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್