AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಪ್ರವಾಹಕ್ಕೆ ರಸ್ತೆ ಸಂಪರ್ಕ ಬಂದ್; ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಓಡಾಟ

ಬೆಳಗಾವಿ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ 44ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡು ರಸ್ತೆ ಸಾರಿಗೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ಪ್ರಯಾಣಿರ ಅನುಕೂಲಕ್ಕಾಗಿ ವಿಶೇಷ ಪ್ಯಾಸೆಂಜರ್ ರೈಲು ಓಡಾಟ ನಡೆಸಲಿದೆ.

ಭಾರಿ ಪ್ರವಾಹಕ್ಕೆ ರಸ್ತೆ ಸಂಪರ್ಕ ಬಂದ್; ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಓಡಾಟ
ರೈಲು
ಆಯೇಷಾ ಬಾನು
|

Updated on: Aug 01, 2024 | 8:51 AM

Share

ಬೆಳಗಾವಿ, ಆಗಸ್ಟ್.01: ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ ಆಗುತ್ತಿದ್ದು, ಸಪ್ತ ನದಿಗಳು ಹರಿಯುವ ಬೆಳಗಾವಿ (Belagavi) ಜಿಲ್ಲೆಯಲ್ಲಿ ಪ್ರವಾಹ ಎದುರಾಗಿದೆ. ಗ್ರಾಮಗಳು, ಸಾವಿರಾರು ಎಕರೆ ಜಮೀನು, ಸೇತುವೆಗಳು ಮುಳುಗಿ ಜನರ ಬದುಕು ಬೀದಿಗೆ ಬಂದಿದೆ. ಇನ್ನು ಕೃಷ್ಣಾ ನದಿಯಿಂದ 3 ಲಕ್ಷ ಕ್ಯೂಸೆಕ್ ನೀರು ಮತ್ತು ಘಟಪ್ರಭಾದಿಂದ 73 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಹರಿಬಿಡುತ್ತಿರುವ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ 44ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡು ರಸ್ತೆ ಸಾರಿಗೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ಪ್ರಯಾಣಿರ ಅನುಕೂಲಕ್ಕಾಗಿ ವಿಶೇಷ ಪ್ಯಾಸೆಂಜರ್ ರೈಲು ಓಡಾಟ ನಡೆಸಲಿದೆ.

ಭಾರಿ ಮಳೆಯಿಂದಾಗಿ ರಸ್ತೆ ಮಾರ್ಗ ಸ್ಥಗಿತಗೊಂಡಿದ್ದು ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ಪ್ರತಿ ದಿನ ಪ್ರಯಾಣ ಬೆಳೆಸುತ್ತಿದ್ದ ಪ್ರಯಾಣಿಕರಿಗೆ ಅನುಕೂಲವಾಗಲೆಂದು ದಕ್ಷಿಣ ನೈರುತ್ಯ ರೈಲ್ವೆ ಬೆಳಗಾವಿ-ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು ಓಡಾಟದ ಸೌಕರ್ಯ ಕಲ್ಪಿಸಿದೆ. ಆಗಸ್ಟ್ 1 ರಿಂದ 4ರ ವರೆಗೆ ಪ್ಯಾಸೆಂಜರ್ ವಿಶೇಷ ರೈಲು ಓಡಾಡಲಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ಆಗಸ್ಟ್ 6ರವರೆಗೆ ಭಾರಿ ಮಳೆ

ಪ್ಯಾಸೆಂಜರ್ ವಿಶೇಷ ರೈಲು ವೇಳಾಪಟ್ಟಿ

  • ಬೆಳಗಾವಿ-ಮೀರಜ್ ರೈಲು ಆ-01 (07301) ಮುಂಜಾನೆ 6 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಮು. 9ಕ್ಕೆ ಮೀರಜ್ ನಿಲ್ದಾಣ ತಲುಪಲಿದೆ.
  • ಮೀರಜ್-ಬೆಳಗಾವಿ ರೈಲು ಸಂಖ್ಯೆ (07302) ಮುಂಜಾನೆ 9.50ಕ್ಕೆ ಮೀರಜ್​ನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.
  • ಬೆಳಗಾವಿ-ಮೀರಜ್ ರೈಲು ಆ.01ರ ಮಧ್ಯಾಹ್ನ 01.30 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಸಂಜೆ 04.30ಕ್ಕೆ ಮೀರಜ್ ತಲುಪಲಿದೆ.
  • ಮೀರಜ್-ಬೆಳಗಾವಿ ರೈಲು ಆ.01 ಸಂಜೆ 05.35 ಕ್ಕೆ ಮೀರಜ್​ನಿಂದ ಹೊರಟು ರಾತ್ರಿ 08.35 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.ಆಗಸ್ಟ್ 01ರಿಂದ ಆಗಸ್ಟ್ 04ರ ವರೆಗೆ ಬೆಳಗಾವಿ-ಮೀರಜ್ ರೈಲು ದಿನಕ್ಕೆ 2 ಬಾರಿ ಓಡಾಟ ನಡೆಸಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ