AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ನ್ಯಾಯಾಲಯಕ್ಕೆ ಅಣ್ಣಾಮಲೈ: ಭೂಗತ ಪಾತಕಿ ಬನ್ನಂಜೆ ರಾಜ ವಿರುದ್ಧ ಸಾಕ್ಷ್ಯ

ಪೊಲೀಸ್ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದಿದ್ದ ಅಣ್ಣಾಮಲೈ ಉದ್ಯಮಿ ಆರ್.ಎನ್.ನಾಯಕ್ ಕೊಲೆ ಪ್ರಕರಣದ ತನಿಖಾಧಿಕಾರಿಯೂ ಆಗಿದ್ದರು.

ಬೆಳಗಾವಿ ನ್ಯಾಯಾಲಯಕ್ಕೆ ಅಣ್ಣಾಮಲೈ: ಭೂಗತ ಪಾತಕಿ ಬನ್ನಂಜೆ ರಾಜ ವಿರುದ್ಧ ಸಾಕ್ಷ್ಯ
ನಿವೃತ್ತ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಮತ್ತು ಕೊಲೆ ಆರೋಪಿ ಬನ್ನಂಜೆ ರಾಜ
TV9 Web
| Edited By: |

Updated on:Dec 29, 2021 | 7:37 PM

Share

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆ ಅಂಕೋಲದ ಉದ್ಯಮಿ ಆರ್.ಎನ್.ನಾಯಕ್ ಕೊಲೆ ಪ್ರಕರಣದ ಆರೋಪಿ ಬನ್ನಂಜೆ ರಾಜಾ ವಿರುದ್ಧ ನಿವೃತ್ತ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ (K Annamalai) ಬುಧವಾರ ಬೆಳಗಾವಿಯ ಕೋಕಾ ನ್ಯಾಯಾಲಯದಲ್ಲಿ (Control of Organized Crimes Act – COCA) ಸಾಕ್ಷ್ಯ ಹೇಳಿದರು. ಸಾಕ್ಷ್ಯ ನುಡಿಯಲೆಂದು ಬಂದಿದ್ದ ಅಣ್ಣಾಮಲೈ ಇಡೀ ದಿನ ಕಟಕಟೆಯಲ್ಲಿ ನಿಂತಿದ್ದರು. ಪೊಲೀಸ್ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದಿದ್ದ ಅಣ್ಣಾಮಲೈ ಉದ್ಯಮಿ ಆರ್.ಎನ್.ನಾಯಕ್ ಕೊಲೆ ಪ್ರಕರಣದ ತನಿಖಾಧಿಕಾರಿಯೂ ಆಗಿದ್ದರು. ಎಡಿಜಿಪಿ ಪ್ರತಾಪ್ ರೆಡ್ಡಿ ಮತ್ತು ಭಾಸ್ಕರ್ ರಾವ್ ಸಹ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇದು ರಾಜ್ಯದಲ್ಲಿ ದಾಖಲಾಗಿದ್ದ ಮೊದಲ ಕೋಕಾ ಪ್ರಕರಣವಾಗಿತ್ತು. ರಾಜ್ಯದಲ್ಲಿ ಪ್ರಸ್ತುತ 17 ಕೋಕಾ ಪ್ರಕರಣಗಳು ಬಾಕಿಯಿವೆ.

ಉಡುಪಿ ಜಿಲ್ಲೆ ಮಲ್ಪೆ ಸಮೀಪದ ಕಲ್ಮಾಡಿಯ ಭೂಗತ ಪಾತಕಿ ಬನ್ನಂಜೆ ರಾಜನನ್ನು 2015ರಲ್ಲಿ ಕೋಕಾ ಕಾಯ್ದೆಯಡಿ ಮೊರಾಕ್ಕೊದಲ್ಲಿ ಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳುಹಿಸಲಾಗಿತ್ತು. ಇವನ ವಿರುದ್ಧ ಕೊಲೆ, ಶೂಟೌಟ್‌, ದರೋಡೆ ಸೇರಿದಂತೆ 15 ಕ್ರಿಮಿನಲ್ ಪ್ರಕರಣಗಳಿವೆ. ಆಗಸ್ಟ್ 27, 2018ರಂದು ತಾಯಿ ವಿಲಾಸಿನಿ ಶೆಟ್ಟಿಗಾರ್ ಮೃತಪಟ್ಟಾಗ ಪರೋಲ್ ಮೇಲೆ ಬಂದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ. ಬನ್ನಂಜೆ ರಾಜನ ಸಂಬಂಧಿಗಳು ಈಗಲೂ ಉಡುಪಿಯಲ್ಲಿದ್ದಾರೆ. ಬನ್ನಂಜೆ ರಾಜ ಜೈಲಿನಲ್ಲಿದ್ದರೂ ಸಹಚರರ ಮೂಲಕ ಆಗಾಗ ಉದ್ಯಮಿಗಳಿಗೆ ಬೆದರಿಕೆ ಹಾಕಿಸುತ್ತಿದ್ದ ಎಂಬ ಆರೋಪಗಳು ಕೇಳಿಬಂದಿದ್ದವು. ಬ್ರಹ್ಮಾವರದ ಉದ್ಯಮಿ ರತ್ನಾಕರ ಶೆಟ್ಟಿ ಎಂಬುವರಿಗೆ ಹಫ್ತಾ ನೀಡುವಂತೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಾರ್ಚ್‌ 22, 2019ರಂದು ಬನ್ನಂಜೆ ರಾಜನ ಸಹಚರರನ್ನು ಬಂಧಿಸಲಾಗಿತ್ತು.

ಮಂಗಳೂರು ಮುಲ್ಕಿ ಕೊಲ್ನಾಡು ಕೆಎಸ್ ರಾವ್ ನಗರ ನಿವಾಸಿ ಶಶಿ ಪೂಜಾರಿ ಯಾನೆ ಶಾಡೋ (28), ರವಿಚಂದ್ರ ಪೂಜಾರಿ ಯಾನೆ ವಿಕ್ಕಿ ಪೂಜಾರಿ (30), ಮಂಗಳೂರು ಪೆರ್ಮಂಕಿ ಉಲಾಯಿಬೆಟ್ಟು ಪಟ್ರಕೋಡಿ ಹೌಸ್ ನಿವಾಸಿ ಧನರಾಜ್ ಪೂಜಾರಿ ಯಾನೆ ಧನರಾಜ್ ಯಾನೆ ರಾಕ್ (26), ಕೊಡವೂರು ಗ್ರಾಮದ ಮಲ್ಪೆ ಕೊಳದ ಯಶಸ್ವಿನಿ ಐಸ್ ಪ್ಲಾಂಟ್ ನಿವಾಸಿ ಧನರಾಜ್ ಸಾಲ್ಯಾನ್ ಯಾನೆ ಧನು ಕೊಳ (30) ಹಾಗೂ ಮಲ್ಪೆ ಸರಕಾರಿ ಪಿ.ಯು. ಕಾಲೇಜು ಬಳಿ ನಾರಾಯಣಗುರು ಬಿಲ್ಲವ ಸಮಾಜ ಸೇವಾ ಸಮಿತಿ ಹತ್ತಿರ ನಿವಾಸಿ ಉಲ್ಲಾಸ್ ಶೆಣೈ ಯಾನೆ ಉಲ್ಲಾಸ್ (27) ಬೆದರಿಕೆ ಪ್ರಕರಣದಲ್ಲಿ ಬಂಧಿತರು.ಇದನ್ನೂ ಓದಿ: K Annamalai: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಕ ಇದನ್ನೂ ಓದಿ: ಸೋಲುಗಳು ಜೀವನದ ಒಂದು ಭಾಗ, ಇಂಥ ಸೋಲುಗಳನ್ನು ಜೀವನದಲ್ಲಿ ಬಹಳ ನೋಡಿದ್ದೇನೆ: ಕೆ.ಅಣ್ಣಾಮಲೈ ಟ್ವೀಟ್

Published On - 7:37 pm, Wed, 29 December 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ