AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಪತ್ನಿ ಜತೆ ಅನೈತಿಕ ಸಂಬಂಧ ಆರೋಪ, ಯುವಕನ ಹತ್ಯೆಗೈದ ಪತಿ

ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನ ಆಕೆಯ ಗಂಡ ಯಲ್ಲಪ್ಪ ಕಸೊಳ್ಳಿ ಎಂಬಾತ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ. ರಮೇಶ್ ಗುಂಜಗಿ(24) ಕೊಲೆಯಾದ ಯುವಕ.

Belagavi News: ಪತ್ನಿ ಜತೆ ಅನೈತಿಕ ಸಂಬಂಧ ಆರೋಪ, ಯುವಕನ ಹತ್ಯೆಗೈದ ಪತಿ
ಮೃತ ಯುವಕ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 18, 2023 | 10:11 AM

Share

ಬೆಳಗಾವಿ: ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನ ಆಕೆಯ ಗಂಡ ಯಲ್ಲಪ್ಪ ಕಸೊಳ್ಳಿ ಎಂಬಾತ ಬರ್ಬರವಾಗಿ ಕೊಲೆ(Murder) ಮಾಡಿರುವ ಘಟನೆ ಜಿಲ್ಲೆಯ ಯರಗಟ್ಟಿ(Yaragatti) ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ. ರಮೇಶ್ ಗುಂಜಗಿ(24) ಕೊಲೆಯಾದ ಯುವಕ. ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದ ನಿವಾಸಿಯಾಗಿರುವ ರಮೇಶ್ ಗುಂಜಗಿ, ಎರಡು ತಿಂಗಳ ಹಿಂದೆ, ಮನೆ ಪಕ್ಕದ ಸಾವಾಂಕ್ಕಾ ಎಂಬುವವರ ಜತೆಗೆ ಸಂಬಂಧವಿಟ್ಟುಕೊಂಡಿದ್ದನಂತೆ. ಈ ವಿಚಾರ ಗೊತ್ತಾಗಿ ಗಂಡ ಯಲ್ಲಪ್ಪ ಕಸೊಳ್ಳಿ ಮತ್ತು ಆತನ ಗೆಳೆಯರು ಸೇರಿ ರಮೇಶ್ ಎಂಬಾತನನ್ನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.

ಅನೈತಿಕ ಸಂಬಂಧ ಗೊತ್ತಾಗಿ ತಿಂಗಳ ಹಿಂದೆ ರಾಜಿ ಪಂಚಾಯಿತಿ

ಇನ್ನು ಇವರಿಬ್ಬರ ಅನೈತಿಕ ಸಂಬಂಧ ಗೊತ್ತಾಗಿ ಒಂದು ತಿಂಗಳ ಹಿಂದೆ ಗ್ರಾಮದಲ್ಲಿ ರಾಜಿ ಪಂಚಾಯಿತಿ ಮಾಡಲಾಗಿತ್ತು. ರಮೇಶ್ ಮಾಡಿದ ತಪ್ಪಿಗೆ ಯಲ್ಲಪ್ಪನಿಗೆ ಎರಡೂವರೆ ಲಕ್ಷ ದಂಡ ಕೂಡ ಕೊಟ್ಟಿದ್ದ. ಈ ವೇಳೆ ಸಾಂವಕ್ಕಾ ಗಂಡನನ್ನ ಬಿಟ್ಟು ರಮೇಶ್ ಮನೆಗೆ ಬಂದಿದ್ದಳು. ಹೀಗೆ ಬಂದು 15 ದಿನಕ್ಕೆ ಮತ್ತೆ ಗಂಡನ ಜತೆಗೆ ಸಂಪರ್ಕಕ್ಕೆ ಬಂದು, ತವರು ಮನೆ ಸೇರಿದ್ದಳು. ಇದೀಗ ರಮೇಶ್ ಬಿಟ್ಟು ಬಂದ ಸಾಂವಕ್ಕಾ, ಗಂಡನ ಜತೆಗೆ ಸೇರಿಕೊಂಡು ಜೊತೆಗೆ ಆತನ 6 ಜನ ಸೇರಿ ಕೊಲೆ ಮಾಡಿಸಿದ್ದಾರೆಂದು ಕೊಲೆಯಾದ ರಮೇಶ್ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಳಗಾವಿ: ರಾತ್ರಿ ಮನೆಯಿಂದ ಆಚೆ ಹೋದವ ಬರ್ಬರವಾಗಿ ಕೊಲೆಯಾದ, ಆಂಟಿಗಾಗಿ ಬಿತ್ತು ಹೆಣ

ಗೂಡ್ಸ್​ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

ಮಂಡ್ಯ: ಗೂಡ್ಸ್​ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೋಡಿಹಳ್ಳಿ ವೃತ್ತದ ಬಳಿ ನಡೆದಿದೆ. ಮರಿಲಿಂಗಯ್ಯ(65) ಮೃತ ವ್ಯಕ್ತಿ. ಬಸ್​ನಿಂದ ಇಳಿದು ರಸ್ತೆ ದಾಟುವಾಗ ಗೂಡ್ಸ್​ ವಾಹನ ಡಿಕ್ಕಿಯಾಗಿತ್ತು. ಈ ವೇಳೆ ಮರಿಲಿಂಗಯ್ಯ ತಲೆಗೆ ತೀವ್ರ ಗಾಯವಾಗಿತ್ತು. ಕೂಡಲೇ ಆತನನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಹಲಗೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!