AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಪತ್ನಿ ಜತೆ ಅನೈತಿಕ ಸಂಬಂಧ ಆರೋಪ, ಯುವಕನ ಹತ್ಯೆಗೈದ ಪತಿ

ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನ ಆಕೆಯ ಗಂಡ ಯಲ್ಲಪ್ಪ ಕಸೊಳ್ಳಿ ಎಂಬಾತ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ. ರಮೇಶ್ ಗುಂಜಗಿ(24) ಕೊಲೆಯಾದ ಯುವಕ.

Belagavi News: ಪತ್ನಿ ಜತೆ ಅನೈತಿಕ ಸಂಬಂಧ ಆರೋಪ, ಯುವಕನ ಹತ್ಯೆಗೈದ ಪತಿ
ಮೃತ ಯುವಕ
ಕಿರಣ್ ಹನುಮಂತ್​ ಮಾದಾರ್
|

Updated on: Jun 18, 2023 | 10:11 AM

Share

ಬೆಳಗಾವಿ: ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನ ಆಕೆಯ ಗಂಡ ಯಲ್ಲಪ್ಪ ಕಸೊಳ್ಳಿ ಎಂಬಾತ ಬರ್ಬರವಾಗಿ ಕೊಲೆ(Murder) ಮಾಡಿರುವ ಘಟನೆ ಜಿಲ್ಲೆಯ ಯರಗಟ್ಟಿ(Yaragatti) ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ. ರಮೇಶ್ ಗುಂಜಗಿ(24) ಕೊಲೆಯಾದ ಯುವಕ. ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದ ನಿವಾಸಿಯಾಗಿರುವ ರಮೇಶ್ ಗುಂಜಗಿ, ಎರಡು ತಿಂಗಳ ಹಿಂದೆ, ಮನೆ ಪಕ್ಕದ ಸಾವಾಂಕ್ಕಾ ಎಂಬುವವರ ಜತೆಗೆ ಸಂಬಂಧವಿಟ್ಟುಕೊಂಡಿದ್ದನಂತೆ. ಈ ವಿಚಾರ ಗೊತ್ತಾಗಿ ಗಂಡ ಯಲ್ಲಪ್ಪ ಕಸೊಳ್ಳಿ ಮತ್ತು ಆತನ ಗೆಳೆಯರು ಸೇರಿ ರಮೇಶ್ ಎಂಬಾತನನ್ನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.

ಅನೈತಿಕ ಸಂಬಂಧ ಗೊತ್ತಾಗಿ ತಿಂಗಳ ಹಿಂದೆ ರಾಜಿ ಪಂಚಾಯಿತಿ

ಇನ್ನು ಇವರಿಬ್ಬರ ಅನೈತಿಕ ಸಂಬಂಧ ಗೊತ್ತಾಗಿ ಒಂದು ತಿಂಗಳ ಹಿಂದೆ ಗ್ರಾಮದಲ್ಲಿ ರಾಜಿ ಪಂಚಾಯಿತಿ ಮಾಡಲಾಗಿತ್ತು. ರಮೇಶ್ ಮಾಡಿದ ತಪ್ಪಿಗೆ ಯಲ್ಲಪ್ಪನಿಗೆ ಎರಡೂವರೆ ಲಕ್ಷ ದಂಡ ಕೂಡ ಕೊಟ್ಟಿದ್ದ. ಈ ವೇಳೆ ಸಾಂವಕ್ಕಾ ಗಂಡನನ್ನ ಬಿಟ್ಟು ರಮೇಶ್ ಮನೆಗೆ ಬಂದಿದ್ದಳು. ಹೀಗೆ ಬಂದು 15 ದಿನಕ್ಕೆ ಮತ್ತೆ ಗಂಡನ ಜತೆಗೆ ಸಂಪರ್ಕಕ್ಕೆ ಬಂದು, ತವರು ಮನೆ ಸೇರಿದ್ದಳು. ಇದೀಗ ರಮೇಶ್ ಬಿಟ್ಟು ಬಂದ ಸಾಂವಕ್ಕಾ, ಗಂಡನ ಜತೆಗೆ ಸೇರಿಕೊಂಡು ಜೊತೆಗೆ ಆತನ 6 ಜನ ಸೇರಿ ಕೊಲೆ ಮಾಡಿಸಿದ್ದಾರೆಂದು ಕೊಲೆಯಾದ ರಮೇಶ್ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಳಗಾವಿ: ರಾತ್ರಿ ಮನೆಯಿಂದ ಆಚೆ ಹೋದವ ಬರ್ಬರವಾಗಿ ಕೊಲೆಯಾದ, ಆಂಟಿಗಾಗಿ ಬಿತ್ತು ಹೆಣ

ಗೂಡ್ಸ್​ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

ಮಂಡ್ಯ: ಗೂಡ್ಸ್​ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೋಡಿಹಳ್ಳಿ ವೃತ್ತದ ಬಳಿ ನಡೆದಿದೆ. ಮರಿಲಿಂಗಯ್ಯ(65) ಮೃತ ವ್ಯಕ್ತಿ. ಬಸ್​ನಿಂದ ಇಳಿದು ರಸ್ತೆ ದಾಟುವಾಗ ಗೂಡ್ಸ್​ ವಾಹನ ಡಿಕ್ಕಿಯಾಗಿತ್ತು. ಈ ವೇಳೆ ಮರಿಲಿಂಗಯ್ಯ ತಲೆಗೆ ತೀವ್ರ ಗಾಯವಾಗಿತ್ತು. ಕೂಡಲೇ ಆತನನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಹಲಗೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ