ಬೆಳಗಾವಿಯಲ್ಲಿ ಬಾಣಂತಿ ಪೂಜಾ ಸಾವಿಗೆ ಕಾರಣ ಕೊಟ್ಟ ರಾಜ್ಯ ಆರೋಗ್ಯ ಇಲಾಖೆ

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಮುಂದುವರೆದಿದೆ. ಒಬ್ಬ ಬಾಣಂತಿ ಹೆರಿಗೆಯ ನಂತರ ಮೃತಪಟ್ಟರೆ, ಇನ್ನೊಬ್ಬರು ಹೆರಿಗೆ ಸಮಯದಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಗಳಿಂದ ಆಸ್ಪತ್ರೆ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿದ್ದು, ತನಿಖೆಗೆ ಆಗ್ರಹಿಸಲಾಗುತ್ತಿದೆ. ರಾಜ್ಯ ಆರೋಗ್ಯ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಳಗಾವಿಯಲ್ಲಿ ಬಾಣಂತಿ ಪೂಜಾ ಸಾವಿಗೆ ಕಾರಣ ಕೊಟ್ಟ ರಾಜ್ಯ ಆರೋಗ್ಯ ಇಲಾಖೆ
ಬೆಳಗಾವಿಯಲ್ಲಿ ಬಾಣಂತಿ ಪೂಜಾ ಸಾವಿಗೆ ಕಾರಣ ತಿಳಿಸಿದ ರಾಜ್ಯ ಆರೋಗ್ಯ ಇಲಾಖೆ
Edited By:

Updated on: Dec 26, 2024 | 9:08 PM

ಬೆಳಗಾವಿ, ಡಿಸೆಂಬರ್​ 26: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ನಾಲ್ಕು ದಿನದ ಅವಧಿಯಲ್ಲಿ ಇಬ್ಬರು ಬಾಣಂತಿಯರು ಸಾವನ್ನಪ್ಪಿರುವುದು (Maternal death) ಸಾಕಷ್ಟು ಅನುಮಾನ ಮೂಡಿಸಿದೆ. ಡಿ.22ರಂದು ಹೆಣ್ಣು ಮಗುವಿಗೆ ಜನ್ಮ ನೀಡಿ ಮಾರನೇ ದಿನ ಓರ್ವ ಬಾಣಂತಿ ಮೃತಪಟ್ಟಿದ್ದರೆ ಇಂದು ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಇದೀಗ ಬಾಣಂತಿ ಪೂಜಾ ಸಾವಿಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಆರೋಗ್ಯ ಇಲಾಖೆ ಮಾಹಿತಿ ಹೀಗಿದೆ

ಬೆಳಗಾವಿಯ ಬಿಮ್ಸ್​ ಮೆಡಿಕಲ್ ಕಾಲೇಜಿನಲ್ಲಿ ಪೂಜಾ ಅಡಿವೆಪ್ಪ ಎಂಬುವರು ಹೆರಿಗೆ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್ 24ರಂದು ಅಡ್ಮಿಟ್ ಆಗಿದ್ದ ಪೂಜಾ ಗಂಭೀರ ಸ್ಥಿತಿಯಲ್ಲಿದ್ದರು. ಆಸ್ಪತ್ರೆಗೆ ದಾಖಲಾದ ವೇಳೆ ಮೂಗು ಮತ್ತು ಬಾಯಿಯಲ್ಲಿ ರಕ್ತಸ್ರಾವವಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾವು: ತರಾತುರಿಯಲ್ಲಿ ಮೃತದೇಹ ಕೊಟ್ಟು ಕಳಿಸಿದ ವೈದ್ಯರು

ಹೆರಿಗೆಯ ದಿನಾಂಕ ಇನ್ನೂ ಒಂದು ತಿಂಗಳು ಮುಂದಿದ್ದು, ಗರ್ಭಿಣಿ ಪೂಜಾ ಅಡಿವೆಪ್ಪ ಖಡಕಬಾವಿ ಸ್ಥಿತಿ ಗಂಭೀರವಾಗಿದ್ದರಿಂದ ಮಗುವಿನ ಜೀವ ಉಳಿಸುವ ನಿಟ್ಟಿನಲ್ಲಿ ಕುಟುಂಬದವರ ಒಪ್ಪಿಗೆ ಪಡೆದು ಸಹಜ ಹೆರಿಗೆ ಮಾಡಿಸಲಾಗಿದೆ. ಬಳಿಕ ಪೂಜಾ ಖಡಕಬಾವಿ ನಿಧನರಾಗಿದ್ದಾರೆ. ಮಗುವನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಡಿ.24ರಂದು ರಾತ್ರಿ ಹೆರಿಗೆ ಆಸ್ಪತ್ರೆಗೆ ದಾಖಲಾಗಿದ್ದ ಜಿಲ್ಲೆಯ ಗೋಕಾಕ್ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಖಡಕಬಾವಿ (25) ಎಂಬ ಬಾಣಂತಿ ನಿನ್ನೆಯಷ್ಟೇ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಬಿಮ್ಸ್​ನಲ್ಲಿ ಮತ್ತೊಬ್ಬ ಬಾಣಂತಿ ಸಾವು: ವೈದ್ಯರ ವಿರುದ್ಧ ಆಕ್ರೋಶ

ಎಂಟು ತಿಂಗಳಿಗೆ ಮಗು ಜನಿಸಿದ್ದು, 1.6ಕೆಜಿ ಯಷ್ಟು ತೂಕ ಇದ್ದ ಕಾರಣಕ್ಕೆ ಮಗುವನ್ನ ಐಸಿಯುವಿಗೆ ಶಿಫ್ಟ್​ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿರುತ್ತೆ. ಇತ್ತ ಬಾಣಂತಿ ಪೂಜಾಗೂ ಕೂಡ ಆರೋಗ್ಯದಲ್ಲಿ ಏರುಪೇರಾಗಿ ಆಕೆಗೂ ಐಸಿಯುವಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿರುತ್ತೆ. ಆದರೆ ಇಂದು ಮಧ್ಯಾಹ್ನದ ವೇಳೆ ಏಕಾಏಕಿ ಪೂಜಾ ಸಾವನ್ನಪ್ಪಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಆಸ್ಪತ್ರೆ ಮುಂಭಾಗದಲ್ಲೇ ಮುಗಿಲುಮುಟ್ಟಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:55 pm, Thu, 26 December 24

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us