AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರೇನು ದೊಡ್ಡವರೂ ಅಲ್ಲ, ಸಣ್ಣವರೂ ಅಲ್ಲ: ಜಾರಕಿಹೊಳಿ ಬ್ರದರ್ಸ್‌ಗೆ ಸಚಿವ ಉಮೇಶ್ ಕತ್ತಿ ಟಾಂಗ್

ಜವಾಬ್ದಾರಿಯುತವಾಗಿ ಎಲ್ಲಾ ತಾಲೂಕುಗಳಲ್ಲಿ ಸರಿಯಾಗಿ ಕೆಲಸ ಮಾಡಿ ಎಂದು ತಿಳಿಸಿದ್ದೇವೆ. ಬೆಳಗಾವಿ ಜಿಲ್ಲಾ ಪಂಚಾಯಿತಿ ಅಧಿಕಾರ ಹಿಡಿಯಲು ನಾವು ಸೇರಿದ್ದೇವೂ. ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಸಚಿವ ಉಮೇಶ್​ ಕತ್ತಿ ಸಮಜಾಯಿಷಿ ನೀಡಿದ್ದಾರೆ.

ಅವರೇನು ದೊಡ್ಡವರೂ ಅಲ್ಲ, ಸಣ್ಣವರೂ ಅಲ್ಲ: ಜಾರಕಿಹೊಳಿ ಬ್ರದರ್ಸ್‌ಗೆ ಸಚಿವ ಉಮೇಶ್ ಕತ್ತಿ ಟಾಂಗ್
ಉಮೇಶ್ ಕತ್ತಿ
TV9 Web
| Edited By: |

Updated on:Jan 24, 2022 | 4:40 PM

Share

ಬೆಳಗಾವಿ: ಸಚಿವ ಉಮೇಶ್ ಕತ್ತಿ(Umesh katti) ನಿವಾಸದಲ್ಲಿ ಜಾರಕಿಹೊಳಿ‌ ಸಹೋದರರನ್ನು ಹೊರಗಿಟ್ಟು ಗೌಪ್ಯ ಸಭೆ ನಡೆಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು (ಜನವರಿ 24) ಮಾತನಾಡಿದ ಸಚಿವ ಉಮೇಶ್ ಕತ್ತಿ, ನಾವು ಯಾರನ್ನೂ ಹೊರಗಿಟ್ಟು ಗೌಪ್ಯ ಸಭೆಯನ್ನು ಮಾಡಿಲ್ಲ. ಅವರೇನು ದೊಡ್ಡವರೂ ಅಲ್ಲ, ಸಣ್ಣವರೂ ಅಲ್ಲ. ಜಿಲ್ಲಾ ಪಂಚಾಯತಿ(Jilla Panchayat) ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಚರ್ಚೆ ಮಾಡುವುದಕ್ಕಾಗಿ ಸಭೆ ನಡೆಸಿದ್ದೇವು. ಜಿಲ್ಲಾ ಪಂಚಾಯತಿಯಲ್ಲಿ ಅಧಿಕಾರ ಹಿಡಿಯಲು ನಾವೆಲ್ಲಾ ಸೇರಿದ್ದೆವು. ಆದರೆ ಕೆಲವರು ಸಭೆಗೆ ಬಂದರು, ಕೆಲವರು ಬರಲಿಲ್ಲ. ಅವರು ಏಕೆ ಸಭೆಗೆ ಬಂದಿಲ್ಲ ಎಂದು ನನಗೆ ಗೊತ್ತಿಲ್ಲ. ನಾನು ಪಕ್ಷ ಸಂಘಟನೆಗಾಗಿ ಸಭೆಯನ್ನು(Meeting) ಮಾಡಿದ್ದೇನೆ ಎಂದು ಜಾರಕಿಹೊಳಿ ಬ್ರದರ್ಸ್‌ಗೆ ಟಾಂಗ್ ನೀಡಿದ್ದಾರೆ.

ಮೊನ್ನೆ ನಮ್ಮ ಅಭ್ಯರ್ಥಿ ಸೋತಿರುವ ಬಗ್ಗೆ ಸವಿಸ್ತಾರವಾಗಿ ಚರ್ಚೆ ಮಾಡಿದ್ದೇವೆ. ಜವಾಬ್ದಾರಿಯುತವಾಗಿ ಎಲ್ಲಾ ತಾಲೂಕುಗಳಲ್ಲಿ ಸರಿಯಾಗಿ ಕೆಲಸ ಮಾಡಿ ಎಂದು ತಿಳಿಸಿದ್ದೇವೆ. ಬೆಳಗಾವಿ ಜಿಲ್ಲಾ ಪಂಚಾಯಿತಿ ಅಧಿಕಾರ ಹಿಡಿಯಲು ನಾವು ಸೇರಿದ್ದೇವೂ. ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಸಚಿವ ಉಮೇಶ್​ ಕತ್ತಿ ಸಮಜಾಯಿಷಿ ನೀಡಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ರಾಜ್ಯದ ಸಿಎಂ ಮಾಡುತ್ತಾರೆ: ಸಚಿವ ಉಮೇಶ್ ಕತ್ತಿ

ನಾನು ಸಚಿವ, ಹೀಗಾಗಿ ನಾನು ಅದಕ್ಕೆ ಉತ್ತರಿಸುವುದಿಲ್ಲ. ಮಂತ್ರಿ ಮಂಡಲವನ್ನು ವಿಸ್ತರಣೆ ಮಾಡುವುದಾಗಲಿ, ಕೈ ಬಿಡುವುದಾಗಲಿ ಸಿಎಂ ಬೊಮ್ಮಾಯಿ ಮಾಡುತ್ತಾರೆ. ಈ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಬಲರಿದ್ದಾರೆ ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.

ಸಿಎಂ ಅವರಿಗೆ ಜವಾಬ್ದಾರಿ ಇದೆ. ಜತೆಗೆ ಹೈಕಮಾಂಡ್ ಕೂಡ ಇದೆ. ಎಲ್ಲರೂ ಕೂಡಿ ಸಂಪುಟ ವಿಸ್ತರಣೆ ಮಾಡುತ್ತಾರೆ. ನಾವು ನಮ್ಮ ಜಿಲ್ಲೆಯಲ್ಲಿ ಮಂತ್ರಿ ಮಂಡಲದ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ಬರುವ ಚುನಾವಣೆಗಳಲ್ಲಿ ನಾವು ಯಾವ ರೀತಿ ಸ್ಪರ್ಧೆ ಮಾಡಿದ್ದೇವೆ. ನಮ್ಮ ಅಭ್ಯರ್ಥಿಗಳನ್ನು ಹೇಗೆ ಗೆಲ್ಲಿಸಬೇಕು ಅಂತಾ ಚರ್ಚೆ ಮಾಡಿದ್ದೇವೆ ಅಷ್ಟೇ ಎಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಚಿವ ಉಮೇಶ್​ ಕತ್ತಿ ವಿಶೇಷಾಧಿಕಾರಿ ಪ್ರಸನ್ನ ಸುಬೇದಾರ್ ವಿರುದ್ಧ ಮತ್ತೊಂದು ಆರೋಪ

ಸರ್ಕಾರಿ ಶಾಲೆಯಲ್ಲಿ ನ್ಯಾನೊ ಉಪಗ್ರಹ ನಿರ್ಮಾಣಕ್ಕೆ 1.90 ಕೋಟಿ ರೂ. ಬಿಡುಗಡೆ: ಸಚಿವ ಸಿಎನ್​ ಅಶ್ವತ್ಥ್​ ನಾರಾಯಣ್​

Published On - 4:08 pm, Mon, 24 January 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ