AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ; ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಮಹಾರಾಷ್ಟ್ರ ಪೊಲೀಸರ ದಾಳಿ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದ ಕೈದಿಯಿಂದ ಬೆದರಿಕೆ ಕರೆಗಳು ಬಂದಿವೆ.

ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ; ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಮಹಾರಾಷ್ಟ್ರ ಪೊಲೀಸರ ದಾಳಿ
ನಿತಿನ್​ ಗಡ್ಕರಿ, ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ
ಆಯೇಷಾ ಬಾನು
ಆಯೇಷಾ ಬಾನು|

Updated on:Mar 25, 2023 | 11:57 AM

Share

ಬೆಳಗಾವಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ(Nitin Gadkari) ಅವರ ಕಚೇರಿಗೆ ಬೆದರಿಕೆ ಕರೆ ಬಂದಿದ್ದು ಈ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ(Hindalga Jail) ಗುರುವಾರ(ಮಾರ್ಚ್ 23) ಸಂಜೆ ಮಹಾರಾಷ್ಟ್ರ ಪೊಲೀಸರು(Maharashtra Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಮಂಗಳವಾರ(ಮಾರ್ಚ್ 21) ಮೂರು ದೂರವಾಣಿ ಕರೆಗಳು ಬಂದಿವೆ.

ಬೆದರಿಕೆ ಕರೆ ಮಾಡಿದವರನ್ನು ಹಿಂಡಲಗಾ ಜೈಲಿನ ಕೈದಿ ಜಯೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ಜಯೇಶ್, ಗಡ್ಕರಿ ಅವರ ಕಚೇರಿ ಸಿಬ್ಬಂದಿಗೆ ಕರೆ ಮಾಡಿ 10 ಕೋಟಿ ರೂಪಾಯಿ ನೀಡದಿದ್ದರೆ ಕೇಂದ್ರ ಸಚಿವರಿಗೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದ. ಜನವರಿ ತಿಂಗಳಲ್ಲೂ ಜಯೇಶ್ ಇದೇ ರೀತಿ ಕಚೇರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ. ಸದ್ಯ ನಾಗಾಪುರ ಪೊಲೀಸರು ಹಿಂಡಲಗಾ ಜೈಲಿಗೆ ಭೇಟಿ ನೀಡಿ ಕೈದಿ ಜಯೇಶ್​ಯಿಂದ ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಬೆದರಿಕೆ ಕರೆಯ ನಂತರ ಗಡ್ಕರಿ ಅವರ ಕಚೇರಿ ಮತ್ತು ನಿವಾಸಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ: Bomb Threat Call: ಅಮಿತಾಭ್​, ಅಂಬಾನಿ, ಧರ್ಮೇಂದ್ರ ಮನೆಯಲ್ಲಿ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ ಕಿಡಿಗೇಡಿ

ನಾಗಾಪುರ ಪೊಲೀಸರು ಬೆಳಗಾವಿ ಪೊಲೀಸರ ಸಹಾಯದಿಂದ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಶೋಧ ಕಾರ್ಯ ನಡೆಸಿದರು. ತಪಾಸಣೆ ವೇಳೆ ಜೈಲಿನ ಆವರಣದಲ್ಲಿ ಎರಡು ಮೊಬೈಲ್ ಫೋನ್‌ಗಳು ಮತ್ತು ಎರಡು ಸಿಮ್ ಕಾರ್ಡ್‌ಗಳು ಪತ್ತೆಯಾಗಿವೆ. ಜನವರಿಯಲ್ಲಿ 10 ಕೋಟಿ ರೂ.ಗೆ ಬೇಡಿಕೆ ಇಟ್ಟು ಸಚಿವರ ಕಚೇರಿಗೆ ಬೆದರಿಕೆ ಕರೆಗಳನ್ನು ಮಾಡಲಾಗಿದೆ. ಸದ್ಯ ಜಯೇಶ್​ನನ್ನು ವಿಚಾರಣೆ ನಡೆಸಲು ಕಸ್ಟಡಿಗೆ ನೀಡುವಂತೆ ಕೋರುತ್ತೇವೆ ಎಂದು ನಾಗ್ಪುರ ಪೊಲೀಸ್ ಅಧಿಕಾರಿ ಅಮಿತೇಶ್ ಕುಮಾರ್ ತಿಳಿಸಿದರು.

2008ರಲ್ಲಿ ಡಕಾಯಿತಿ ವೇಳೆ ನಡೆದ ಕೊಲೆ ಪ್ರಕರಣದಲ್ಲಿ ಜಯೇಶ್‌ಗೆ ಮರಣದಂಡನೆ ವಿಧಿಸಲಾಗಿತ್ತು. ಮರಣದಂಡನೆಯನ್ನು ನಂತರ ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:57 am, Sat, 25 March 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ