AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿ ಉಗುರು ವಿವಾದ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಗೂ ಹುಲಿ ಉಗುರು ಸಂಕಷ್ಟ

Tiger Claw Locket Row: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಕೊರಳಲ್ಲಿ ಹುಲಿ ಉಗುರಿನ ಲಾಕೆಟ್ ಪತ್ತೆಯಾದ ಕೇಸ್ ಬೆನ್ನಲ್ಲೇ ರಾಜ್ಯಾದ್ಯಂತ ಬೇಟೆ ಜೋರಾಗಿದೆ. ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಪುತ್ರ, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್​ಗೂ ಸಂಕಷ್ಟ ಶುರುವಾಗಿದೆ.

ಹುಲಿ ಉಗುರು ವಿವಾದ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಗೂ ಹುಲಿ ಉಗುರು ಸಂಕಷ್ಟ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪುತ್ರ ಮೃಣಾಲ್ ಹೆಬ್ಬಾಳ್ಕರ್
Sahadev Mane
| Edited By: |

Updated on: Oct 26, 2023 | 5:05 PM

Share

ಬೆಳಗಾವಿ, ಅಕ್ಟೋಬರ್​​​ 26: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಕೊರಳಲ್ಲಿ ಹುಲಿ ಉಗುರಿನ (Tiger Claw) ಲಾಕೆಟ್ ಪತ್ತೆಯಾದ ಕೇಸ್ ಬೆನ್ನಲ್ಲೇ ರಾಜ್ಯಾದ್ಯಂತ ಬೇಟೆ ಜೋರಾಗಿದೆ. ಹುಲಿ ಉಗುರಿನ ಪೆಂಡೆಂಟ್ ಧರಿಸಿ ಬಿಲ್ಡಪ್ ಕೊಡುತ್ತಿದ್ದವರಿಗೆ ಅರಣ್ಯ ಇಲಾಖೆ ಶಾಕ್ ಕೊಟ್ಟಿದೆ. ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಮನೆ ಮೇಲೆ ಅರಣ್ಯಾಧಿಕಾರಿಗಳು ಭೇಟಿ ಮಾಡಿ, ಹುಲಿ ಉಗುರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಪುತ್ರ, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್​ಗೂ ಸಂಕಷ್ಟ ಶುರುವಾಗಿದೆ.

ಮೃಣಾಲ್ ಹುಲಿ ಉಗುರು ಇರುವ ಲಾಕೆಟ್ ಧರಿಸಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಮದುವೆ, ಮತ್ತಿತರೆ ಸಮಾರಂಭಗಳಲ್ಲಿ ಲಾಕೆಟ್ ಧರಿಸಿದ್ದ ಫೋಟೋ ವೈರಲ್​ ಆಗಿದೆ. ಹುಲಿಯ 1 ಉಗುರು ಇರುವ ಲಾಕೆಟ್ ಧರಿಸುತ್ತಿದ್ದ. ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಆಗಿದ್ದರೂ ಬೆಳಗಾವಿ ಜಿಲ್ಲಾ ಅರಣ್ಯ ಇಲಾಖೆ ಅಧಿಕಾರಿಗಳು ಜಾಣಮೌನ ವಹಿಸಿದ್ದಾರೆ. ಈ ಕುರಿತಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪುತ್ರ ಮೃಣಾಲ್​ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹುಲಿ ಉಗುರಿನ ಲಾಕೆಟ್ ಧರಿಸಿದ ಹೆಬ್ಬಾಳ್ಕರ್ ಅಳಿಯನ ಫೋಟೋ ವೈರಲ್​​ 

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರಿನ ಲಾಕೆಟ್ ಧರಿಸಿರುವ ಫೋಟೋ ಕೂಡ ವೈರಲ್ ಆಗುತ್ತಿದೆ. ಲಕ್ಷ್ಮೀ ಹೆಬ್ಬಾಳಕರ್ ಅಕ್ಕನ ಮಗಳನ್ನು ಮದುವೆಯಾಗಿರುವ ರಜತ್ ಉಳ್ಳಾಗಡ್ಡಿಮಠ ಧರಿಸಿರುವ ಲಾಕೆಟ್ ಬಗ್ಗೆ ಚರ್ಚೆ ಶುರುವಾಗಿದೆ. ಮದುವೆ ಸಮಯದಲ್ಲಿ ಫೋಟೋ ಶೂಟ್​ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಫೋಟೋ ಈಗ ವೈರಲ್ ಆಗಿದೆ.

ವಿಜುಗೌಡ ಪಾಟೀಲ್ ಪುತ್ರನಿಗೆ ಸಂಕಷ್ಟ

ಇಂದು ವಿಜಯಪುರದಲ್ಲಿ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಪುತ್ರ ಶಾಶ್ವತ ಗೌಡ ಪಾಟೀಲ್ ಧರಿಸುತ್ತಿದ್ದ ಹುಲಿ ಉಗುರಿನ ಲಾಕೆಟ್​ನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಅದನ್ನು ಪರೀಕ್ಷೆಗೆ ಕಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕ ವಿಜುಗೌಡ ಪಾಟೀಲ್ ನಿವಾಸದಲ್ಲಿ ಶೋಧ: ಹುಲಿ ಉಗುರಿನ ಪೆಂಡೆಂಟ್ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

ಈ ಕುರಿತ ಮಾತನಾಡಿರುವ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್, ನಾನು ನಿನ್ನೆಯೇ ನಮ್ಮ ಬಳಿಯ ಉಗುರು ನಕಲಿ ಎಂದು ಹೇಳಿದ್ದೇನೆ. ನನ್ನ ಪುತ್ರ ಹಾಕಿಕೊಂಡಿದ್ದು ನಕಲು ಹುಲಿ ಉಗುರು. ಈ ಕುರಿತು ನಾನೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ. ತನಿಖೆಗೆ ನಾವು ಸಹಕಾರ ನೀಡುತ್ತೇವೆ. ವಾಸ್ತು ಕಾರಣದಿಂದ ಕೆಲ ವರ್ಷಗಳ ಹಿಂದೆ ನಕಲಿ ಹುಲಿ ಉಗುರು ಖರೀದಿ ಮಾಡಿದ್ದೆ. ನಾವೇ ಹುಲಿ ಇದ್ದೇವೆ ನಮಗೆ ಯಾಕೆ ಹುಲಿ ಎಂದಿದ್ದಾರೆ.

ಆರ್ಯವರ್ಧನ್ ಬಳಿಯೂ ಹುಲಿ ಉಗುರು?

ಮತ್ತೊಂದೆಡೆ ಆರ್ಯವರ್ಧನ್ ಗುರೂಜಿ ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಆರೋಪ ಕೇಳಿಬಂದಿದೆ. ಹೀಗಾಗಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಆರ್ಯವರ್ಧನ್ ಗುರೂಜಿ ನಿವಾಸದಲ್ಲೂ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದು, ಚಿನ್ನದಿಂದ ಮಾಡಿದ್ದ ಲಾಕೆಟ್​ನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಚಿನ್ನದ ಅಂಗಡಿಗೆ ತೆಗೆದುಕೊಂಡು ಹೋಗಿರುವ ಅರಣ್ಯಾಧಿಕಾರಿಗಳು, ಚಿನ್ನದ ಲಾಕೆಟ್ ಒಳಗೆ ಇರುವ ಹುಲಿ ಉಗುರನ್ನು ಪರಿಶೀಲನೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ