ಹುಲಿ ಉಗುರು ವಿವಾದ: ಲಕ್ಷ್ಮಿ ಹೆಬ್ಬಾಳ್ಕರ್​ ಪುತ್ರನ ಕೊರಳಲ್ಲೂ ಹುಲಿ ಉಗುರಿನ ಪೆಂಡೆಂಟ್; ಪರಿಶೀಲನೆಗೆ ಡಿಸಿಎಫ್ ಸೂಚನೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರ ಮೃಣಾಲ್​​ ಹೆಬ್ಬಾಳ್ಕರ್​ ಧರಿಸಿರುವ ಹುಲಿ ಉಗುರಿನ ಬಗ್ಗೆ ಶೀಘ್ರದಲ್ಲೇ ಪರಿಶೀಲಿಸಲಾಗುತ್ತದೆ. ಮಾಧ್ಯಮದ ಮೂಲಕ ಸಚಿವರ ಪುತ್ರನ ಪೆಂಡೆಂಟ್ ಬಗ್ಗೆ ಮಾಹಿತಿ ಸಿಕ್ಕಿದೆ. ಹುಲಿ ಉಗುರಿನ ಪೆಂಡೆಂಟ್ ಬಗ್ಗೆ ಪರಿಶೀಲನೆ ನಡೆಸುವಂತೆ ಅರಣ್ಯ ಇಲಾಖೆಯ ಕೆಳಹಂತದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬೆಳಗಾವಿ ಡಿಸಿಎಫ್ ಶಂಕರ ಕಲ್ಲೋಳಕರ್ ಹೇಳಿದರು.

ಹುಲಿ ಉಗುರು ವಿವಾದ: ಲಕ್ಷ್ಮಿ ಹೆಬ್ಬಾಳ್ಕರ್​ ಪುತ್ರನ ಕೊರಳಲ್ಲೂ ಹುಲಿ ಉಗುರಿನ ಪೆಂಡೆಂಟ್; ಪರಿಶೀಲನೆಗೆ ಡಿಸಿಎಫ್ ಸೂಚನೆ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪುತ್ರ ಮೃಣಾಲ್ ಹೆಬ್ಬಾಳ್ಕರ್
Follow us
| Updated By: ವಿವೇಕ ಬಿರಾದಾರ

Updated on: Oct 27, 2023 | 8:13 AM

ಬೆಳಗಾವಿ ಅ.27: ರಾಜ್ಯದಲ್ಲಿ ಹುಲಿ ಉಗುರಿನ ಸದ್ದು ಜೋರಾಗಿದೆ. ಹುಲಿ ಉಗುರು (Tiger Claw) ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಧರಿಸಿರುವ ರಾಜ್ಯದ ವಿಐಪಿ ಮಂದಿಗೆ ತಲೆನೋವು ಶುರುವಾಗಿದೆ. ಕನ್ನಡ ಚಿತ್ರರಂಗದ (Sandlwood) ಪ್ರಮುಖರ ವಿರುದ್ಧ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪ ಕೇಳಿಬಂತು. ಸೆಲೆಬ್ರೆಟಿಗಳು ಬೆನ್ನಲ್ಲೇ ರಾಜಕಾರಣಿಗಳು, ಉದ್ಯಮಿಗಳು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಆರೋಪ ಕೇಳಿಬಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar)​​ ಪುತ್ರ, ಕಾಂಗ್ರೆಸ್ (Congress) ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವ​ ಫೋಟೋ ವೈರಲ್​​ ಆಗುತ್ತಿದೆ. ಈ ಬಗ್ಗೆ ಟಿವಿ9ನಲ್ಲಿ ವರದಿ ಬೆನ್ನಲ್ಲೇ ಬೆಳಗಾವಿ ಅರಣ್ಯ ಇಲಾಖೆ ಅಧಿಕಾರಿಗಳು ಅಲರ್ಟ್​​ ಆಗಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರ ಮೃಣಾಲ್​​ ಹೆಬ್ಬಾಳ್ಕರ್​ ಧರಿಸಿರುವ ಹುಲಿ ಉಗುರಿನ ಬಗ್ಗೆ ಶೀಘ್ರದಲ್ಲೇ ಪರಿಶೀಲಿಸಲಾಗುತ್ತದೆ. ಮಾಧ್ಯಮದ ಮೂಲಕ ಸಚಿವರ ಪುತ್ರನ ಪೆಂಡೆಂಟ್ ಬಗ್ಗೆ ಮಾಹಿತಿ ಸಿಕ್ಕಿದೆ. ಹುಲಿ ಉಗುರಿನ ಪೆಂಡೆಂಟ್ ಬಗ್ಗೆ ಪರಿಶೀಲನೆ ನಡೆಸುವಂತೆ ಅರಣ್ಯ ಇಲಾಖೆಯ ಕೆಳಹಂತದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂದು ಸಂಜೆಯೊಳಗೆ ಹುಲಿ ಉಗುರಿನ ಸತ್ಯಾಸತ್ಯತೆ ಬಗ್ಗೆ ಪರಿಶೀಲಿಸುತ್ತೇವೆ. ಏನಾದರೂ ತಪ್ಪು ಕಂಡುಬಂದರೆ ಸರ್ಕಾರದ ಸಮಿತಿಗೆ ವರದಿ ನೀಡುತ್ತೇವೆ ಎಂದು ಬೆಳಗಾವಿ ಡಿಸಿಎಫ್ ಶಂಕರ ಕಲ್ಲೋಳಕರ್ ಮಾಹಿತಿ ನೀಡಿದರು.

ಇದನ್ನೂ ಓದಿ: ಹುಲಿ ಉಗುರು ವಿವಾದ: ಹುಲಿಯುಗುರು ಡಾಲರ್ ಧರಿಸಿದ್ದ ಚಿಕ್ಕಮಗಳೂರಿನ ಇಬ್ಬರು ಅರ್ಚಕರಿಗೆ 14-ದಿನ ನ್ಯಾಯಾಂಗ ಕಸ್ಟಡಿ!

ಹುಲಿ ಉಗುರಿನ ಲಾಕೆಟ್ ಧರಿಸಿದ ಹೆಬ್ಬಾಳ್ಕರ್ ಅಳಿಯನ ಫೋಟೋ ವೈರಲ್​​

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರಿನ ಲಾಕೆಟ್ ಧರಿಸಿರುವ ಫೋಟೋ ಕೂಡ ವೈರಲ್ ಆಗುತ್ತಿದೆ. ಲಕ್ಷ್ಮೀ ಹೆಬ್ಬಾಳಕರ್ ಅಕ್ಕನ ಮಗಳನ್ನು ಮದುವೆಯಾಗಿರುವ ರಜತ್ ಉಳ್ಳಾಗಡ್ಡಿಮಠ ಧರಿಸಿರುವ ಲಾಕೆಟ್ ಬಗ್ಗೆ ಚರ್ಚೆ ಶುರುವಾಗಿತ್ತು. ಮದುವೆ ಸಮಯದಲ್ಲಿ ಫೋಟೋ ಶೂಟ್​ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಫೋಟೋ ಈಗ ವೈರಲ್ ಆಗಿತ್ತು.

ವಿಜುಗೌಡ ಪಾಟೀಲ್ ಪುತ್ರನಿಗೆ ಸಂಕಷ್ಟ

ಇಂದು ವಿಜಯಪುರದಲ್ಲಿ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಪುತ್ರ ಶಾಶ್ವತ ಗೌಡ ಪಾಟೀಲ್ ಧರಿಸುತ್ತಿದ್ದ ಹುಲಿ ಉಗುರಿನ ಲಾಕೆಟ್​ನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಸದ್ಯ ಅದನ್ನು ಪರೀಕ್ಷೆಗೆ ಕಳಿಸಿದ್ದರು.

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್