AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ರೈಲಿನಲ್ಲಿ ಪ್ರಯಾಣಿಸುವವರೇ ಎಚ್ಚರ, ಮತ್ತೆ ಆ್ಯಕ್ಟೀವ್ ಆಗಿದೆ ಚಾಕೊಲೇಟ್ ಗ್ಯಾಂಗ್; ಇಲ್ಲಿದೆ ವಿವರ

ಹೌದು, ಈ ಗ್ಯಾಂಗ್​ ಕಳೆದ ಎರಡು ದಿನಗಳ ಹಿಂದೆ ಇದೇ ಮಾದರಿಯಲ್ಲಿ ಪ್ರಯಾಣಿಕರಿಗೆ ಗ್ಯಾಂಗ್​ವೊಂದು, ಗೋವಾದಿಂದ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಚೇರ್ವಾ ಗ್ರಾಮಕ್ಕೆ ಹೊರಟ್ಟಿದ್ದ ಎಂಟು ಜನ ಪ್ರಯಾಣಿಕರಿಗೆ ಯಾಮಾರಿಸಿದೆ. ಅವರಿಂದ ಮೊಬೈಲ್​, ಐವತ್ತು ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.

ಬೆಳಗಾವಿ: ರೈಲಿನಲ್ಲಿ ಪ್ರಯಾಣಿಸುವವರೇ ಎಚ್ಚರ, ಮತ್ತೆ ಆ್ಯಕ್ಟೀವ್ ಆಗಿದೆ ಚಾಕೊಲೇಟ್ ಗ್ಯಾಂಗ್; ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 13, 2023 | 3:35 PM

ಬೆಳಗಾವಿ, ಸೆ.13: ರಾಜ್ಯದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿರುವ ಬೆನ್ನಲ್ಲೇ ಇದೀಗ ಬೆಳಗಾವಿ-ಗೋವಾ (Belagavi-Goa) ನಡುವೆ ಸಂಚರಿಸುವ ರೈಲಿನಲ್ಲಿ ಮತ್ತೆ ಚಾಕೊಲೇಟ್ ಗ್ಯಾಂಗ್ ಆ್ಯಕ್ಟೀವ್ ಆಗಿದೆ. ಹೌದು, ಇವರು ಮೂರು ವರ್ಷದ ಹಿಂದೆ ಬೆಳಗಾವಿ ರೇಲ್ವೆ ಪೊಲೀಸರ(Railway Police) ಖೆಡ್ಡಾಗೆ ಬಿದ್ದಿದ್ದರು. ಇದೇ ಗ್ಯಾಂಗ್ ಮಾದರಿಯಲ್ಲಿ ಮತ್ತೊಂದು ಖತರ್ನಾಕ್ ಗ್ಯಾಂಗ್​ವೊಂದು ಕಳ್ಳತನಕ್ಕಿಳಿದಿದೆ. ಪ್ರಯಾಣಿಕರ ಸೋಗಿನಲ್ಲಿರುವ ಈ ಗ್ಯಾಂಗ್, ಬೋಗಿಯಲ್ಲಿ ಸಹ ಪ್ರಯಾಣಿಕರ ಪರಿಚಯ ಬೆಳಸುತ್ತೆ. ಪ್ರಜ್ಞೆ ತಪ್ಪುವ ಕೆಮಿಕಲ್ ಹಾಕಿ ಚಾಕೊಲೇಟ್ ತಯಾರಿಸಿ ಅದನ್ನು ಪ್ರಯಾಣಿಕರ ನೀಡುವ ಖದೀಮರು, ಚಾಕೊಲೇಟ್ ತಿಂದು ಮೂರ್ಛೆ ಹೋಗುತ್ತಿದ್ದಂತೆ ಪ್ರಯಾಣಿಕರ ಮೊಬೈಲ್, ಹಣ ಕಳ್ಳತನ ಮಾಡುತ್ತಾರೆ.

ಮತ್ತೆ ಆ್ಯಕ್ಟೀವ್​ ಆದ ಚಾಕೊಲೇಟ್ ಗ್ಯಾಂಗ್

ಹೌದು, ಕಳೆದ ಎರಡು ದಿನಗಳ ಹಿಂದೆ ಇದೇ ಮಾದರಿಯಲ್ಲಿ ಪ್ರಯಾಣಿಕರಿಗೆ ಗ್ಯಾಂಗ್​ವೊಂದು, ಗೋವಾದಿಂದ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಚೇರ್ವಾ ಗ್ರಾಮಕ್ಕೆ ಹೊರಟ್ಟಿದ್ದ ಎಂಟು ಜನ ಪ್ರಯಾಣಿಕರಿಗೆ ಯಾಮಾರಿಸಿದೆ. ವಾಸ್ಕೋ ರೇಲ್ವೆ ನಿಲ್ದಾಣದಿಂದ ರೈಲು ಹತ್ತಿದ್ದ ನಾಲ್ಕು ಜನ ಖದೀಮರು. ಎಂಟು ಜನ ಪ್ರಯಾಣಿಕರಿಗೆ ಮಧ್ಯಪ್ರದೇಶದವರೇ ಎಂದು ಪರಿಚಯ‌ ಮಾಡಿಕೊಂಡಿದ್ದಾರೆ. ಬಳಿಕ ಚಾಕೊಲೇಟ್, ಚಿಪ್ಸ್ ನೀಡಿ. ಅದನ್ನು ತಿನ್ನುತ್ತಿದ್ದಂತೆ ಪ್ರಜ್ಞೆ ಪ್ರಯಾಣಿಕರು ತಪ್ಪಿದ್ದಾರೆ. ಬಳಿಕ ಎಂಟು ಮೊಬೈಲ್ ಪೋನ್, ಐವತ್ತು ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ:ಬೆಳಗಾವಿ: ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ; ಪುಷ್ಪ ಸಿನೆಮಾ ಮಾದರಿಯಲ್ಲಿ ಮದ್ಯ ಸಾಗಿಸಲು ಹೋಗಿ ತಗ್ಲಾಕ್ಕೊಂಡ ಗ್ಯಾಂಗ್​

ರೈಲಿನಲ್ಲಿ ಚಾಕೊಲೇಟ್ ತಿಂದು ಎಂಟು ಜನ ಅಸ್ವಸ್ಥ

ಸದ್ಯ ಚಾಕೊಲೇಟ್ ತಿಂದು ಪ್ರಜ್ಞೆ ತಪ್ಪಿದವರಿಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಇನ್ನೆರಡು ದಿನದಲ್ಲಿ ಡಿಸ್ಚಾರ್ಜ್ ಆಗಿ ಹೋಗಲಿದ್ದಾರೆ. ಆರು ಜನರ ಆರೋಗ್ಯ ಸುಧಾರಣೆಯಾಗಿದ್ದು, ಇಬ್ಬರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮದ್ದು ಬರುವ ಚಾಕೊಲೇಟ್ ತಿಂದು ಅಸ್ವಸ್ಥರಾಗಿರಬಹುದು. ಫುಡ್ ಪಾಯಿಸನ್ ಆಗಿದ್ರೆ, ಈ ರೀತಿ ಲಕ್ಷಣಗಳು ಇರುತ್ತಿರಲಿಲ್ಲ. ಕೆಮಿಕಲ್ ಮಿಶ್ರಿತ ಪದಾರ್ಥ ತಿಂದು ಅಸ್ವಸ್ಥರಾಗಿದ್ದಾರೆ ಎಂದು ಬಿಮ್ಸ್ ಆಸ್ಪತ್ರೆ ಸರ್ಜನ್ ಡಾ.ಅಣ್ಣಾಸಾಹೇಬ್ ಪಾಟೀಲ್ ಹೇಳಿದ್ದಾರೆ.

ಎರಡು ರಾಜ್ಯದ ಪೊಲೀಸರ ತಿಕ್ಕಾಟದಲ್ಲಿ ಮುಚ್ಚಿ ಹೋಗ್ತಿವೆಯಾ ಕಳ್ಳತನ ಪ್ರಕರಣಗಳು

ಇನ್ನು ಎರಡು ರಾಜ್ಯದ ಪೊಲೀಸರ ತಿಕ್ಕಾಟದಲ್ಲಿ ಇಂತಹ ಕಳ್ಳತನ ಪ್ರಕರಣಗಳು ಮುಚ್ಚಿ ಹೋಗ್ತಿವೆಯಾ ಎಂಬ ಪ್ರಶ್ನೆ ಮೂಡಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು ದಿನ ಕಳೆದ್ರೂ ಇನ್ನೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಹೌದು, ರೈಲ್ವೆ ಪೊಲೀಸರ ವ್ಯಾಪ್ತಿಗೆ ಪ್ರಕರಣ ಬರುತ್ತೆ ಎಂದು ನಗರ ಪೊಲೀಸರು ದೂರು ದಾಖಲಿಸಿಲ್ಲ. ಗೋವಾ ರೈಲ್ವೆ ಪೊಲೀಸರ ವ್ಯಾಪ್ತಿಗೆ ಬರುತ್ತೆ ಎಂದು ಬೆಳಗಾವಿ ರೈಲ್ವೆ ಪೊಲೀಸರು ಬೇಜವಾಬ್ದಾರಿ ತೋರಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್