AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಕನ್ನಡ ಫಲಶ್ರುತಿ: ಪುಸ್ತಕ, ಆಟಿಕೆ ಸಾಮಗ್ರಿ ಕಳೆದುಕೊಂಡಿದ್ದ ಬಾಲಕಿಯ ಕಣ್ಣೀರಿಗೆ ಸ್ಪಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಟಿವಿ9 ವರದಿ ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬಾಲಕಿಗೆ ಪುಸ್ತಕ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಡುವಂತೆ ಸಿಎಂ ಸೂಚನೆ ನೀಡಿದ್ದಾರೆ.

ಟಿವಿ9 ಕನ್ನಡ ಫಲಶ್ರುತಿ:  ಪುಸ್ತಕ, ಆಟಿಕೆ ಸಾಮಗ್ರಿ ಕಳೆದುಕೊಂಡಿದ್ದ ಬಾಲಕಿಯ ಕಣ್ಣೀರಿಗೆ ಸ್ಪಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಬಾಲಕಿಯ ಕಣ್ಣೀರಿಗೆ ಸ್ಪಂದನೆ
TV9 Web
| Edited By: |

Updated on:Aug 01, 2021 | 6:45 PM

Share

ಬೆಳಗಾವಿ: ಹಿರಣ್ಯಕೇಶಿ ನದಿ ಪ್ರವಾಹದಿಂದ ಮನೆ ಕುಸಿದು ಬಿದ್ದು, ಮನೆಯಲ್ಲಿದ್ದ ಎಲ್ಲಾ ಸಾಮಗ್ರಿ ಕೊಚ್ಚಿಕೊಂಡು ಹೋಗಿದ್ದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ಬಾಲಕಿಯ ಕಣ್ಣೀರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ನಿಸರ್ಗ ದೇಸಾಯಿ ಎಂಬ ಎಂಟು ವರ್ಷದ ಬಾಲಕಿ ಪುಸ್ತಕ, ಆಟಿಕೆ ಸಾಮಾಗ್ರಿ, ಟಿವಿ ಕಳೆದುಕೊಂಡು ಕಣ್ಣೀರಿಟ್ಟಿದ್ದಳು. ಈ ಘಟನೆಯ ಕುರಿತು ಟಿವಿ9 ಕನ್ನಡ ವರದಿ ಪ್ರಸಾರ ಮಾಡಿತ್ತು. ಟಿವಿ9 ವರದಿ ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬಾಲಕಿಗೆ ಪುಸ್ತಕ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಡುವಂತೆ ಸಿಎಂ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಹಿರಣ್ಯಕೇಶಿ ನದಿ ಪ್ರವಾಹದಲ್ಲಿ ಪುಸ್ತಕ, ಆಟ ಸಾಮಾಗ್ರಿಗಳು ಕೊಚ್ಚಿ ಹೋಗಿವೆ; ಟಿವಿ9 ಕ್ಯಾಮೆರಾ ಮುಂದೆ ಬಿಕ್ಕಿ ಬಿಕ್ಕಿ ಅತ್ತ 8 ವರ್ಷದ ಬಾಲಕಿ

ಬಿದ್ದ ಮನೆಯಲ್ಲೇ ಎರಡು ದಿನದಿಂದ ಜೀವನ ಸಾಗಿಸುತ್ತಿರುವ ಬಾಲಕಿ ನಿಸರ್ಗ ಕುಟುಂಬದ ಅಳಲು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ತಲುಪಿದೆ. ಡಿಸಿ ಎಂ.ಜಿ ಹಿರೇಮಠಗೆ ಸಿಎಂ  ಬಸವರಾಜ ಬೊಮ್ಮಾಯಿ ಸೂಚಿಸಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ತಹಸೀಲ್ದಾರಗೆ ಸ್ಥಳಕ್ಕೆ ತೆರಳಿ ಬಾಲಕಿ ಕುಟುಂಬಕ್ಕೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಇದನ್ನೂ ಓದಿ: ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಿರಣ್ಯಕೇಶಿ ನದಿ; ಹೊಸದಾಗಿ ಕಟ್ಟಿಕೊಂಡಿದ್ದ ಮನೆಗಳು ಸಂಪೂರ್ಣ ಜಲಾವೃತ  

(TV9 Kannada Impacts CM Basavaraj Bommai responds to girls books and toys lost in flood in Belagavi)

Published On - 6:13 pm, Sun, 1 August 21

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು