AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಸೆಲ್ಫಿ ತೆಗೆದುಕೊಳ್ಳುವಾಗ ಕ್ವಾರಿಗೆ ಬಿದ್ದು ಇಬ್ಬರ ಸಾವು

ಫೋಟೋ ಶೂಟ್​ಗೆಂದು ಕ್ವಾರಿಯಲ್ಲಿ ಯುವಕರು ಇಳಿದಿದ್ದರು. ಈ ವೇಳೆ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಯುವಕರು ಕ್ವಾರಿಗೆ ಬಿದ್ದಿದ್ದಾರೆ. ಮೂವರಲ್ಲಿ ಅದೃಷ್ಟವಶಾತ್ ಒಬ್ಬ ಯುವಕ ಪಾರಾಗಿದ್ದಾನೆ. ಇನ್ನಿಬ್ಬರು ಸಾವನ್ನಪ್ಪಿದ್ದಾರೆ.

ಬೆಳಗಾವಿ: ಸೆಲ್ಫಿ ತೆಗೆದುಕೊಳ್ಳುವಾಗ ಕ್ವಾರಿಗೆ ಬಿದ್ದು ಇಬ್ಬರ ಸಾವು
ಎಸ್‌ಡಿಆರ್‌ಎಫ್ ತಂಡ
TV9 Web
| Updated By: preethi shettigar|

Updated on:Oct 18, 2021 | 9:39 AM

Share

ಬೆಳಗಾವಿ: ಸೆಲ್ಫಿ ತೆಗೆದುಕೊಳ್ಳುವಾಗ ಕ್ವಾರಿಗೆ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ರಾಜಹಂಸಘಡ ಬಳಿ ನಡೆದಿದೆ. ಬೆಳಗಾವಿಯ ಸರ್ವೋದಯ ಕಾಲೊನಿಯ ಗಣೇಶ ಕಾಂಬಳೆ (17), ಆನಂದವಾಡಿಯ ತೇಜಸ್ ಯಲಕಪಾಟಿ (19) ಮೃತ ದುರ್ದೈವಿಗಳು. ಘಟನೆಯಲ್ಲಿ ಮೂವರ ಪೈಕಿ ಒಬ್ಬ ಯುವಕ ಪಾರಾಗಿದ್ದಾನೆ. ಈ ಸಂಬಂಧ ಬೆಳಗಾವಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೋಟೋ ಶೂಟ್​ಗೆಂದು ಕ್ವಾರಿಯಲ್ಲಿ ಯುವಕರು ಇಳಿದಿದ್ದರು. ಈ ವೇಳೆ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಯುವಕರು ಕ್ವಾರಿಗೆ ಬಿದ್ದಿದ್ದಾರೆ. ಮೂವರಲ್ಲಿ ಅದೃಷ್ಟವಶಾತ್ ಒಬ್ಬ ಯುವಕ ಪಾರಾಗಿದ್ದಾನೆ. ಇನ್ನಿಬ್ಬರು ಸಾವನ್ನಪ್ಪಿದ್ದಾರೆ. ನಿನ್ನೆ (ಅಕ್ಟೋಬರ್ 17) ತಡರಾತ್ರಿವರೆಗೆ ಕಾರ್ಯಾಚರಣೆ ನಡೆಸಿದ ಎಸ್‌ಡಿಆರ್‌ಎಫ್ ತಂಡ ಮೃತದೇಹ ಪತ್ತೆ ಮಾಡಿದೆ.

ಮೈಸೂರು: ತನಗೆ ಅತ್ಯಚಾರವಾಗಿದೆ ಎಂದು ಡೆತ್ ನೋಟ್ ಬರೆದಿಟ್ಟಿದ್ದು ಆತ್ಮಹತ್ಯೆ‌ 15 ದಿನದ ಹಿಂದೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಚನ್ನಪಟ್ಟಣದಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿ 15 ದಿನದ ಬಳಿಕ ಯುವತಿಯ ಮನೆಯಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. ತನಗೆ ಅತ್ಯಾಚಾರವಾಗಿದೆ ಎಂದು ಡೆತ್ ನೋಟ್ನಲ್ಲಿ ಯುವತಿ ಉಲ್ಲೇಖ ಮಾಡಿದ್ದಾಳೆ.

ನನ್ನ ಮೇಲೆ ಅತ್ಯಾಚಾರವಾಗಿದೆ. ತನ್ನ ಸಾವಿಗೆ ಲೋಕೇಶ್ ಕಾರಣ ಎಂದು ಮೃತ ಯುವತಿ ಡೆತ್ ನೋಟ್ನಲ್ಲಿ ಉಲ್ಲೇಖ ಮಾಡಿದ್ದಾಳೆ. ಮೃತ ಯುವತಿ ಲೋಕೇಶ್‌ನನ್ನು ಪ್ರೀತಿ ಮಾಡುತ್ತಿದ್ದಳು. ಆದ್ರೆ ಲೋಕೇಶ್ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದ. ಅಲ್ಲದೆ ಯುವತಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನಂತೆ. ಹೀಗಾಗಿ ನೊಂದಿದ್ದ ಯುವತಿ ಈ ಬಗ್ಗೆ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದಾಳೆ. ಆದರೆ ಪ್ರಕರಣ ದಾಖಲಿಸಿಕೊಳ್ಳದೆ ಹುಲ್ಲಹಳ್ಳಿ ಠಾಣೆ ಎಎಸ್ಐ ಶಿವರಾಜ್ ಯುವತಿಯನ್ನು ವಾಪಸ್ ಕಳಿಸಿದ್ದರು.

ತನ್ನ ಹಾಗೂ ಲೋಕೇಶ್ ನಡುವಿನ ಪ್ರೀತಿಗೆ ಸಾಕ್ಷಿ ಇದೆ, ಮೊಬೈಲ್ ನಲ್ಲಿ ವರ್ಷದಿಂದ ಮಾತನಾಡಿರುವ ಕಾಲ್ ರೆಕಾರ್ಡ್ ಇದೆ. ಈ‌ ನೋವಿನಿಂದ ಸತ್ತರೆ ನನ್ನ ಸಾವಿಗೆ ಇವರೇ ಕಾರಣ. ಇವರನ್ನು ಗಲ್ಲಿಗೇರಿಸಿ‌ ಎಂದು ಡೆತ್‌ನೋಟ್‌ನಲ್ಲಿ ಯುವತಿ ಉ್ಲಲೇಖ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದೀಗಾ ಹುಲ್ಲಹಳ್ಳಿ ಪೊಲೀಸ್ ಠಾಣೆ ಎಎಸ್ಐ ಸೇರಿ ಎಂಟು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: ಜೀವವನ್ನೇ ಕಸಿದ ಸೆಲ್ಫಿ ಕ್ರೇಜ್; ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ಇಬ್ಬರು ವಿದ್ಯಾರ್ಥಿಗಳ ಸಾವು

ಸೆಲ್ಫಿ ತೆಗೆದುಕೊಳ್ಳಲು ಹೋಗಿ ದುರಂತ ಅಂತ್ಯ ಕಂಡ ಯುವತಿ; ಜಲಪಾತಕ್ಕೆ ಬಿದ್ದು ಸಾವು

Published On - 9:16 am, Mon, 18 October 21

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!