AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್ ಮಿಲಾದ್ ಹಬ್ಬದಂದು ಹಿಂದೂ ಯುವಕರ ಮೇಲೆ ಹಲ್ಲೆ: ಇಬ್ಬರು ಅಪ್ರಾಪ್ತರು ಸೇರಿ ಮೂವರು ಅರೆಸ್ಟ್

ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ಪರಸ್ಪರ ಹೊಟೆದಾಡಿಕೊಂಡಿದ್ದರು. ಪ್ರಕರಣ ಸಂಬಂಧ ದೂರು ಪ್ರತಿ ದೂರು ದಾಖಲಾಗಿತ್ತು.

ಈದ್ ಮಿಲಾದ್ ಹಬ್ಬದಂದು ಹಿಂದೂ ಯುವಕರ ಮೇಲೆ ಹಲ್ಲೆ: ಇಬ್ಬರು ಅಪ್ರಾಪ್ತರು ಸೇರಿ ಮೂವರು ಅರೆಸ್ಟ್
ಬಂಧಿತ ಆರೋಪಿಗಳು
TV9 Web
| Edited By: |

Updated on: Oct 11, 2022 | 1:16 PM

Share

ಬೆಳಗಾವಿ: ರಾಮದುರ್ಗದಲ್ಲಿ ಈದ್ ಮಿಲಾದ್ ಹಬ್ಬದಂದು ಹಿಂದೂ ಯುವಕರ ಮೇಲೆ ಹಲ್ಲೆಗೈದಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ‌ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ಪರಸ್ಪರ ಹೊಟೆದಾಡಿಕೊಂಡಿದ್ದರು. ಪ್ರಕರಣ ಸಂಬಂಧ ದೂರು ಪ್ರತಿ ದೂರು ದಾಖಲಾಗಿತ್ತು. ಒಟ್ಟು ‌ಆರು ಜನರ ವಿರುದ್ಧ ರಾಮದುರ್ಗ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಈಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಗೋಪಾಲ್ ಬಂಡಿವಡ್ಡರ, ರವಿ ಬಂಡಿವಡ್ಡರ, ನಂಜುಂಡಿ ಬಂಡಿವಡ್ಡರ ಎಂಬ ಯುವಕರ ಮೇಲೆ ಹಲ್ಲೆಯಾಗಿದ್ದು ಗಾಯಗೊಂಡ ಮೂವರಿಗೆ ರಾಮದುರ್ಗ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಇದನ್ನೂ ಓದಿ: ಗುಂಡೇಟು ಬಿದ್ದರೂ ಉಗ್ರರ ಜೊತೆ ಕಾದಾಡಿದ ಭಾರತೀಯ ಸೇನೆಯ ಶ್ವಾನ; ವೈರಲ್ ವಿಡಿಯೋ ಇಲ್ಲಿದೆ

ಈದ್ ಮಿಲಾದ್ ಹೆಸರಲ್ಲಿ ಶಕ್ತಿ ಪ್ರದರ್ಶನ

ತುಮಕೂರು: ನಗರದ ಬಿಜಿ ಪಾಳ್ಯ ವೃತ್ತದಲ್ಲಿ ಈದ್ ಮಿಲಾದ್ ಹಬ್ಬದ ದಿನ ಮುಸ್ಲಿಂ ಸಮುದಾಯದ ಜನ ಶಕ್ತಿ ಪ್ರದರ್ಶಿಸಿದ್ದಾರೆ. ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಸೇರಿದ ಸಾವಿರಾರು ಮುಸ್ಲಿಂ ಸಮುದಾಯದ ಜನ ಹಸಿರು ಬಾವುಟ ಹಿಡಿದು ಡಾ ರಾಜ್ ರವರ ಹುಟ್ಟಿದರೇ ಕನ್ನಡ ನಾಡಿನಲ್ಲಿ ಹುಟ್ಟಬೇಕು ಹಾಡಿಗೆ ಕುಣಿದು ಕುಪ್ಪಳಿಸಿ ಹಿಂದೂ ಮುಸ್ಲಿಂ ಬಾಯ್ ಬಾಯ್ ಅಂತಾ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.

ಈದ್ ಮಿಲಾದ್ ಸಂಭ್ರಮಾಚರಣೆಯಲ್ಲಿ ಲಾಂಗ್ ಹಿಡಿದು ಕುಣಿದ ಯುವಕರು ಅರೆಸ್ಟ್

ಬೆಂಗಳೂರಿನ ಚಿಕ್ಕಪೇಟೆ ವಿಧಾನ ಸಭಾ ಕ್ಷೇತ್ರದ ವಾರ್ಡ್ ನಂಬರ್ 144 ಸಿದ್ದಾಪುರದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಯುವಕರು ಲಾಂಗ್ ಹಿಡಿದು ಡ್ಯಾನ್ಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಮೆರವಣಿಗೆ ವೇಳೆ ಸಂಪೂರ್ಣ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಆದ್ರೆ ಪೊಲೀಸರು ಇರದ ಸಂದರ್ಭದಲ್ಲಿ ಯುವಕರು ಡ್ಯಾನ್ಸ್ ಮಾಡಿದ್ದಾರೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಸಹೋದರ ಅಕ್ಬರುದ್ದಿನ್ ಓವೈಸಿ ಮಾಡಿದ ಭಾಷಣಕ್ಕೆ ಡಿಜೆ ಸಾಂಗ್ಸ್ ಬಳಸಿ ಯುವಕರು ಲಾಂಗ್ ಹಿಡಿದು ಸಂಭ್ರಮಿಸಿದ್ದಾರೆ. ಘಟನೆ ಸಂಬಂಧ 14 ಬಾಲಕರು ಸೇರಿದಂತೆ 19 ಜನರನ್ನ ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ