AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕಲುಷಿತ ನೀರು ಸೇವನೆ, ಮೃತರ ಸಂಖ್ಯೆ 2ಕ್ಕೆ ಏರಿಕೆ, ಪರಿಹಾರ ವಿತರಣೆಯಲ್ಲಿ ಗೊಂದಲ

ಗ್ರಾಮಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಬೆಳಗಾವಿ: ಕಲುಷಿತ ನೀರು ಸೇವನೆ, ಮೃತರ ಸಂಖ್ಯೆ 2ಕ್ಕೆ ಏರಿಕೆ, ಪರಿಹಾರ ವಿತರಣೆಯಲ್ಲಿ ಗೊಂದಲ
ಕಲುಷಿತ ಕುಡಿಯುವ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವ ಮುದೇನೂರು ಗ್ರಾಮಸ್ಥರು
TV9 Web
| Edited By: |

Updated on: Oct 28, 2022 | 11:14 AM

Share

ಬೆಳಗಾವಿ: ರಾಮದುರ್ಗ ತಾಲ್ಲೂಕಿನ ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆಯ 2ಕ್ಕೆ ಏರಿದೆ. ಈವರೆಗೆ ಗ್ರಾಮದ 186 ಮಂದಿ ಅಸ್ವಸ್ಥರಾಗಿದ್ದಾರೆ. ಈ ಪೈಕಿ 12 ಬಾಲಕರು, 8 ಬಾಲಕಿಯರು ಸೇರಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿರುವ 94 ಮಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಹುತೇಕರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮದ ಶಿವಪ್ಪ ಯಂಡಿಗೇರಿ ಮತ್ತು ನಿಂಗಪ್ಪ ಹಾವಳ್ಳಿ ಕಲುಷಿತ ನೀರು ಸೇವನೆಯ ನಂತರ ಕಾಣಿಸಿಕೊಂಡ ಆರೋಗ್ಯ ವೈಪರಿತ್ಯದಿಂದ ಮೃತಪಟ್ಟರು. ಬಹುತೇಕ ಗ್ರಾಮಸ್ಥರು ನಿತ್ರಾಣರಾಗಿದ್ದು, ಊರಿನಲ್ಲಿ ಉತ್ಸಾಹವೇ ಇಲ್ಲದ ನೀರಸ ವಾತಾವರಣ ನೆಲೆಸಿದೆ. ಗ್ರಾಮದ ನೂರಕ್ಕೂ ಹೆಚ್ಚು ಮಂದಿಯ ಅನಾರೋಗ್ಯಕ್ಕೆ ಕಲುಷಿತ ಕುಡಿಯುವ ನೀರು ಮುಖ್ಯ ಕಾರಣ. ನೀರು ಪೂರೈಕೆ ಮಾಡಲೆಂದು ಅಳವಡಿಸಿದ್ದ ಪೈಪ್ ಒಡೆದು, ಅದಕ್ಕೆ ಚರಂಡಿ ನೀರು ಬೆರೆತಿದ್ದು ಪರಿಸ್ಥಿತಿ ಈ ಪ್ರಮಾಣದಲ್ಲಿ ವಿಷಮಿಸಲು ಕಾರಣವಾಯಿತು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಮಹೇಶ ಕೋಣಿ ತಿಳಿಸಿದ್ದಾರೆ.

ಗ್ರಾಮಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 8 ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಇರುವ ತಂಡವು ಗ್ರಾಮಸ್ಥರ ಆರೋಗ್ಯವನ್ನು ನಿಯಮಿತವಾಗಿ ತಪಾಸಣೆ ಮಾಡುತ್ತಿದೆ. ತುರ್ತು ಬಳಕೆಗೆಂದು ಮೂರು ಆಂಬುಲೆನ್ಸ್​ಗಳನ್ನೂ ಗ್ರಾಮದಲ್ಲಿ ನಿಲ್ಲಿಸಲಾಗಿದೆ.

ಪರಿಹಾರ ಗೊಂದಲ

ವಾಂತಿ ಬೇಧಿಯಿಂದ ಮೃತಪಟ್ಟ ಗ್ರಾಮದ ಶಿವಪ್ಪ ಯಂಡಿಗೇರಿ (70) ಅವರ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ₹ 10 ಲಕ್ಷ ಬಿಡುಗಡೆ ಮಾಡಿದ್ದಾರೆ. ಆದರೆ ಐದು ದಿನಗಳಿಂದಲೂ ಗ್ರಾಮದ ಹಲವರಲ್ಲಿ ವಾಂತಿ-ಬೇಧಿ ಕಾಣಿಸಿದ್ದು, ಇದೇ ಕಾರಣಕ್ಕೆ ಸರಸ್ವತಿ ಎನ್ನುವವರು ಮೃತಪಟ್ಟಿದ್ದರು. ಗ್ರಾಮ ಪಂಚಾಯಿತಿ ಸಿಬ್ಬಂದಿ ಈ ಸಾವನ್ನು ವಯೋಸಹಜ ಎಂದು ನಮೂದಿಸಿತ್ತು. ಇದೀಗ ಸರಸ್ವತಿ ಅವರ ಕುಟುಂಬಕ್ಕೂ ಸರ್ಕಾರವು ಪರಿಹಾರ ಘೋಷಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ