AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕಲುಷಿತ ನೀರು ಸೇವನೆ, ಮೃತರ ಸಂಖ್ಯೆ 2ಕ್ಕೆ ಏರಿಕೆ, ಪರಿಹಾರ ವಿತರಣೆಯಲ್ಲಿ ಗೊಂದಲ

ಗ್ರಾಮಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಬೆಳಗಾವಿ: ಕಲುಷಿತ ನೀರು ಸೇವನೆ, ಮೃತರ ಸಂಖ್ಯೆ 2ಕ್ಕೆ ಏರಿಕೆ, ಪರಿಹಾರ ವಿತರಣೆಯಲ್ಲಿ ಗೊಂದಲ
ಕಲುಷಿತ ಕುಡಿಯುವ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವ ಮುದೇನೂರು ಗ್ರಾಮಸ್ಥರು
TV9 Web
| Edited By: |

Updated on: Oct 28, 2022 | 11:14 AM

Share

ಬೆಳಗಾವಿ: ರಾಮದುರ್ಗ ತಾಲ್ಲೂಕಿನ ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆಯ 2ಕ್ಕೆ ಏರಿದೆ. ಈವರೆಗೆ ಗ್ರಾಮದ 186 ಮಂದಿ ಅಸ್ವಸ್ಥರಾಗಿದ್ದಾರೆ. ಈ ಪೈಕಿ 12 ಬಾಲಕರು, 8 ಬಾಲಕಿಯರು ಸೇರಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿರುವ 94 ಮಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಹುತೇಕರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮದ ಶಿವಪ್ಪ ಯಂಡಿಗೇರಿ ಮತ್ತು ನಿಂಗಪ್ಪ ಹಾವಳ್ಳಿ ಕಲುಷಿತ ನೀರು ಸೇವನೆಯ ನಂತರ ಕಾಣಿಸಿಕೊಂಡ ಆರೋಗ್ಯ ವೈಪರಿತ್ಯದಿಂದ ಮೃತಪಟ್ಟರು. ಬಹುತೇಕ ಗ್ರಾಮಸ್ಥರು ನಿತ್ರಾಣರಾಗಿದ್ದು, ಊರಿನಲ್ಲಿ ಉತ್ಸಾಹವೇ ಇಲ್ಲದ ನೀರಸ ವಾತಾವರಣ ನೆಲೆಸಿದೆ. ಗ್ರಾಮದ ನೂರಕ್ಕೂ ಹೆಚ್ಚು ಮಂದಿಯ ಅನಾರೋಗ್ಯಕ್ಕೆ ಕಲುಷಿತ ಕುಡಿಯುವ ನೀರು ಮುಖ್ಯ ಕಾರಣ. ನೀರು ಪೂರೈಕೆ ಮಾಡಲೆಂದು ಅಳವಡಿಸಿದ್ದ ಪೈಪ್ ಒಡೆದು, ಅದಕ್ಕೆ ಚರಂಡಿ ನೀರು ಬೆರೆತಿದ್ದು ಪರಿಸ್ಥಿತಿ ಈ ಪ್ರಮಾಣದಲ್ಲಿ ವಿಷಮಿಸಲು ಕಾರಣವಾಯಿತು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಮಹೇಶ ಕೋಣಿ ತಿಳಿಸಿದ್ದಾರೆ.

ಗ್ರಾಮಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 8 ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಇರುವ ತಂಡವು ಗ್ರಾಮಸ್ಥರ ಆರೋಗ್ಯವನ್ನು ನಿಯಮಿತವಾಗಿ ತಪಾಸಣೆ ಮಾಡುತ್ತಿದೆ. ತುರ್ತು ಬಳಕೆಗೆಂದು ಮೂರು ಆಂಬುಲೆನ್ಸ್​ಗಳನ್ನೂ ಗ್ರಾಮದಲ್ಲಿ ನಿಲ್ಲಿಸಲಾಗಿದೆ.

ಪರಿಹಾರ ಗೊಂದಲ

ವಾಂತಿ ಬೇಧಿಯಿಂದ ಮೃತಪಟ್ಟ ಗ್ರಾಮದ ಶಿವಪ್ಪ ಯಂಡಿಗೇರಿ (70) ಅವರ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ₹ 10 ಲಕ್ಷ ಬಿಡುಗಡೆ ಮಾಡಿದ್ದಾರೆ. ಆದರೆ ಐದು ದಿನಗಳಿಂದಲೂ ಗ್ರಾಮದ ಹಲವರಲ್ಲಿ ವಾಂತಿ-ಬೇಧಿ ಕಾಣಿಸಿದ್ದು, ಇದೇ ಕಾರಣಕ್ಕೆ ಸರಸ್ವತಿ ಎನ್ನುವವರು ಮೃತಪಟ್ಟಿದ್ದರು. ಗ್ರಾಮ ಪಂಚಾಯಿತಿ ಸಿಬ್ಬಂದಿ ಈ ಸಾವನ್ನು ವಯೋಸಹಜ ಎಂದು ನಮೂದಿಸಿತ್ತು. ಇದೀಗ ಸರಸ್ವತಿ ಅವರ ಕುಟುಂಬಕ್ಕೂ ಸರ್ಕಾರವು ಪರಿಹಾರ ಘೋಷಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ