AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿನ ಗದ್ದೆಯಲ್ಲಿ 2 ವರ್ಷದ ಹೆಣ್ಣು ಮಗು: ದೇಹದ ಮೇಲೆ ಸುಟ್ಟ ಗಾಯ, ವಾಮಾಚಾರಕ್ಕಾಗಿ ಮಗು ಬಲಿಗೆ ಮುಂದಾಗಿದ್ರಾ ಪೋಷಕರು?

ಸೆಪ್ಟೆಂಬರ್ 23ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಹೊರ ವಲಯದ ರಸ್ತೆ ಪಕ್ಕದ ಕಬ್ಬಿನ ಗದ್ದೆಯಲ್ಲಿ ಹೆಣ್ಣು ಮಗುವೊಂದು ಸಿಕ್ಕಿತ್ತು. ಹೆಣ್ಣು ಮಗುವನ್ನು ದುಷ್ಕರ್ಮಿಗಳು ಗದ್ದೆಯಲ್ಲಿ ಬಿಸಾಡಿ ಹೋಗಿದ್ದರು.

ಕಬ್ಬಿನ ಗದ್ದೆಯಲ್ಲಿ 2 ವರ್ಷದ ಹೆಣ್ಣು ಮಗು: ದೇಹದ ಮೇಲೆ ಸುಟ್ಟ ಗಾಯ, ವಾಮಾಚಾರಕ್ಕಾಗಿ ಮಗು ಬಲಿಗೆ ಮುಂದಾಗಿದ್ರಾ ಪೋಷಕರು?
ಪ್ರಾತಿನಿಧಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on:Sep 28, 2021 | 9:58 AM

Share

ಬೆಳಗಾವಿ: ಕಬ್ಬಿನ ಗದ್ದೆಯಲ್ಲಿ ಹೆಣ್ಣು ಮಗುವೊಂದು ಸಿಕ್ಕಿದ್ದು ಈ ಪಟ್ಟ ಕಂದಮ್ಮನ ಹಿಂದಿನ ಕರುಣಾಜನಕ ಕಥೆ ಬಯಲಾಗಿದೆ. ಎರಡು ವರ್ಷದ ಮಗುವಿನ ಮೇಲೆ ಆದ ಘೋರ ದುರಂತ ಬೆಚ್ಚಿ ಬೀಳಿಸುವಂತಿದೆ.

ಸೆಪ್ಟೆಂಬರ್ 23ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಹೊರ ವಲಯದ ರಸ್ತೆ ಪಕ್ಕದ ಕಬ್ಬಿನ ಗದ್ದೆಯಲ್ಲಿ ಹೆಣ್ಣು ಮಗುವೊಂದು ಸಿಕ್ಕಿತ್ತು. ಹೆಣ್ಣು ಮಗುವನ್ನು ದುಷ್ಕರ್ಮಿಗಳು ಗದ್ದೆಯಲ್ಲಿ ಬಿಸಾಡಿ ಹೋಗಿದ್ದರು. ವಾಹನ ಸವಾರರು ಮತ್ತು ಸ್ಥಳೀಯರು ಬಿದ್ದಿದ್ದ ಮಗು ನೋಡಿ ರಕ್ಷಣೆ ಮಾಡಿದ್ದರು. ಕೂಡಲೇ ಅಥಣಿ ಪೊಲೀಸರಿಗೆ ಸುದ್ದಿ ಮುಟ್ಟಿಸಿ ಆರೋಗ್ಯ ಇಲಾಖೆಗೂ ತಿಳಿಸಿ ಮಗುವಿನ ಜೀವ ಉಳಿಸಿದ್ದರು. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಗದ್ದೆಯಲ್ಲಿ ಬಿದ್ದ ಮಗುವನ್ನ ಆ್ಯಂಬುಲೆನ್ಸ್ ಮೂಲಕ ಅಥಣಿ ತಾಲೂಕು ಆಸ್ಪತ್ರೆಗೆ ರವಾನಿಸಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಹೆಣ್ಣು ಮಗುವಿಗೆ ಕೂಡಲೇ ಪ್ರಥಮ ಚಿಕಿತ್ಸೆ ನೀಡಿ ಜೀವ ಕಾಪಾಡಲಾಗಿತ್ತು. ಮಗುವಿನ ದೇಹದಲ್ಲಿ ಸುಟ್ಟ ಗಾಯ ಕಂಡು ಆಸ್ಪತ್ರೆ ಸಿಬ್ಬಂದಿ ಶಾಕ್ ಆಗಿದ್ರು. ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಸದ್ಯ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಮುಂದುವರೆದಿದೆ. ಮಗು ಪ್ರಾಣಾಪಾಯದಿಂದ ಪಾರಾಗಿದ್ದು ಜಿಲ್ಲಾಸ್ಪತ್ರೆ ಸಿಬ್ಬಂದಿ ಮಗುವಿನ ಆರೈಕೆ ಮಾಡ್ತಿದ್ದಾರೆ.

ಮಗುವಿನ ದೇಹದ ಮೇಲೆ ಸುಟ್ಟ ಗಾಯ ಇನ್ನು ಗದ್ದೆಯಲ್ಲಿ ಸಿಕ್ಕ ಮಗುವಿನ ದೇಹದ ಮೇಲಿರುವ ಸುಟ್ಟ ಗಾಯಗಳು ಅನುಮಾನ ಹುಟ್ಟಿಸಿವೆ. ಎರಡು ವರ್ಷದ ಹೆಣ್ಣು ಮಗುವಿನ ಮರ್ಮಾಂಗದಿಂದ ಹಿಡಿದು ಕತ್ತಿನವರೆಗೂ ಕೇರು ಬೀಜದಿಂದ ಸುಟ್ಟಿರುವ ಗಾಯಗಳಾಗಿವೆ. ಬೆನ್ನಿನ ಭಾಗದಲ್ಲೂ ಕೇರು ಬೀಜವಿಟ್ಟು ಸುಟ್ಟಿದ್ದಾರೆ. ದುಷ್ಕರ್ಮಿಗಳು ಹುಣ್ಣಿಮೆ ಹಿಂದಿನ ದಿನವೇ ದುಷ್ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ದೇಹದಲ್ಲಿನ ಸುಟ್ಟ ಗುರುತುಗಳು ವಾಮಾಚಾರಕ್ಕೆ ಬಾಲಕಿ ಬಳಕೆಯಾಗಿರುವುದನ್ನ ಎತ್ತಿ ಹಿಡಿದಂತಿವೆ. ಹೀಗಾಗಿ ವಾಮಾಚಾರ ಮಾಡಿ ಮಗು ಬಲಿ ಕೊಡಲು ಯತ್ನಿಸಿದ್ರಾ ಪಾಪಿಗಳು? ಎಂಬ ಪ್ರಶ್ನೆ ಎದ್ದಿದೆ. ಬಲಿ ಕೊಡುವ ಸಂದರ್ಭದಲ್ಲಿ ಯಾರೋ ಬಂದಿದ್ದಕ್ಕೆ ಅರ್ಧಕ್ಕೆ ಮುಗಿಸಿ ಮಗು ಎಸೆದು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ ಎಂದು ಸ್ಥಳೀಯರು ಶಂಕಿಸಿದ್ದಾರೆ.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ IPC ಸೆಕ್ಷನ್ 317, 307, ಪೋಸ್ಕೋ ಆ್ಯಕ್ಟ್ 6 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಗು ಗುರುತು ಪತ್ತೆಗೆ ಅಥಣಿ ಡಿವೈಎಸ್‌ಪಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದ್ದು ನಾಲ್ಕು ದಿನ ಕಳೆದ್ರೂ ಮಗುವಿನ ಗುರುತು ಪತ್ತೆಯಾಗಿಲ್ಲ. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದ ಪೊಲೀಸರಿಗೂ ಬಾಲಕಿ ಕುರಿತು ಮಾಹಿತಿ ರವಾನೆ ಮಾಡಲಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಬೆಡಗಿಗೆ ‘ಸಲಾರ್​’ ಚಿತ್ರದಲ್ಲಿ ಪ್ರಶಾಂತ್​ ನೀಲ್​ ಚಾನ್ಸ್​ ಕೊಟ್ಟಿದ್ದು ನಿಜವೇ? ಇಲ್ಲಿದೆ ಅಸಲಿಯತ್ತು

Published On - 9:49 am, Tue, 28 September 21

Follow Us
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’