AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: 2 ವರ್ಷದ ಹೆಣ್ಣು ಮಗು ಬಿಸಾಡಿದ ಪ್ರಕರಣ; ಚಿಕಿತ್ಸೆ ಫಲಿಸದೆ ಮಗು ಸಾವು

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸೆ.23ರಂದು ಮಗು ಪತ್ತೆಯಾಗಿತ್ತು. ಇದೀಗ ಮಗುವಿನ ಗುರುತು ಸಿಗುವ ಮುನ್ನವೇ ಕಂದಮ್ಮ ಸಾವನ್ನಪ್ಪಿದೆ. ಸದ್ಯ ಆಸ್ಪತ್ರೆ ಸಿಬ್ಬಂದಿಗಳು ಮಗುವಿನ ಮೃತದೇಹವನ್ನು ಶವಗಾರಕ್ಕೆ ವರ್ಗಾವಣೆ ಮಾಡಿದ್ದಾರೆ.

ಬೆಳಗಾವಿ: 2 ವರ್ಷದ ಹೆಣ್ಣು ಮಗು ಬಿಸಾಡಿದ ಪ್ರಕರಣ; ಚಿಕಿತ್ಸೆ ಫಲಿಸದೆ ಮಗು ಸಾವು
ಸಾಂದರ್ಭಿಕ ಚಿತ್ರ
TV9 Web
| Updated By: preethi shettigar|

Updated on: Oct 01, 2021 | 1:50 PM

Share

ಬೆಳಗಾವಿ: ಎರಡು ವರ್ಷದ ಹೆಣ್ಣು ಮಗುವನ್ನು ಕಬ್ಬಿನ ಗದ್ದೆಯಲ್ಲಿ ಬಿಸಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಅಕ್ಟೋಬರ್ 1) ಚಿಕಿತ್ಸೆ ಫಲಿಸದೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸೆ.23ರಂದು ಮಗು ಪತ್ತೆಯಾಗಿತ್ತು. ಇದೀಗ ಮಗುವಿನ ಗುರುತು ಸಿಗುವ ಮುನ್ನವೇ ಕಂದಮ್ಮ ಸಾವನ್ನಪ್ಪಿದೆ. ಸದ್ಯ ಆಸ್ಪತ್ರೆ ಸಿಬ್ಬಂದಿಗಳು ಮಗುವಿನ ಮೃತದೇಹವನ್ನು ಶವಗಾರಕ್ಕೆ ವರ್ಗಾವಣೆ ಮಾಡಿದ್ದಾರೆ.

ವಾಮಾಚಾರಕ್ಕೆ ಬಳಸಿಕೊಂಡು ಕಬ್ಬಿನ ಗದ್ದೆಯಲ್ಲಿ ಮಗು ಬಿಸಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ವಾಹನ ಸವಾರರು ಮತ್ತು ಸ್ಥಳೀಯರು  ಕಬ್ಬಿನ ಗದ್ದೆಯಲ್ಲಿ ಬಿದ್ದಿದ್ದ ಮಗು ನೋಡಿ ರಕ್ಷಣೆ ಮಾಡಿದ್ದರು. ಕೂಡಲೇ ಅಥಣಿ ಪೊಲೀಸರಿಗೆ ಸುದ್ದಿ ಮುಟ್ಟಿಸಿ ಮಗುವಿನ ಜೀವ ಉಳಿಸಿದ್ದರು. ಗದ್ದೆಯಲ್ಲಿ ಬಿದ್ದ ಮಗುವನ್ನು ಆ್ಯಂಬುಲೆನ್ಸ್ ಮೂಲಕ ಅಥಣಿ ತಾಲೂಕು ಆಸ್ಪತ್ರೆಗೆ ಪೊಲೀಸರು ರವಾನಿಸಿದ್ದರು.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಹೆಣ್ಣು ಮಗುವಿಗೆ ಸಿಬ್ಬಂದಿ ಕೂಡಲೇ ಪ್ರಥಮ ಚಿಕಿತ್ಸೆ ನೀಡಿದ್ದರು‌. ಮಗುವಿನ ದೇಹದ ಮೇಲೆ ಗೇರುಬೀಜವಿಟ್ಟು ದುಷ್ಕರ್ಮಿಗಳು ಸುಟ್ಟಿರುವುದು ಈ ವೆಳೆ ಬೆಳಕಿಗೆ ಬಂದಿತ್ತು. ಮಾಟ ಮಂತ್ರ ಮಾಡುವ ಉದ್ದೇಶದಿಂದ ಗೇರುಬೀಜ ಸುಟ್ಟು ಮಗುವನ್ನು ದುಷ್ಕರ್ಮಿಗಳು ಬಲಿ ಪಡೆದಿದ್ದಾರೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಗುವಿನ ಗುರುತಿಗಾಗಿ ಎಫ್‌ಎಸ್‌ಎಲ್​ಗೆ ಸ್ಯಾಂಪಲ್ ಅನ್ನು ಪೊಲೀಸರು ರವಾನಿಸಿದ್ದರು. ಆದರೆ ವಿಡಿಯೋ ಕ್ಲಿಯರ್ ಇಲ್ಲದಕ್ಕೆ ಎಫ್‌ಎಸ್‌ಎಲ್ ಸ್ಯಾಂಪಲ್ ರಿಜಕ್ಟ್ ಮಾಡಿದೆ.

ಇದನ್ನೂ ಓದಿ: ಕಬ್ಬಿನ ಗದ್ದೆಯಲ್ಲಿ 2 ವರ್ಷದ ಹೆಣ್ಣು ಮಗು: ದೇಹದ ಮೇಲೆ ಸುಟ್ಟ ಗಾಯ, ವಾಮಾಚಾರಕ್ಕಾಗಿ ಮಗು ಬಲಿಗೆ ಮುಂದಾಗಿದ್ರಾ ಪೋಷಕರು?

ಗದಗ: ಮಗು ಜತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಯತ್ನ ಪ್ರಕರಣ; ಮಲಪ್ರಭಾ ನದಿಯಲ್ಲಿ ಮಗುವಿನ ಶವ ಪತ್ತೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ