AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: 2 ವರ್ಷದ ಹೆಣ್ಣು ಮಗು ಬಿಸಾಡಿದ ಪ್ರಕರಣ; ಚಿಕಿತ್ಸೆ ಫಲಿಸದೆ ಮಗು ಸಾವು

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸೆ.23ರಂದು ಮಗು ಪತ್ತೆಯಾಗಿತ್ತು. ಇದೀಗ ಮಗುವಿನ ಗುರುತು ಸಿಗುವ ಮುನ್ನವೇ ಕಂದಮ್ಮ ಸಾವನ್ನಪ್ಪಿದೆ. ಸದ್ಯ ಆಸ್ಪತ್ರೆ ಸಿಬ್ಬಂದಿಗಳು ಮಗುವಿನ ಮೃತದೇಹವನ್ನು ಶವಗಾರಕ್ಕೆ ವರ್ಗಾವಣೆ ಮಾಡಿದ್ದಾರೆ.

ಬೆಳಗಾವಿ: 2 ವರ್ಷದ ಹೆಣ್ಣು ಮಗು ಬಿಸಾಡಿದ ಪ್ರಕರಣ; ಚಿಕಿತ್ಸೆ ಫಲಿಸದೆ ಮಗು ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 01, 2021 | 1:50 PM

Share

ಬೆಳಗಾವಿ: ಎರಡು ವರ್ಷದ ಹೆಣ್ಣು ಮಗುವನ್ನು ಕಬ್ಬಿನ ಗದ್ದೆಯಲ್ಲಿ ಬಿಸಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಅಕ್ಟೋಬರ್ 1) ಚಿಕಿತ್ಸೆ ಫಲಿಸದೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸೆ.23ರಂದು ಮಗು ಪತ್ತೆಯಾಗಿತ್ತು. ಇದೀಗ ಮಗುವಿನ ಗುರುತು ಸಿಗುವ ಮುನ್ನವೇ ಕಂದಮ್ಮ ಸಾವನ್ನಪ್ಪಿದೆ. ಸದ್ಯ ಆಸ್ಪತ್ರೆ ಸಿಬ್ಬಂದಿಗಳು ಮಗುವಿನ ಮೃತದೇಹವನ್ನು ಶವಗಾರಕ್ಕೆ ವರ್ಗಾವಣೆ ಮಾಡಿದ್ದಾರೆ.

ವಾಮಾಚಾರಕ್ಕೆ ಬಳಸಿಕೊಂಡು ಕಬ್ಬಿನ ಗದ್ದೆಯಲ್ಲಿ ಮಗು ಬಿಸಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ವಾಹನ ಸವಾರರು ಮತ್ತು ಸ್ಥಳೀಯರು  ಕಬ್ಬಿನ ಗದ್ದೆಯಲ್ಲಿ ಬಿದ್ದಿದ್ದ ಮಗು ನೋಡಿ ರಕ್ಷಣೆ ಮಾಡಿದ್ದರು. ಕೂಡಲೇ ಅಥಣಿ ಪೊಲೀಸರಿಗೆ ಸುದ್ದಿ ಮುಟ್ಟಿಸಿ ಮಗುವಿನ ಜೀವ ಉಳಿಸಿದ್ದರು. ಗದ್ದೆಯಲ್ಲಿ ಬಿದ್ದ ಮಗುವನ್ನು ಆ್ಯಂಬುಲೆನ್ಸ್ ಮೂಲಕ ಅಥಣಿ ತಾಲೂಕು ಆಸ್ಪತ್ರೆಗೆ ಪೊಲೀಸರು ರವಾನಿಸಿದ್ದರು.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಹೆಣ್ಣು ಮಗುವಿಗೆ ಸಿಬ್ಬಂದಿ ಕೂಡಲೇ ಪ್ರಥಮ ಚಿಕಿತ್ಸೆ ನೀಡಿದ್ದರು‌. ಮಗುವಿನ ದೇಹದ ಮೇಲೆ ಗೇರುಬೀಜವಿಟ್ಟು ದುಷ್ಕರ್ಮಿಗಳು ಸುಟ್ಟಿರುವುದು ಈ ವೆಳೆ ಬೆಳಕಿಗೆ ಬಂದಿತ್ತು. ಮಾಟ ಮಂತ್ರ ಮಾಡುವ ಉದ್ದೇಶದಿಂದ ಗೇರುಬೀಜ ಸುಟ್ಟು ಮಗುವನ್ನು ದುಷ್ಕರ್ಮಿಗಳು ಬಲಿ ಪಡೆದಿದ್ದಾರೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಗುವಿನ ಗುರುತಿಗಾಗಿ ಎಫ್‌ಎಸ್‌ಎಲ್​ಗೆ ಸ್ಯಾಂಪಲ್ ಅನ್ನು ಪೊಲೀಸರು ರವಾನಿಸಿದ್ದರು. ಆದರೆ ವಿಡಿಯೋ ಕ್ಲಿಯರ್ ಇಲ್ಲದಕ್ಕೆ ಎಫ್‌ಎಸ್‌ಎಲ್ ಸ್ಯಾಂಪಲ್ ರಿಜಕ್ಟ್ ಮಾಡಿದೆ.

ಇದನ್ನೂ ಓದಿ: ಕಬ್ಬಿನ ಗದ್ದೆಯಲ್ಲಿ 2 ವರ್ಷದ ಹೆಣ್ಣು ಮಗು: ದೇಹದ ಮೇಲೆ ಸುಟ್ಟ ಗಾಯ, ವಾಮಾಚಾರಕ್ಕಾಗಿ ಮಗು ಬಲಿಗೆ ಮುಂದಾಗಿದ್ರಾ ಪೋಷಕರು?

ಗದಗ: ಮಗು ಜತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಯತ್ನ ಪ್ರಕರಣ; ಮಲಪ್ರಭಾ ನದಿಯಲ್ಲಿ ಮಗುವಿನ ಶವ ಪತ್ತೆ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!