AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: 2 ವರ್ಷದ ಹೆಣ್ಣು ಮಗು ಬಿಸಾಡಿದ ಪ್ರಕರಣ; ಚಿಕಿತ್ಸೆ ಫಲಿಸದೆ ಮಗು ಸಾವು

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸೆ.23ರಂದು ಮಗು ಪತ್ತೆಯಾಗಿತ್ತು. ಇದೀಗ ಮಗುವಿನ ಗುರುತು ಸಿಗುವ ಮುನ್ನವೇ ಕಂದಮ್ಮ ಸಾವನ್ನಪ್ಪಿದೆ. ಸದ್ಯ ಆಸ್ಪತ್ರೆ ಸಿಬ್ಬಂದಿಗಳು ಮಗುವಿನ ಮೃತದೇಹವನ್ನು ಶವಗಾರಕ್ಕೆ ವರ್ಗಾವಣೆ ಮಾಡಿದ್ದಾರೆ.

ಬೆಳಗಾವಿ: 2 ವರ್ಷದ ಹೆಣ್ಣು ಮಗು ಬಿಸಾಡಿದ ಪ್ರಕರಣ; ಚಿಕಿತ್ಸೆ ಫಲಿಸದೆ ಮಗು ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 01, 2021 | 1:50 PM

Share

ಬೆಳಗಾವಿ: ಎರಡು ವರ್ಷದ ಹೆಣ್ಣು ಮಗುವನ್ನು ಕಬ್ಬಿನ ಗದ್ದೆಯಲ್ಲಿ ಬಿಸಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಅಕ್ಟೋಬರ್ 1) ಚಿಕಿತ್ಸೆ ಫಲಿಸದೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸೆ.23ರಂದು ಮಗು ಪತ್ತೆಯಾಗಿತ್ತು. ಇದೀಗ ಮಗುವಿನ ಗುರುತು ಸಿಗುವ ಮುನ್ನವೇ ಕಂದಮ್ಮ ಸಾವನ್ನಪ್ಪಿದೆ. ಸದ್ಯ ಆಸ್ಪತ್ರೆ ಸಿಬ್ಬಂದಿಗಳು ಮಗುವಿನ ಮೃತದೇಹವನ್ನು ಶವಗಾರಕ್ಕೆ ವರ್ಗಾವಣೆ ಮಾಡಿದ್ದಾರೆ.

ವಾಮಾಚಾರಕ್ಕೆ ಬಳಸಿಕೊಂಡು ಕಬ್ಬಿನ ಗದ್ದೆಯಲ್ಲಿ ಮಗು ಬಿಸಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ವಾಹನ ಸವಾರರು ಮತ್ತು ಸ್ಥಳೀಯರು  ಕಬ್ಬಿನ ಗದ್ದೆಯಲ್ಲಿ ಬಿದ್ದಿದ್ದ ಮಗು ನೋಡಿ ರಕ್ಷಣೆ ಮಾಡಿದ್ದರು. ಕೂಡಲೇ ಅಥಣಿ ಪೊಲೀಸರಿಗೆ ಸುದ್ದಿ ಮುಟ್ಟಿಸಿ ಮಗುವಿನ ಜೀವ ಉಳಿಸಿದ್ದರು. ಗದ್ದೆಯಲ್ಲಿ ಬಿದ್ದ ಮಗುವನ್ನು ಆ್ಯಂಬುಲೆನ್ಸ್ ಮೂಲಕ ಅಥಣಿ ತಾಲೂಕು ಆಸ್ಪತ್ರೆಗೆ ಪೊಲೀಸರು ರವಾನಿಸಿದ್ದರು.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಹೆಣ್ಣು ಮಗುವಿಗೆ ಸಿಬ್ಬಂದಿ ಕೂಡಲೇ ಪ್ರಥಮ ಚಿಕಿತ್ಸೆ ನೀಡಿದ್ದರು‌. ಮಗುವಿನ ದೇಹದ ಮೇಲೆ ಗೇರುಬೀಜವಿಟ್ಟು ದುಷ್ಕರ್ಮಿಗಳು ಸುಟ್ಟಿರುವುದು ಈ ವೆಳೆ ಬೆಳಕಿಗೆ ಬಂದಿತ್ತು. ಮಾಟ ಮಂತ್ರ ಮಾಡುವ ಉದ್ದೇಶದಿಂದ ಗೇರುಬೀಜ ಸುಟ್ಟು ಮಗುವನ್ನು ದುಷ್ಕರ್ಮಿಗಳು ಬಲಿ ಪಡೆದಿದ್ದಾರೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಗುವಿನ ಗುರುತಿಗಾಗಿ ಎಫ್‌ಎಸ್‌ಎಲ್​ಗೆ ಸ್ಯಾಂಪಲ್ ಅನ್ನು ಪೊಲೀಸರು ರವಾನಿಸಿದ್ದರು. ಆದರೆ ವಿಡಿಯೋ ಕ್ಲಿಯರ್ ಇಲ್ಲದಕ್ಕೆ ಎಫ್‌ಎಸ್‌ಎಲ್ ಸ್ಯಾಂಪಲ್ ರಿಜಕ್ಟ್ ಮಾಡಿದೆ.

ಇದನ್ನೂ ಓದಿ: ಕಬ್ಬಿನ ಗದ್ದೆಯಲ್ಲಿ 2 ವರ್ಷದ ಹೆಣ್ಣು ಮಗು: ದೇಹದ ಮೇಲೆ ಸುಟ್ಟ ಗಾಯ, ವಾಮಾಚಾರಕ್ಕಾಗಿ ಮಗು ಬಲಿಗೆ ಮುಂದಾಗಿದ್ರಾ ಪೋಷಕರು?

ಗದಗ: ಮಗು ಜತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಯತ್ನ ಪ್ರಕರಣ; ಮಲಪ್ರಭಾ ನದಿಯಲ್ಲಿ ಮಗುವಿನ ಶವ ಪತ್ತೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ