AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದ ಕರಾಳತೆ ಬಿಚ್ಚಿಡುತ್ತಿದೆ ಘಟಪ್ರಭಾ ನದಿ; ಅಪರಿಚಿತ ಶವ ಪತ್ತೆ

ಮೃತದೇಹ ಪ್ರವಾಹದಲ್ಲಿ ತೇಲಿ ಬಂತಾ ಅಥವಾ ಯಾರಾದರೂ ಕೊಲೆ ಮಾಡಿ ಬೀಸಾಡಿದ್ದಾರಾ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಪ್ರವಾಹದ ಕರಾಳತೆ ಬಿಚ್ಚಿಡುತ್ತಿದೆ ಘಟಪ್ರಭಾ ನದಿ; ಅಪರಿಚಿತ ಶವ ಪತ್ತೆ
ಅಪರಿಚಿತನ ಶವ ಪತ್ತೆಯಾಗಿದೆ
TV9 Web
| Edited By: |

Updated on:Jul 31, 2021 | 11:16 AM

Share

ಬೆಳಗಾವಿ: ಅಪರಿಚಿತ ಮೃತದೇಹವೊಂದು ಘಟಪ್ರಭಾ ನದಿಯಲ್ಲಿ ತೇಲಿ ಬಂದಿದೆ. ಕೊಳೆತ ಸ್ಥಿತಿಯಲ್ಲಿ ಮೆಳವಂಕಿ ಗ್ರಾಮದ ನದಿ ತೀರದ ಗದ್ದೆಯಲ್ಲಿ ಅಪರಿಚಿತನ ಶವ (Dead Body) ಪತ್ತೆಯಾಗಿದೆ. ಘಟಪ್ರಭಾ ನದಿ (Ghataprabha River) ನೀರು ಆವರಿಸಿ ಕಬ್ಬಿನ ಗದ್ದೆ ಜಲಾವೃತವಾಗಿತ್ತು. ನದಿ ನೀರಿನ ಮಟ್ಟ ಕಡಿಮೆಯಾದ ಮೇಲೆ ಶವ ಪತ್ತೆಯಾಗಿದೆ. ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರತೇ ಸಿಗದ ಸ್ಥಿತಿಯಲ್ಲಿ ಪತ್ತೆಯಾಗಿರುವ ವ್ಯಕ್ತಿಯ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮೃತದೇಹ ಪ್ರವಾಹದಲ್ಲಿ ತೇಲಿ ಬಂತಾ ಅಥವಾ ಯಾರಾದರೂ ಕೊಲೆ ಮಾಡಿ ಬೀಸಾಡಿದ್ದಾರಾ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಗದಗದಲ್ಲಿ ಬೆಳೆ ಹಾನಿ ಮಾಹಿತಿ ಗದಗ: ಮಲಪ್ರಭಾ, ತುಂಗಭದ್ರಾ ಹಾಗೂ ಬೆಣ್ಣೆಹಳ್ಳ ಪ್ರವಾಹಕ್ಕೆ ರೈತರ ಬದುಕು ಕೊಚ್ಚಿಹೋಗಿದೆ. ಕೃಷಿ ಇಲಾಖೆ ಪ್ರಾಥಮಿಕ ವರದಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 20,278 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ನರಗುಂದ ತಾಲೂಕಿನಲ್ಲಿ 14,500 ಹೆಕ್ಟೇರ್ ಪ್ರದೇಶದಲ್ಲಿ ಅತಿ ಹೆಚ್ಚು ಬೆಳೆ ಹಾನಿಯಾಗಿದೆ. ರೋಣ ತಾಲೂಕಿನಲ್ಲಿ 6,100 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಮುಂಡರಗಿ ತಾಲೂಕಿನಲ್ಲಿ ಕಬ್ಬು, ಭತ್ತ ಸೇರಿ 147 ಹೆಕ್ಟೇರ್ ಬೆಳೆ ಹಾಳಾಗಿದೆ.

13 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆ ಸಂಪೂರ್ಣ ಹಾಳಾಗಿದೆ. ಮೆಕ್ಕೆಜೋಳ 7 ಸಾವಿರ ಹೆಕ್ಟೇರ್, ಶೇಂಗಾ, ಹತ್ತಿ ಸೇರಿದಂತೆ ಹಲವು ಬೆಳೆಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 21 ಕೋಟಿಯಷ್ಟು ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಪ್ರವಾಹಕ್ಕೆ ಸಿಕ್ಕ ಬೆಳೆ

ಇದನ್ನೂ ಓದಿ

ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಇಬ್ಬರ ಬಂಧನ; ಸರಗಳ್ಳರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾದ ಕುದೂರು ಪೊಲೀಸರು

ಮೀನುಗಾರನಹಳ್ಳಿಯಲ್ಲಿ ಮನೆ ಮುಂದೆ ನೀರು ಬಿಟ್ಟರೆಂಬ ಕಾರಣಕ್ಕೆ ಅಜ್ಜಿ ಮೇಲೆ ಹಲ್ಲೆ

(Unknown person dead body found in Ghataprabha River at belagavi)

Published On - 11:16 am, Sat, 31 July 21

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು