AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾವಶ್ಯಕ ಗರ್ಭಕೋಶ ಶಸ್ತ್ರ ಚಿಕಿತ್ಸೆ; ಸರ್ಕಾರಿ ವೈದ್ಯನ ವಂಚನೆಗೆ ಸುವರ್ಣ ವಿಧಾನಸೌಧ ಬಳಿ ಮಹಿಳೆಯರಿಂದ ಧರಣಿ

ಕಳೆದ ಎಂಟು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಸರ್ಕಾರ ಕಿವಿಗೊಡುತ್ತಿಲ್ಲ ಎಂದು ಮಹಿಳೆಯರು ಕಣ್ಣೀರು ಹಾಕುತ್ತಿದ್ದು, ತಮಗೆ ನ್ಯಾಯ ದೊರಕಿಸಿಕೊಡುವಂತೆ ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ವೇಳೆ ಮನವಿ ಸ್ವೀಕರಿಸಲು ಬಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎದುರು ಮಹಿಳೆಯರು ಕಣ್ಣೀರಿಟ್ಟಿದ್ದಾರೆ.

ಅನಾವಶ್ಯಕ ಗರ್ಭಕೋಶ ಶಸ್ತ್ರ ಚಿಕಿತ್ಸೆ; ಸರ್ಕಾರಿ ವೈದ್ಯನ ವಂಚನೆಗೆ ಸುವರ್ಣ ವಿಧಾನಸೌಧ ಬಳಿ ಮಹಿಳೆಯರಿಂದ ಧರಣಿ
ಪ್ರಾತಿನಿಧಿಕ ಚಿತ್ರ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 05, 2023 | 5:14 PM

Share

ಬೆಳಗಾವಿ, ಡಿ.05: ಸರ್ಕಾರಿ ವೈದ್ಯನ ವಂಚನೆಯಿಂದ ಅನಾವಶ್ಯಕ ಗರ್ಭಕೋಶ ಶಸ್ತ್ರ ಚಿಕಿತ್ಸೆಗೊಳಗಾದ ಮಹಿಳೆಯರು ಕಣ್ಣೀರು ಹಾಕುತ್ತಾ ಬೆಳಗಾವಿಯ ಸುವರ್ಣ ವಿಧಾನಸೌಧ(Suvarna Vidhana Soudha) ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು (Ranebennuru)ತಾಲೂಕು ಆಸ್ಪತ್ರೆ ವೈದ್ಯ ಡಾ.ಪಿ.ಶಾಂತ ಧನ ದಾಹಕ್ಕೆ 1500 ಕ್ಕೂ ಹೆಚ್ಚು ಮಹಿಳೆಯರು ನರಳಾಟ ನಡೆಸುವಂತಾಗಿದೆ. ಶಸ್ತ್ರಚಿಕಿತ್ಸೆ ಬಳಿಕ ದೈಹಿಕವಾಗಿ ಮಾನಸಿಕವಾಗಿ ತೊಂದರೆ ಆಗುತ್ತಿದೆ. ಈ ಹಿನ್ನಲೆ ಆರ್ಥಿಕ ನೆರವು ಘೋಷಣೆಗೆ ಆಗ್ರಹಿಸಿ ಶಸ್ತ್ರಚಿಕಿತ್ಸೆಗೊಳಗಾದ ಮಹಿಳೆಯರು ಧರಣಿ ನಡೆಸಿದ್ದಾರೆ.

ಎಂಟು ವರ್ಷಗಳಿಂದ ಹೋರಾಟ

ಕಳೆದ ಎಂಟು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಸರ್ಕಾರ ಕಿವಿಗೊಡುತ್ತಿಲ್ಲ ಎಂದು ಮಹಿಳೆಯರು ಕಣ್ಣೀರು ಹಾಕುತ್ತಿದ್ದು, ತಮಗೆ ನ್ಯಾಯ ದೊರಕಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ವೇಳೆ ಮನವಿ ಸ್ವೀಕರಿಸಲು ಬಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎದುರು ಮಹಿಳೆಯರು ಕಣ್ಣೀರಿಟ್ಟಿದ್ದು, ಸಿಎಂ ಗಮ‌ನಕ್ಕೆ ತಂದು ಪರಿಹಾರ ಕೊಡಿಸುವುದಾಗಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಜೊತೆಗೆ 2010 ರಿಂದ 2016ರ ಅವಧಿಯಲ್ಲಿ 1522 ಮಹಿಳೆಯರಿಗೆ ಅನಾವಶ್ಯಕ ಗರ್ಭಕೋಶ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ ಡಾ‌‌.ಪಿ.ಶಾಂತ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಅರ್ಜುನ ಆನೆಯ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರಿಂದ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಡೇಟ್​ ಆಗುತ್ತಿದೆ….

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?