AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಭಾಗಕ್ಕೆ ವಂದೇ ಮಾತರಂ ರೈಲು, ಕೆಲವೇ ದಿನಗಳಲ್ಲಿ ಮಹದಾಯಿ ಯೋಜನೆಗೆ ಶಂಕುಸ್ಥಾಪನೆ: ಯಡಿಯೂರಪ್ಪ ಘೋಷಣೆ

ಬೆಳಗಾವಿ ಭಾಗಕ್ಕೆ ವಂದೇ ಮಾತರಂ ರೈಲು ಯೋಜನೆ ಜಾರಿಯಾಗಲಿದೆ. ಹಾಗೇ ಕೆಲವೇ ದಿನಗಳಲ್ಲಿ ಮಹದಾಯಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದಾರೆ.

ಬೆಳಗಾವಿ ಭಾಗಕ್ಕೆ ವಂದೇ ಮಾತರಂ ರೈಲು, ಕೆಲವೇ ದಿನಗಳಲ್ಲಿ ಮಹದಾಯಿ ಯೋಜನೆಗೆ ಶಂಕುಸ್ಥಾಪನೆ: ಯಡಿಯೂರಪ್ಪ ಘೋಷಣೆ
ಬಿಎಸ್ ಯಡಿಯೂರಪ್ಪ
TV9 Web
| Edited By: |

Updated on: Jan 28, 2023 | 6:20 PM

Share

ಬೆಳಗಾವಿ: ಎಲೆಕ್ಷನ್​ಗೆ ರಣಕಹಳೆ ಮೊಳಗಿಸಿರುವ ರಾಜ್ಯ ಕೇಸರಿ ಪಡೆಗೆ ಇಂದು ಅಮಿತ್ ಶಾ  ಎಂಟ್ರಿಯಿಂದ ಮತ್ತಷ್ಟು ಹುರುಪು ತುಂಬಿತ್ತು. ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಚಾಣಕ್ಯ ಮಿಂಚಿನ ಸಂಚಾರ ನಡೆಸಿದರು. ಇನ್ನು ಬೆಳಗಾವಿ(Belagavi) ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಇಂದು(ಜನವರಿ 28) ನಡೆದ ಬಿಜೆಪಿ ಬೃಹತ್ ಜನಸಂಕಲ್ಪ​​ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರು ಬೆಳಗಾವಿ ಭಾಗಕ್ಕೆ ವಂದೇ ಮಾತರಂ ರೈಲು (vande bharat train)ಯೋಜನೆ ಜಾರಿಯಾಗಲಿದೆ. ಹಾಗೇ ಕೆಲವೇ ದಿನಗಳಲ್ಲಿ ಮಹದಾಯಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಘೋಷಣೆ ಮಾಡಿದರು.

ಇದನ್ನೂ ಓದಿ: NFSU: ಫಾರೆನ್ಸಿಕ್ ಯೂನಿವರ್ಸಿಟಿಗಾಗಿ ಪ್ರಲ್ಹಾದ್ ಜೋಶಿ ನನ್ನ ಗಂಟು ಬಿದ್ದಿದ್ದರು – ಜೋಶಿ ಕಾರ್ಯವೈಖರಿ ಶ್ಲಾಘಿಸಿದ ಅಮಿತ್ ಶಾ, ಸಿಎಂ ಬೊಮ್ಮಾಯಿ

ಇದು ವಿಜಯ ಸಂಕಲ್ಪ ಯಾತ್ರೆ ಅಲ್ಲ ವಿಜಯ ಯಾತ್ರೆ. ದೇಶದ ಇತಿಹಾಸದಲ್ಲಿ ಮನೆ ಮನೆಗೆ ಶುದ್ದ ನೀರು ಕೊಡುವ ಜಲಜೀವನ್ ಮಿಷನ್ ಯೋಜನೆ ಕೇವಲ ಬಿಜೆಪಿಗೆ ಮಾತ್ರ ಸಾಧ್ಯ. ಕಾಂಗ್ರೆಸ್ ಜನ ಹಿತ ಸಂಪೂರ್ಣ ಮರೆತು ಸ್ವಾರ್ಥಕ್ಕಾಗಿ ಮಾಡುತ್ತಿದ್ದಾರೆ. ರೈತರಿಗೆ ಹತ್ತು ಸಾವಿರ ರೂಪಾಯಿ ಕೊಡ್ತಿರುವ ತೃಪ್ತಿ ಇದೆ. ಒಂದೇ ಮಾತರಂ ರೈಲು ಮುಂದಿನ ದಿನಗಳಲ್ಲಿ ನೀಡುತ್ತೇವೆ. ಕಳಸಾಬಂಡೂರಿ ಯೋಜನೆಗೆ ಡಿಪಿಆರ್ ಆಗಿದ್ದು ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ತಡಿಯಲು ಯಾವ ಶಕ್ತಿಗೂ ಸಾಧ್ಯವಿಲ್ಲ. ರಾಜ್ಯದಲ್ಲಿ 140ಸ್ಥಾನಗಳನ್ನ ಗೆದ್ದು ಬಿಜೆಪಿ ಅಧಿಕಾರಕ್ಕೆ ತರೋಣ. ಬೆಳಗಾವಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರ ಗೆದ್ದು ಮತ್ತೊಮ್ಮೆ ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ತರೋಣ. ಉಕ್ಕಿನ ಮನುಷ್ಯ ದೇಶದ್ರೋಹಿಗಳಿಗೆ ಸಿಂಹ ಸ್ವಪ್ನ ಆಗಿರುವ ಅಮಿತ್ ಶಾ ಅವರು ಬಂದಿದ್ದಾರೆ. ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ದೇಶದ ಅಭಿವೃದ್ಧಿಯಾಗಿದೆ. ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಆಗುತ್ತಿದೆ. ಪ್ರಧಾನಿ ಮೋದಿ ಯಾವುದೇ ಕ್ಷೇತ್ರವನ್ನು ಕಡೆಗಣಿಸಿಲ್ಲ ಎಂದರು

ಉತ್ತರ ಕರ್ನಾಟಕದ ದಶಕಗಳ ಹೋರಾಟವಾದ ಮಹದಾಯಿ ಕಳಸಾ ಬಂಡೂರಿ ಯೋಜನೆ ಡಿಪಿಆರ್ ಗೆ ಕೇಂದ್ರ ಜಲ‌ ಆಯೋಗ ಅನುಮತಿ ನೀಡಿದೆ. ಈಗ ಅಧಿಕೃತವಾಗಿ ಕಾಮಗಾರಿಗೆ ಚಾಲನೆ ನೀಡಬೇಕಿದೆ. ಇದೀಗ ಆದಷ್ಟು ಬೇಗ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಬಿಎಸ್ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದು, ಮಹದಾಯಿ ಹೋರಾಟಗಾರರ ಸಂತಸಕ್ಕೆ ಕಾರಣವಾಗಿದೆ.

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ