AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಮತ್ತೆ ಏರುಪೇರು, ಐಸಿಯುನಲ್ಲಿ ಚಿಕಿತ್ಸೆ!

ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಕೂಡಲೇ ಅವರನ್ನು ಬೆಳಗಾವಿ ಕೆಎಲ್​ಇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ ತಿಳಿಸಿದ್ದಾರೆ.

ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಮತ್ತೆ ಏರುಪೇರು, ಐಸಿಯುನಲ್ಲಿ ಚಿಕಿತ್ಸೆ!
ರಮೇಶ ಜಿಗಜಿಣಗಿ
ಸಹದೇವ್​ ಮಾನೆ
| Edited By: |

Updated on:Mar 03, 2024 | 11:35 AM

Share

ವಿಜಯಪುರ, (ಮಾರ್ಚ್ 03): ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ (BJP MP ramesh jigajinagi) ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನಿನ್ನೆ (ಮಾರ್ಚ್​ 2) ತಡ ರಾತ್ರಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಕಳೆದ ಜನವರಿ 28ರಂದು ಸಹ ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಉಸಿರಾಟ ಸಮಸ್ಯೆಯಾಗಿತ್ತು. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ರಮೇಶ್ ಜಿಗಜಿಣಗಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.

ಇದನ್ನೂ ಓದಿ: ವಿಜಯಪುರ ಸಂಸದ‌ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ನಿನ್ನೆ ತಡ ರಾತ್ರಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ, ಆಸ್ಪತ್ರೆ ವೈದ್ಯರು, ಯಾರ ಭೇಟಿಗೂ ಅವಕಾಶ ಮಾಡಿಕೊಡುತ್ತಿಲ್ಲ. ನಿನ್ನೆ ಆಸ್ಪತ್ರೆ ಭೇಟಿ ಸಂದರ್ಭದಲ್ಲಿ ಒಳಗಡೆ ಬಿಟ್ಟಿಲ್ಲ. ಇಂದು ಮತ್ತೆ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತೇವೆ ಎಂದ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ತಿಳಿಸಿದ್ದಾರೆ.

ಜನವರಿಯಲ್ಲೂ ಆರೋಗ್ಯ ಸಮಸ್ಯೆ

ಕಳೆದ ಜನವರಿ 28ರಂದು ಅಷ್ಟೇ ರಮೇಶ್ ಜಿಗಜಿಣಗಿ ವಿಜಯಪುರದಿಂದ ಬೆಳಗಾವಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಏಕಾಏಕಿ ಉಸಿರಾಟ ಸಮಸ್ಯೆಯಾಗಿತ್ತು. ಆಗ ಜಿಗಜಿಣಗಿರನ್ನು ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ತಪಾಸಣೆ ಮಾಡಿ ಅಕ್ಸಿಜನ್ ಲೇವಲ್ ಕಮ್ಮಿ ಆಗಿತ್ತು. ಈ ಹಿನ್ನೆಲೆಯಲ್ಲಿ ಹಾರ್ಟ್ ಬಿಟ್ ವ್ಯತ್ಯಾಸ ಆಗಿತ್ತು ಎಂದು ಹೇಳಿದ್ದರು. ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಆದ್ರೆ, ಈ ಬಾರಿ ಏನಾಗಿದೆ ಎನ್ನುವುದು ಮಾತ್ರ ತಿಳಿದುಬಂದಿಲ್ಲ. ಈ ಬಗ್ಗೆ ಕುಟುಂಬಸ್ಥರು, ವೈದ್ಯರಾಗಲಿ ಇನ್ನೂ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.

ಚುನಾವಣಾ ಹೊತ್ತಿಲ್ಲೇ ಕೈಕೊಡುತ್ತಿರುವ ಆರೋಗ್ಯ

ವಿಜಯಪುರ ಎಸ್​​ಸಿ ಮೀಸಲು ಕ್ಷೇತ್ರದಿಂದ ಗೆದ್ದಿರುವ ರಮೇಶ್ ಜಿಗಜಿಣಗಿ ಅವರು ಈ ಬಾರಿಯೂ ಮತ್ತೆ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಮೊನ್ನೇ ಅಷ್ಟೇ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದರು. ಆದ್ರೆ, ಇದೀಗ ಅವರಿಗೆ  ಪದೇ ಪದೇ ಆರೋಗ್ಯ ಕೈಕೊಡುತ್ತಿದೆ. ಕಳೆದ ಎರಡು ತಿಂಗಳಲ್ಲಿ ಎರಡು ಬಾರಿ ಆರೋಗ್ಯ ಕೈಕೊಟ್ಟಿದೆ.  ಹೀಗಾಗಿ ಆರೋಗ್ಯ. ಮತ್ತು ವಯಸ್ಸಿನ   ದೃಷ್ಟಿಯಿಂದ ಈ ಬಾರಿ ಅವರಿಗೆ ಹೈಕಮಾಂಡ್ ಟಿಕೆಟ್ ನೀಡುವುದು ಅನುಮಾನ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:23 am, Sun, 3 March 24

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!