AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಮುಂಗಾರು ಮಳೆ ವಿಳಂಬ; ಜಲ ದಿಗ್ಬಂಧನ ಹಾಕಿ ದೇವರಿಗೆ ಶಿಕ್ಷೆ ನೀಡಿದ ಗ್ರಾಮಸ್ಥರು

ಮುಂಗಾರು ಮಳೆ ವಿಳಂಬ ಹಿನ್ನಲೆ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಜಲ ದಿಗ್ಬಂಧನ ಹಾಕಿ ದೇವರಿಗೆ ಶಿಕ್ಷೆ ನೀಡಿದ್ದಾರೆ.

Belagavi News: ಮುಂಗಾರು ಮಳೆ ವಿಳಂಬ; ಜಲ ದಿಗ್ಬಂಧನ ಹಾಕಿ ದೇವರಿಗೆ ಶಿಕ್ಷೆ ನೀಡಿದ ಗ್ರಾಮಸ್ಥರು
ದೇವರಿಗೆ ಜಲದಿಗ್ಬಂಧನ
ಕಿರಣ್ ಹನುಮಂತ್​ ಮಾದಾರ್
|

Updated on: Jun 16, 2023 | 9:23 AM

Share

ಬೆಳಗಾವಿ: ಜಿಲ್ಲೆಯಲ್ಲಿ ಬೆಳಗಾವಿ, ಧಾರವಾಡ, ಬಾಗಲಕೋಟ, ಗದಗ ಜಿಲ್ಲೆಯ ಜೀವನಾಡಿಯಾದ ಮಲಪ್ರಭಾ (Malaprabha River) ಖಾಲಿಯಾಗಿದ್ದಾಳೆ. ಇದರಿಂದ ಜಿಲ್ಲೆ ಸೇರಿ ಸವದತ್ತಿ, ಹುಬ್ಬಳ್ಳಿ, ಧಾರವಾಡಕ್ಕೆ ನೀರಿನ ಅಭಾವವಾಗುವ ಚಿಂತೆ ಎದುರಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ನವಿಲು ತೀರ್ಥ ಜಲಾಶಯ ಬಹುತೇಕ ಖಾಲಿಯಾಗಿದೆ. ಇನ್ನೊಂದು ವಾರದಲ್ಲಿ ಮಳೆ ಆಗದಿದ್ದರೆ, ಜಿಲ್ಲೆಯ ಜನರಿಗೆ ಕಂಟಕ ಕಾದಿದೆ. ಈ ಹಿನ್ನಲೆ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಜಲ ದಿಗ್ಬಂಧನ ಹಾಕಿ ದೇವರಿಗೆ ಶಿಕ್ಷೆ ನೀಡಿದ್ದಾರೆ. ಹೌದು ಬರಗಾಲದ ಮುನ್ಸೂಚನೆಗೆ ಹೆದರಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಗರ್ಭಗುಡಿಯಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ನೀರು ಹಾಕಿ, ಜಲ ದಿಗ್ಬಂಧನ ಮಾಡುವ ಮೂಲಕ ದೇವರನ್ನೇ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ.

ಮಲಪ್ರಭಾ ನದಿಯಿಂದ ನೀರು ತಂದು ದೇವರ ಮೂರ್ತಿ, ಗರ್ಭ ಗುಡಿಗೆ ಸುರಿದ ಗ್ರಾಮಸ್ಥರು

ಹೌದು 7 ದಿನಗಳ ಕಾಲ ಜಲ ದಿಗ್ಬಂಧನ ಹಾಕಿದಾಗ ಮಳೆಯಾಗುವ ವಾಡಿಕೆ ಈ ಗ್ರಾಮದಲ್ಲಿದೆ. ಬರಗಾಲದ ಸೂಚನೆ ಸಿಕ್ಕಾಗ ಗ್ರಾಮಸ್ಥರೆಲ್ಲರೂ ಸೇರಿ ಜಲ ದಿಗ್ಬಂಧನ ಹಾಕುತ್ತಾರೆ. 7 ದಿನಗಳ ನಂತರ ದೇವಸ್ಥಾನದ ಬಾಗಿಲು ಓಪನ್ ಮಾಡಿ, ಗ್ರಾಮಸ್ಥರು ಸೂರ್ಯನಾರಾಯಣ ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ಅದರಂತೆ ಇದೀಗ ಗರ್ಭಗುಡಿಯಲ್ಲಿ ನೀರು ಹಾಕಿ, ಬೀಗ ಹಾಕಿದ್ದಾರೆ.

ಇದನ್ನೂ ಓದಿ:ಮುಂಗಾರು ಮಳೆ ವಿಳಂಬ: ಮಳೆಗಾಗಿ ಶಾಸ್ತ್ರೋಕ್ತವಾಗಿ ಗೊಂಬೆ ವಿವಾಹ ಮಾಡಿದ ಜನ

ಜೂನ್ ತಿಂಗಳು ಶುರುವಾಗಿ ಈಗಾಗಲೇ ಅರ್ಧ ತಿಂಗಳು ಕಳೆದಿದ್ದು, ಆದರೂ ಕೂಡ ಮುಂಗಾರು ಮಳೆ ಇನ್ನು ಬಂದಿಲ್ಲ. ಇದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದ್ದು, ಉತ್ತರ ಕರ್ನಾಟಕದಲ್ಲಿ ಬರಗಾಲ ಛಾಯೆ ಮೂಡಿದೆ. ಜಿಲ್ಲೆಯ ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ, ವೇದಗಂಗಾ, ದೂಧ್ ಗಂಗಾ, ಮಾರ್ಕಂಡೇಯ ಹೀಗೆ ಏಳಕ್ಕೆ ಏಳು ನದಿಗಳು ಬತ್ತುವ ಆತಂಕ ಎದುರಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?