AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ

ಜೈಲಿನಿಂದ ಹೊರಬಂದು ಮಾತನಾಡಿದ ಮಾಜಿ ಸಚಿವ ವಿನಯ್ ಕುಲಕರ್ಣಿ, ನಾನು ನಿರ್ದೋಷಿಯಾಗಿ ಹೊರಬರುವ ವಿಶ್ವಾಸ ನನಗಿತ್ತು. ಹಾಗಾಗಿ ನನಗೆ ಸುಪ್ರೀಂಕೋರ್ಟ್​​ನಿಂದ ಜಾಮೀನು ಸಿಕ್ಕಿದೆ. ನನ್ನನ್ನು ಬೆಂಬಲಿಸಿದ್ದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ

ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ
ಜೈಲಿನಿಂದ ಹೊರಬಂದು ಅಭಿಮಾನಿಗಳಿಗೆ ಕೈ ಮುಗಿಯುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ
TV9 Web
| Edited By: sandhya thejappa|

Updated on:Aug 21, 2021 | 11:57 AM

Share

ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಗೌಡ (Hindalga Jail) ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ವಿನಯ್ ಕುಲಕರ್ಣಿ (Vinay Kulkarni) ಇಂದು (ಆಗಸ್ಟ್ 21) ಜೈಲಿನಿಂದ ಬಿಡುಗಡೆಯಾಗಿದ್ದಾರೆ. ವಿನಯ್ ಬೆಳಗಾವಿ ತಾಲೂಕಿನ ಹಿಂಡಲಗಾ (Hindalga Jail) ಜೈಲಿನಲ್ಲಿದ್ದರು. ಸುಪ್ರೀಂಕೋರ್ಟ್​ನಿಂದ ವಿನಯ್​ಗೆ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಬಳಿಕ ಆಗಸ್ಟ್ 19ರಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್​ನಿಂದ ಬೇಲ್ ಸಿಕ್ಕಿತ್ತು. ಜಾಮೀನಿನ ಮೇಲೆ ಇಂದು ವಿನಯ್ ಜೈಲಿನಿಂದ ಹೊರಬಂದಿದ್ದಾರೆ.

ಜೈಲಿನಿಂದ ಹೊರಬಂದು ಮಾತನಾಡಿದ ಮಾಜಿ ಸಚಿವ ವಿನಯ್ ಕುಲಕರ್ಣಿ, ನಾನು ನಿರ್ದೋಷಿಯಾಗಿ ಹೊರಬರುವ ವಿಶ್ವಾಸ ನನಗಿತ್ತು. ಹಾಗಾಗಿ ನನಗೆ ಸುಪ್ರೀಂಕೋರ್ಟ್​​ನಿಂದ ಜಾಮೀನು ಸಿಕ್ಕಿದೆ. ನನ್ನನ್ನು ಬೆಂಬಲಿಸಿದ್ದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. 9 ತಿಂಗಳ ಬಳಿಕ ನನಗೆ ಜಾಮೀನು ಸಿಕ್ಕಿದೆ. ಉಳಿದ ರಾಜಕಾರಣಿಗಳೇ ಬೇರೆ, ನಾನೇ ಬೇರೆ. ಕಟ್ಟ ಕಡೆಯ ವ್ಯಕ್ತಿಯಿಂದ ಶ್ರೀಮಂತರವರೆಗೆ ನನ್ನೊಂದಿಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಜೈಲಿನಿಂದ ಬಿಡುಗಡೆಯಾದ ವಿನಯ್ ಹಿಂಡಲಗಾ ಗಣಪತಿ ದೇವಸ್ಥಾನಕ್ಕೆ ಹೋಗುತ್ತಾರೆ. ಅಲ್ಲಿಂದ  ನಾಗನೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಮಾಜಿ ಸಚಿವ ಜೈಲಿನಿಂದ ಬಿಡುಗಡೆಯಾದ ಖುಷಿಯಲ್ಲಿ ಅವರ ಬೆಂಬಲಿಗರು ವಿನಯ್​ನ ಎತ್ತಿಕೊಂಡು ಸಂಭ್ರಮಿಸಿದ್ದಾರೆ. ಅಲ್ಲದೇ ವಿನಯ್​ ಪರ ಘೋಷಣೆ ಮುಗಿಲು ಮುಟ್ಟಿದೆ. ವಿಕೆ ವಿಕೆ ಅಭಿಮಾನಿಗಳು ಕೂಗುತ್ತಿದ್ದಾರೆ. ಮಹಿಳಾ ಕಾರ್ಯಕರ್ತೆಯರು ಧಾರವಾಡದಿಂದ ಆರತಿಯೊಂದಿಗೆ ಬಂದಿದ್ದಾರೆ.

ಬೆಳಗಾವಿಯ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿ ಮಠಕ್ಕೆ ಭೇಟಿ ನೀಡಿ ಅಲ್ಲಮಪ್ರಭು ಶ್ರೀಗಳ ಆಶೀರ್ವಾದ ಪಡೆದ ಬಳಿಕ ವಿನಯ್ ಕುಲಕರ್ಣಿ, ಮಧ್ಯಾಹ್ನ ಬೆಂಗಳೂರಿಗೆ ತೆರಳುವ ಸಾಧ್ಯತೆಯಿದೆ. ಸಾಂಬ್ರಾ ಏರ್‌ಪೋರ್ಟ್‌ಗೆ ತೆರಳಿ ಮಧ್ಯಾಹ್ನ 3.40ರ ಫ್ಲೈಟ್‌ಗೆ ಬೆಂಗಳೂರಿಗೆ ತೆರಳುವ ಸಾಧ್ಯತೆಯಿದೆ.

ಹಣೆಗೆ ತಿಲಕವಿಟ್ಟು ಸ್ವಾಗತಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಿಂಡಲಗಾ ಜೈಲಿನಿಂದ ಹೊರಬಂದ ವಿನಯ್ ಕುಲಕರ್ಣಿಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು. ಈ ವೇಳೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಣೆಗೆ ತಿಲಕವಿಟ್ಟು ಸ್ವಾಗತಿಸಿದರು.

ಇದನ್ನೂ ಓದಿ

ಜೈಲಿನಿಂದ ಬಿಡುಗಡೆಯಾಗುವ ವಿನಯ್ ಕುಲಕರ್ಣಿ ಸ್ವಾಗತಕ್ಕೆ ರಾಖಿ ಹಿಡಿದು ನಿಂತಿರುವ ಲಕ್ಷ್ಮೀ ಹೆಬ್ಬಾಳ್ಕರ್

5 ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿದ್ದ ಸರಗಳ್ಳರನ್ನು ಅರೆಸ್ಟ್​ ಮಾಡಿದ ಸಿಸಿಬಿ ಪೊಲೀಸರು

(Vinay Kulkarni has been released from Hindalga jail)

Published On - 11:29 am, Sat, 21 August 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ