ಪ್ರವಾಹ ಬಂದಾಗ ಕಷ್ಟ ಕೇಳಲಿಲ್ಲ, ಈಗ ಮತ ಕೇಳೋಕೆ ಬಂದಿದ್ದೀರಾ?

ಬೆಳಗಾವಿ: ಮತ ಕೇಳಲು ಬಂದ ಡಿಸಿಎಂ ಲಕ್ಷ್ಮಣ ಸವದಿ ಮತ್ತು BJP ಅಭ್ಯರ್ಥಿ ಮಹೇಶ ಕುಮಟಳ್ಳಿಗೆ ನದಿ ಇಂಗಳಗಾಂವ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೃಷ್ಣಾ ನದಿ ಪ್ರವಾಹದಲ್ಲಿ ಇಂಗಳಗಾಂವ ಸಂಪೂರ್ಣವಾಗಿ ಮುಳುಗಿ ಹೋಗಿತ್ತು. ನಮ್ಮ ಗ್ರಾಮದಲ್ಲಿ ಪ್ರವಾಹ ಬಂದಾಗ ಕಷ್ಟ ಕೇಳದೆ, ಈಗ ಮತ ಕೇಳೋಕೆ ಬಂದಿದ್ದೀರಾ ಎಂದು ಮತದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇರೋಕೆ‌ ಮನೆಯಿಲ್ಲ, ಸತ್ರೆ‌ ಹೂಳೋಕೆ ಸ್ಮಶಾನವೂ ಇಲ್ಲ, ಇಲ್ಲಿ ಶೌಚಾಲಯ ಸಹ ಇಲ್ಲ, ಪ್ರವಾಹ ಬಂದು ಹೋದರೂ ಏನೂ ಮಾಡಿಲ್ಲ ಎಂದು […]

ಪ್ರವಾಹ ಬಂದಾಗ ಕಷ್ಟ ಕೇಳಲಿಲ್ಲ, ಈಗ ಮತ ಕೇಳೋಕೆ ಬಂದಿದ್ದೀರಾ?
ಸಾಧು ಶ್ರೀನಾಥ್​

Updated on: Nov 24, 2019 | 2:49 PM

ಬೆಳಗಾವಿ: ಮತ ಕೇಳಲು ಬಂದ ಡಿಸಿಎಂ ಲಕ್ಷ್ಮಣ ಸವದಿ ಮತ್ತು BJP ಅಭ್ಯರ್ಥಿ ಮಹೇಶ ಕುಮಟಳ್ಳಿಗೆ ನದಿ ಇಂಗಳಗಾಂವ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೃಷ್ಣಾ ನದಿ ಪ್ರವಾಹದಲ್ಲಿ ಇಂಗಳಗಾಂವ ಸಂಪೂರ್ಣವಾಗಿ ಮುಳುಗಿ ಹೋಗಿತ್ತು. ನಮ್ಮ ಗ್ರಾಮದಲ್ಲಿ ಪ್ರವಾಹ ಬಂದಾಗ ಕಷ್ಟ ಕೇಳದೆ, ಈಗ ಮತ ಕೇಳೋಕೆ ಬಂದಿದ್ದೀರಾ ಎಂದು ಮತದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇರೋಕೆ‌ ಮನೆಯಿಲ್ಲ, ಸತ್ರೆ‌ ಹೂಳೋಕೆ ಸ್ಮಶಾನವೂ ಇಲ್ಲ, ಇಲ್ಲಿ ಶೌಚಾಲಯ ಸಹ ಇಲ್ಲ, ಪ್ರವಾಹ ಬಂದು ಹೋದರೂ ಏನೂ ಮಾಡಿಲ್ಲ ಎಂದು ಕಣ್ಣೀರು ಸುರಿಸಿದರು. ನಮಗೆ ಇರೋಕೆ ಮನೆಗಾಗಿ ಸೂಕ್ತ ಜಾಗ ಕೊಡಿಸಿ ಎಂದು ನೆರೆ ಸಂತ್ರಸ್ತರು ಕೈ ಮುಗಿದು ಕೇಳಿದ್ದಾರೆ. ಆದಕ್ಕೆ ಮತ ಕೇಳಲು ಬಂದಿದ್ದ ನಾಯಕರು ಚುನಾವಣೆ ಮುಗಿದ ಬಳಿಕ ಎಲ್ಲವೂ ಮಾಡಿ ಕೊಡುವುದಾಗಿ ಭರವಸೆ ನೀಡಿ, ಬಿಜೆಪಿಗೆ ಮತ ಹಾಕಿ ಎಂದು ಹೇಳಿ ಮುನ್ನಡೆದಿದ್ದಾರೆ.

 

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us