VTUನಲ್ಲಿ ಕೋಟ್ಯಾಂತರ ರೂ ಹಗರಣ, ಲೋಕಾಯುಕ್ತರಿಗೆ ದೂರು ನೀಡಲು ನಿರ್ಧಾರ

VTU Fund Scam: ಗುಣಮಟ್ಟ ಶಿಕ್ಷಣಕ್ಕೆ ಸರ್ಕಾರ ನೀಡಿದ ಕೋಟ್ಯಾಂತರ ಹಣ ಅಕ್ರಮವಾಗಿದೆ. ಬರೋಬ್ಬರಿ 172.2 ಕೋಟಿ ರೂಪಾಯಿ ಹಣ ದುರುಪಯೋಗವಾಗಿದೆ ಎಂದು ಆರ್‌ಟಿಐ ಕಾರ್ಯಕರ್ತ ಸುರೇಂದ್ರ ಉಗಾರೆ ಆರೋಪ ಮಾಡಿದ್ದಾರೆ.

VTUನಲ್ಲಿ ಕೋಟ್ಯಾಂತರ ರೂ ಹಗರಣ, ಲೋಕಾಯುಕ್ತರಿಗೆ ದೂರು ನೀಡಲು ನಿರ್ಧಾರ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU)
Follow us
|

Updated on:Feb 05, 2021 | 3:09 PM

ಬೆಳಗಾವಿ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ (VTU) ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಹಗರಣಗಳ ಹೊಳೆಯಲ್ಲಿ VTU ತೇಲುತ್ತಿದೆ. ಗುಣಮಟ್ಟ ಶಿಕ್ಷಣಕ್ಕೆ ಸರ್ಕಾರ ನೀಡಿದ ಕೋಟ್ಯಾಂತರ ಹಣ ಅಕ್ರಮವಾಗಿದೆ. ಬರೋಬ್ಬರಿ 172.2 ಕೋಟಿ ರೂಪಾಯಿ ಹಣ ದುರುಪಯೋಗವಾಗಿದೆ ಎಂದು ಆರ್‌ಟಿಐ ಕಾರ್ಯಕರ್ತ ಸುರೇಂದ್ರ ಉಗಾರೆ ಆರೋಪ ಮಾಡಿದ್ದಾರೆ. 2017-18 ನೇ ಸಾಲಿನ ವಾರ್ಷಿಕ ಲೆಕ್ಕ ಪರಿಶೋಧನಾ ವರದಿಯಲ್ಲಿ ಈ ಅಕ್ರಮ ಬಯಲಾಗಿದೆ.

ಬೆಳಗಾವಿಯ ವಕೀಲ ಸುರೇಂದ್ರ ಉಗಾರೆ ಆರ್‌ಟಿಐ ಅಡಿ ಸಲ್ಲಿಸಿದ್ದ ಅರ್ಜಿಯಲ್ಲಿ ಮಾಹಿತಿ ಬಹಿರಂಗಗೊಂಡಿದೆ. ವಿಟಿಯು ಖಾತೆಯಲ್ಲಿನ ಹಣ ಡ್ರಾ ಮಾಡಿಕೊಂಡು ಮತ್ತೆ ಅದೇ ಅಕೌಂಟ್​ಗೆ ಜಮೆ ಮಾಡಲಾಗಿದೆ. ನಿಗದಿತ ಉದ್ದೇಶವಿಲ್ಲದೇ ಹಣ ಡ್ರಾ ಮಾಡಿ ಮತ್ತೆ ಜಮೆ ಮಾಡಲಾಗಿದೆ. ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೇ ಮೌಲ್ಯಮಾಪನ ಕುಲಸಚಿವರಿಗೆ ₹109.60 ಕೋಟಿ ರೂಪಾಯಿ ಮುಂಗಡ ಹಣ ಪಾವತಿ ಮಾಡಲಾಗಿದೆ.

ನಿಯಮ ಬಾಹಿರವಾಗಿ ಗುತ್ತಿಗೆ ಸಿಬ್ಬಂದಿ ನೇಮಕ ಮಾಡಿ 28,44,517 ರೂಪಾಯಿ ಸಂದಾಯ ಮಾಡಲಾಗಿದೆ. 2017-18ನೇ ಸಾಲಿನ ಮೌಲ್ಯಮಾಪನ ಮುಂಗಡ ಲೆಡ್ಜರ್ ಪರಿಶೀಲಿಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ. ತಾತ್ಕಾಲಿಕ ಹಣದ ದುರುಪಯೋಗ ಪ್ರಕರಣ ಎಂದು ಪರಿಗಣಿಸಿದ ಬಗ್ಗೆ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಅಲ್ಲದೆ ಮೌಲ್ಯಮಾಪನ ಕುಲಸಚಿವರ ಹೆಸರಿನಲ್ಲಿ ಯಾವುದೇ ಬ್ಯಾಂಕ್ ಖಾತೆ ಇಲ್ಲ. ಬ್ಯಾಂಕ್ ಖಾತೆ ಇಲ್ಲದಿದ್ರೂ ಕೋಟ್ಯಾಂತರ ರೂ. ವಹಿವಾಟು ನಡೆದಿದೆ. ಅಕ್ರಮದ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲು ನಿರ್ಧಾರ ಮಾಡಲಾಗಿದೆ ಎಂದು ಟಿವಿ9ಗೆ ಆರ್‌ಟಿಐ ಕಾರ್ಯಕರ್ತ ಸುರೇಂದ್ರ ಉಗಾರೆ ತಿಳಿಸಿದ್ದಾರೆ.

ಪರೀಕ್ಷೆಗೂ ಮುನ್ನ FDA ಆನ್ಸರ್ ಕೀ ಸೋರಿಕೆ ಪ್ರಕರಣ: BE ಮುಗಿಸಿ ನೇರವಾಗಿ SDA ಹುದ್ದೆಗೆ ಸೇರಿದ್ದ ರಮೇಶ್​ ಹೆರಕಲ್​

Published On - 11:52 am, Fri, 5 February 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!