AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ, ವೇದಗಂಗಾ, ದೂಧ್‌ಗಂಗಾ, ಘಟಪ್ರಭಾ ನದಿಗೆ ಒಳಹರಿವು ಹೆಚ್ಚಳ ಬೆಳಗಾವಿ ಜಿಲ್ಲೆಯ 14 ಸೇತುವೆಗಳು ಮುಳುಗಡೆ

ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಆರ್ಭಟ ಜೋರಾದ ಹಿನ್ನೆಲೆ ಕೃಷ್ಣಾ, ವೇದಗಂಗಾ, ದೂಧ್‌ಗಂಗಾ, ಘಟಪ್ರಭಾ ನದಿಗಳಿಗೆ ಒಳಹರಿವು ಹೆಚ್ಚಾಗಿದೆ. ಕೃಷ್ಣಾ ನದಿಗೆ 92 ಸಾವಿರ ಕ್ಯೂಸೆಕ್​, ದೂಧ್​ಗಂಗಾ ನದಿಗೆ 20 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಒಟ್ಟು 14 ಸೇತುವೆಗಳು ಮುಳುಗಡೆಯಾಗಿವೆ.

ಕೃಷ್ಣಾ, ವೇದಗಂಗಾ, ದೂಧ್‌ಗಂಗಾ, ಘಟಪ್ರಭಾ ನದಿಗೆ ಒಳಹರಿವು ಹೆಚ್ಚಳ ಬೆಳಗಾವಿ ಜಿಲ್ಲೆಯ 14 ಸೇತುವೆಗಳು ಮುಳುಗಡೆ
ಮುಳುಗಡೆಯಾದ ಕುನ್ನೂರು-ಬಾರವಾಡ ಸೇತುವೆ
Vinayak Hanamant Gurav
| Edited By: |

Updated on: Jul 22, 2023 | 3:08 PM

Share

ಬೆಳಗಾವಿ ಜು.22: ಮಹಾರಾಷ್ಟ್ರದ (Maharashtra) ಪಶ್ಚಿಮ ಘಟ್ಟ (Western Ghats) ಪ್ರದೇಶದಲ್ಲಿ ಮಳೆಯ ಆರ್ಭಟ ಜೋರಾದ ಹಿನ್ನೆಲೆ ಕೃಷ್ಣಾ (Krishna), ವೇದಗಂಗಾ, ದೂಧ್‌ಗಂಗಾ, ಘಟಪ್ರಭಾ (Ghataprabha) ನದಿಗಳಿಗೆ ಒಳಹರಿವು ಹೆಚ್ಚಾಗಿದೆ. ಕೃಷ್ಣಾ ನದಿಗೆ 92 ಸಾವಿರ ಕ್ಯೂಸೆಕ್​, ದೂಧ್​ಗಂಗಾ ನದಿಗೆ 20 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಒಟ್ಟು 14 ಸೇತುವೆಗಳು ಮುಳುಗಡೆಯಾಗಿವೆ. ಇದರಲ್ಲಿ ಕೃಷ್ಣಾ, ವೇದಗಂಗಾ, ದೂಧ್‌ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ ಒಟ್ಟು 9 ಕೆಳಹಂತದ ಸೇತುವೆಗಳು ಮುಳುಗಡೆಯಾಗಿವೆ.

ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ನಿಪ್ಪಾಣಿ ತಾಲೂಕಿನ ಭೋಜವಾಡಿ-ಕಾರದಗಾ, ಮಲಿಕವಾಡ-ದತ್ತವಾಡ ಸೇತುವೆ, ಕುನ್ನೂರು-ಬಾರವಾಡ, ಸಿದ್ನಾಳ್-ಅಕ್ಕೋಳ, ಭೋಜ್-ಕುನ್ನೂರು ಸೇತುವೆ, ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿದ ಮಾಂಜರಿ-ಬಾವನಸೌದತ್ತಿ ಸೇತುವೆ, ಕಾಗವಾಡ ತಾಲೂಕಿನ ಮಂಗಾವತಿ-ರಾಜಾಪುರ ಸೇತುವೆ, ಹುಕ್ಕೇರಿ ತಾಲೂಕಿನ ಅರ್ಜುನವಾಡಿ-ಕೋಚರಿ ಸೇತುವೆ, ಅರ್ಜುನವಾಡಿ-ಕುರ್ಣಿ ಮತ್ತು ಕುರ್ಣಿ-ಕೋಚರಿ ಸೇತುವೆ, ಹಾಲತ್ರಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗಿರುವ ಖಾನಾಪುರ ತಾಲೂಕಿನ ಖಾನಾಪುರ-ಹೆಮ್ಮಡಗಾ ಕೆಳಹಂತದ ಸೇತುವೆ ಮುಳುಗಡೆಯಾಗಿದೆ. ಈ ಹಿನ್ನೆಲೆ ಸೇತುವೆ ಎರಡು ಬದಿ ಬ್ಯಾರಿಕೇಡ್ ಹಾಕಿ ಪೊಲೀಸರನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ಪರ್ಯಾಯ ಮಾರ್ಗದ ಮೂಲಕ ಸಂಚರಿಸುತ್ತಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ: ಬೈಲಹೊಂಗಲ ತಾಲೂಕಿನ 3 ಮನೆಗಳು ಕುಸಿತ; 13 ಜನರಿಗೆ ಗಾಯ

ಇನ್ನು ಮಹರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಸತಾರ ಜಿಲ್ಲೆಯ ಕೊಯ್ನಾ ಜಲಾಶಯ ಶೇ 40 ರಷ್ಟು ಭರ್ತಿಯಾಗಿದೆ. ಸದ್ಯಕ್ಕೆ ಕೊಯ್ನಾ ಜಲಾಶಯಕ್ಕೆ 27 ಸಾವಿರ ಕ್ಯೂಸೆಕ್ ನೀರು ಒಳಹರಿವು ಇದೆ. ಕೊಯ್ನಾ ಅಚ್ಚುಕಟ್ಟು ಪ್ರದೇಶದಲ್ಲಿ 113 ಮಿಲಿ ಮೀಟರ್ ಮಳೆಯಾಗಿದೆ. ಮಹಾಬಲೇಶ್ವರದಲ್ಲಿ 140 ಮಿ.ಮೀ. ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​