AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ನಗರದಲ್ಲಿ ನೀರಿಗಾಗಿ ಮುಂದುವರಿದ ಹಾಹಾಕಾರ; 20 ದಿನದಿಂದ ಕುಡಿಯುವ ನೀರು ಸಿಗದೆ ಜನರ ಪರದಾಟ

ಬೆಳಗಾವಿಯ ಬಾಕ್ಸೈಟ್ ರಸ್ತೆಯಲ್ಲಿ ಖಾಲಿ ಕೊಡಗಳನ್ನಿಟ್ಟು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಬೇಕೇ ಬೇಕು ನೀರು ಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ನಗರದಲ್ಲಿ ನೀರಿಗಾಗಿ ಮುಂದುವರಿದ ಹಾಹಾಕಾರ; 20 ದಿನದಿಂದ ಕುಡಿಯುವ ನೀರು ಸಿಗದೆ ಜನರ ಪರದಾಟ
ನೀರಿಗಾಗಿ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ
TV9 Web
| Updated By: sandhya thejappa|

Updated on:Mar 31, 2022 | 2:29 PM

Share

ಬೆಳಗಾವಿ: ನಗರದಲ್ಲಿ ನೀರಿಗಾಗಿ (Water) ಹಾಹಾಕಾರ ಮುಂದುವರಿದಿದೆ. 20 ದಿನದಿಂದ ಕುಡಿಯುವ ನೀರು ಸಿಗದೆ ಜನರು ಪರದಾಡುತ್ತಿದ್ದಾರೆ. ಕುಡಿಯುವ ನೀರಿಗೆ ಆಗ್ರಹಿಸಿ ಇಂದು ಮಹಿಳೆಯರು ರಸ್ತೆ ತಡೆದು ಧರಣಿ (Protest) ನಡೆಸಿದ್ದಾರೆ. ಬೆಳಗಾವಿಯ ಬಾಕ್ಸೈಟ್ ರಸ್ತೆಯಲ್ಲಿ ಖಾಲಿ ಕೊಡಗಳನ್ನಿಟ್ಟು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಬೇಕೇ ಬೇಕು ನೀರು ಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ನಿರತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಜಲಾಶಯಗಳಲ್ಲಿ ನೀರು ಸಂಗ್ರಹ ಇದ್ದರೂ ಸಮರ್ಪಕ ನೀರು ಪೂರೈಕೆ ಮಾಡದಿದ್ದಕ್ಕೆ ಗುತ್ತಿಗೆ ಪಡೆದ ಎಲ್&ಟಿ ಕಂಪನಿ ಅಧಿಕಾರಿಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಆಗಮಿಸಿದ ಶಾಸಕ ಅನಿಲ್ ಬೆನಕೆಗೂ ಬೆಳಗಾವಿಯ ಬಸವ ಕಾಲೋನಿ ನಿವಾಸಿಗಳು ತೀವ್ರ ತರಾಟೆಗೆ ತೆಗೆದುಕೊಂಡರು. ಈ ವೇಳೆ ಶಾಸಕರು ನೀರು ಪೂರೈಕೆ ಗುತ್ತಿಗೆ ಪಡೆದ ಎಲ್&ಟಿ ಕಂಪನಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿದರು. ಕಳೆದ ಹದಿನೈದು ದಿನಗಳಿಂದ ನೀರು ಪೂರೈಕೆ ಆಗುತ್ತಿಲ್ಲ.. ಎಲ್&ಟಿ ಕಂಪನಿಗೆ ನೀರು ಪೂರೈಕೆ ಗುತ್ತಿಗೆ ನೀಡುವ ಮೊದಲು ಸಮರ್ಪಕ ನೀರು ಪೂರೈಕೆಯಾಗುತ್ತಿತ್ತು. ಎರಡು ಮೂರು ದಿನಕ್ಕೊಮ್ಮೆಯಾದರೂ ನೀರು ಪೂರೈಕೆಯಾಗುತ್ತಿತ್ತು. ಕಂಪನಿಯವರು ಬಂದ ಮೇಲೆ ಸಮಸ್ಯೆಯಾಗುತ್ತಿದೆ. ಮೊದಲಿನಂತೆ ಸಮರ್ಪಕವಾಗಿ ನೀರು ಪೂರೈಕೆ ಮಾಡುವಂತೆ ಆಗ್ರಹಿಸದರು.

ಹತ್ತು ದಿನಕ್ಕೊಮ್ಮೆ ನೀರು; ಜನ ಕಂಗಾಲು: ಬೆಳಗಾವಿ ನಗರಕ್ಕೆ ಎರಡು ಡ್ಯಾಂಗಳಿಂದ ನೀರು ಸಪ್ಲೈ ಆಗುತ್ತದೆ. ಬರ ಬಂದರೂ ಮೂರು ವರ್ಷ ಸಾಕಾಗುವಷ್ಟು ನೀರು ಡ್ಯಾಂಗಳಲ್ಲಿ ಇರುತ್ತದೆ. ರಕ್ಕಸಕ್ಕೊಪ್ಪ ಡ್ಯಾಂ ಮತ್ತು ಹಿಡಕಲ್ ಡ್ಯಾಂ ನಿಂದ ನೀರು ಸಪ್ಲೈ ಆಗುತ್ತಿದ್ದು, ಸಾಕಷ್ಟು ಪ್ರಮಾಣದಲ್ಲಿ ಇಲ್ಲಿ ನೀರಿದೆ. ಆದರೆ ಪೈಪ್ ಲೈನ್ ವ್ಯವಸ್ಥೆ ಹಾಳಾಗಿ ಈ ರೀತಿ ಸ್ಥಿತಿ ಎದುರಾಗಿದೆ. ಇದರಿಂದ ಬೆಳಗಾವಿ ನಗರದ ಬಹುತೇಕ ವಾರ್ಡ್​ಗಳಲ್ಲಿ ಹತ್ತು ದಿನಕ್ಕೊಮ್ಮೆ ನೀರು ಬರುತ್ತಿದೆ. ಈ ಕಾರಣಕ್ಕೆ ನಗರದ ಜನ ಕಂಗಾಲಾಗಿದ್ದು, ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಇದನ್ನೂ ಓದಿ

ಭಾರತದ ದೊಡ್ಡ ಪಕ್ಷ ಗೂಂಡಾಗಿರಿ ನಡೆಸಿದರೆ ಅದು ತಪ್ಪು ಸಂದೇಶ ರವಾನಿಸುತ್ತದೆ, ದೇಶಕ್ಕಾಗಿ ನಾನು ಪ್ರಾಣ ಕೊಡಬಲ್ಲೆ: ಅರವಿಂದ ಕೇಜ್ರಿವಾಲ್

ಶ್ರೀಶೈಲದಲ್ಲಿ ಬಾಗಲಕೋಟೆ ಮೂಲದ ಯುವಕನ ಮೇಲೆ ಹಲ್ಲೆ; ಆತಂಕದಲ್ಲಿ ಕುಟುಂಬಸ್ಥರು- ಸಿಎಂ ಬೊಮ್ಮಾಯಿ ಹೇಳಿದ್ದೇನು?

Published On - 2:18 pm, Thu, 31 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ