AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಮಲಪ್ರಭಾ ಡ್ಯಾಂನಿಂದ 4 ಜಿಲ್ಲೆಗಳ 14 ತಾಲೂಕುಗಳಿಗೆ ನೀರು ಬಿಡುಗಡೆ

ಮಲಪ್ರಭಾ ಜಲಾಶಯದಿಂದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಯ 14 ತಾಲೂಕುಗಳಿಗೆ ನೀರು ಬಿಡಲಾಗಿದೆ. ಸೆ.22 ರಿಂದ ಮುಂದಿನ 15 ದಿನಗಳ ಕಾಲ 1.5 ಟಿಎಂಸಿ ನೀರು ಕಾಲುವೆಗೆ ಬಿಡಲಾಗುತ್ತದೆ.

ಬೆಳಗಾವಿ: ಮಲಪ್ರಭಾ ಡ್ಯಾಂನಿಂದ 4 ಜಿಲ್ಲೆಗಳ 14 ತಾಲೂಕುಗಳಿಗೆ ನೀರು ಬಿಡುಗಡೆ
ಮಲಪ್ರಭಾ ಡ್ಯಾಂ
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on: Sep 22, 2023 | 2:32 PM

Share

ಬೆಳಗಾವಿ ಸೆ.22: ಕಳೆದ ಜುಲೈ ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದ ಉತ್ತರ ಕರ್ನಾಟಕದ (North Karnataka) ಪ್ರಮುಖ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಮತ್ತು ಭೀಮಾ ನದಿಗಳಿಗೆ ಅಡ್ಡಲಾಗಿ ಕಟ್ಟಿರುವ ಜಲಾಶಯಶಗಳಲ್ಲಿ ನೀರು ಸಂಗ್ರಹಣೆಯಾಗಿದೆ. ಆದರೆ ಜುಲೈ ನಂತರ ಮಳೆಯಾಗದೆ ಬರಗಾಲ ಆವರಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸವದತ್ತಿ (Savadatti) ತಾಲೂಕಿನ ನವೀಲುತೀರ್ಥದಲ್ಲಿ ಮಲಪ್ರಭಾ ಜಲಾಶಯದಿಂದ (Malaprabha Dam) ಬಲದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡಲಾಗಿದೆ.

ಮಲಪ್ರಭಾ ಜಲಾಶಯದಿಂದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಯ 14 ತಾಲೂಕುಗಳಿಗೆ ನೀರು ಬಿಡಲಾಗಿದೆ. ಸೆ.22 ರಿಂದ ಮುಂದಿನ 15 ದಿನಗಳ ಕಾಲ 1.5 ಟಿಎಂಸಿ ನೀರು ಕಾಲುವೆಗೆ ಬಿಡಲಾಗುತ್ತದೆ. ಈ ಬಗ್ಗೆ ಇತ್ತೀಚಿಗೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇಂದು ಸೆ.22 ಶಾಸಕರಾದ ವಿಶ್ವಾಸ್ ವೈದ್ಯ, ಎನ್.ಎಚ್ ಕೋನರೆಡ್ಡಿ ಸಮ್ಮುಖದಲ್ಲಿ ನೀರು ಬಿಡಲಾಯಿತು.

ಇದನ್ನೂ ಓದಿ: ಕಾವೇರಿ ವಿವಾದ: ನ್ಯಾಯಾಲಯದ ಆದೇಶ ಪಾಲನೆ ಮಾಡಿದರೆ ಜನರ ಬದುಕು ನಶಿಸಿ ಹೋಗುತ್ತದೆ; ನಿರ್ಮಲಾನಂದನಾಥ ಶ್ರೀ 

ಸವದತ್ತಿ, ಧಾರವಾಡ ಜಿಲ್ಲೆಯಲ್ಲಿ ನೀರು ಬಿಡುವಂತೆ ಇತ್ತೀಚಿಗೆ ರೈತರು ಪ್ರತಿಭಟನೆ ನಡೆಸಿದ್ದರು. ಮಲಪ್ರಭಾ ಜಲಾಶಯ 37 ಟಿಎಂಸಿ ಸಾಮರ್ಥ್ಯ ಹೊಂದಿದೆ. ಮಳೆ ಕೊರತೆಯಿಂದ 21 ಟಿಎಂಸಿ ಮಾತ್ರ ನೀರು ಸಂಗ್ರಹವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ