AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಮಲಪ್ರಭಾ ಡ್ಯಾಂನಿಂದ 4 ಜಿಲ್ಲೆಗಳ 14 ತಾಲೂಕುಗಳಿಗೆ ನೀರು ಬಿಡುಗಡೆ

ಮಲಪ್ರಭಾ ಜಲಾಶಯದಿಂದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಯ 14 ತಾಲೂಕುಗಳಿಗೆ ನೀರು ಬಿಡಲಾಗಿದೆ. ಸೆ.22 ರಿಂದ ಮುಂದಿನ 15 ದಿನಗಳ ಕಾಲ 1.5 ಟಿಎಂಸಿ ನೀರು ಕಾಲುವೆಗೆ ಬಿಡಲಾಗುತ್ತದೆ.

ಬೆಳಗಾವಿ: ಮಲಪ್ರಭಾ ಡ್ಯಾಂನಿಂದ 4 ಜಿಲ್ಲೆಗಳ 14 ತಾಲೂಕುಗಳಿಗೆ ನೀರು ಬಿಡುಗಡೆ
ಮಲಪ್ರಭಾ ಡ್ಯಾಂ
Sahadev Mane
| Edited By: |

Updated on: Sep 22, 2023 | 2:32 PM

Share

ಬೆಳಗಾವಿ ಸೆ.22: ಕಳೆದ ಜುಲೈ ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದ ಉತ್ತರ ಕರ್ನಾಟಕದ (North Karnataka) ಪ್ರಮುಖ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಮತ್ತು ಭೀಮಾ ನದಿಗಳಿಗೆ ಅಡ್ಡಲಾಗಿ ಕಟ್ಟಿರುವ ಜಲಾಶಯಶಗಳಲ್ಲಿ ನೀರು ಸಂಗ್ರಹಣೆಯಾಗಿದೆ. ಆದರೆ ಜುಲೈ ನಂತರ ಮಳೆಯಾಗದೆ ಬರಗಾಲ ಆವರಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸವದತ್ತಿ (Savadatti) ತಾಲೂಕಿನ ನವೀಲುತೀರ್ಥದಲ್ಲಿ ಮಲಪ್ರಭಾ ಜಲಾಶಯದಿಂದ (Malaprabha Dam) ಬಲದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡಲಾಗಿದೆ.

ಮಲಪ್ರಭಾ ಜಲಾಶಯದಿಂದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಯ 14 ತಾಲೂಕುಗಳಿಗೆ ನೀರು ಬಿಡಲಾಗಿದೆ. ಸೆ.22 ರಿಂದ ಮುಂದಿನ 15 ದಿನಗಳ ಕಾಲ 1.5 ಟಿಎಂಸಿ ನೀರು ಕಾಲುವೆಗೆ ಬಿಡಲಾಗುತ್ತದೆ. ಈ ಬಗ್ಗೆ ಇತ್ತೀಚಿಗೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇಂದು ಸೆ.22 ಶಾಸಕರಾದ ವಿಶ್ವಾಸ್ ವೈದ್ಯ, ಎನ್.ಎಚ್ ಕೋನರೆಡ್ಡಿ ಸಮ್ಮುಖದಲ್ಲಿ ನೀರು ಬಿಡಲಾಯಿತು.

ಇದನ್ನೂ ಓದಿ: ಕಾವೇರಿ ವಿವಾದ: ನ್ಯಾಯಾಲಯದ ಆದೇಶ ಪಾಲನೆ ಮಾಡಿದರೆ ಜನರ ಬದುಕು ನಶಿಸಿ ಹೋಗುತ್ತದೆ; ನಿರ್ಮಲಾನಂದನಾಥ ಶ್ರೀ 

ಸವದತ್ತಿ, ಧಾರವಾಡ ಜಿಲ್ಲೆಯಲ್ಲಿ ನೀರು ಬಿಡುವಂತೆ ಇತ್ತೀಚಿಗೆ ರೈತರು ಪ್ರತಿಭಟನೆ ನಡೆಸಿದ್ದರು. ಮಲಪ್ರಭಾ ಜಲಾಶಯ 37 ಟಿಎಂಸಿ ಸಾಮರ್ಥ್ಯ ಹೊಂದಿದೆ. ಮಳೆ ಕೊರತೆಯಿಂದ 21 ಟಿಎಂಸಿ ಮಾತ್ರ ನೀರು ಸಂಗ್ರಹವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್