ಬೆಳಗಾವಿ: ಮಲಪ್ರಭಾ ಡ್ಯಾಂನಿಂದ 4 ಜಿಲ್ಲೆಗಳ 14 ತಾಲೂಕುಗಳಿಗೆ ನೀರು ಬಿಡುಗಡೆ

ಮಲಪ್ರಭಾ ಜಲಾಶಯದಿಂದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಯ 14 ತಾಲೂಕುಗಳಿಗೆ ನೀರು ಬಿಡಲಾಗಿದೆ. ಸೆ.22 ರಿಂದ ಮುಂದಿನ 15 ದಿನಗಳ ಕಾಲ 1.5 ಟಿಎಂಸಿ ನೀರು ಕಾಲುವೆಗೆ ಬಿಡಲಾಗುತ್ತದೆ.

ಬೆಳಗಾವಿ: ಮಲಪ್ರಭಾ ಡ್ಯಾಂನಿಂದ 4 ಜಿಲ್ಲೆಗಳ 14 ತಾಲೂಕುಗಳಿಗೆ ನೀರು ಬಿಡುಗಡೆ
ಮಲಪ್ರಭಾ ಡ್ಯಾಂ
Edited By:

Updated on: Sep 22, 2023 | 2:32 PM

ಬೆಳಗಾವಿ ಸೆ.22: ಕಳೆದ ಜುಲೈ ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದ ಉತ್ತರ ಕರ್ನಾಟಕದ (North Karnataka) ಪ್ರಮುಖ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಮತ್ತು ಭೀಮಾ ನದಿಗಳಿಗೆ ಅಡ್ಡಲಾಗಿ ಕಟ್ಟಿರುವ ಜಲಾಶಯಶಗಳಲ್ಲಿ ನೀರು ಸಂಗ್ರಹಣೆಯಾಗಿದೆ. ಆದರೆ ಜುಲೈ ನಂತರ ಮಳೆಯಾಗದೆ ಬರಗಾಲ ಆವರಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸವದತ್ತಿ (Savadatti) ತಾಲೂಕಿನ ನವೀಲುತೀರ್ಥದಲ್ಲಿ ಮಲಪ್ರಭಾ ಜಲಾಶಯದಿಂದ (Malaprabha Dam) ಬಲದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡಲಾಗಿದೆ.

ಮಲಪ್ರಭಾ ಜಲಾಶಯದಿಂದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಯ 14 ತಾಲೂಕುಗಳಿಗೆ ನೀರು ಬಿಡಲಾಗಿದೆ. ಸೆ.22 ರಿಂದ ಮುಂದಿನ 15 ದಿನಗಳ ಕಾಲ 1.5 ಟಿಎಂಸಿ ನೀರು ಕಾಲುವೆಗೆ ಬಿಡಲಾಗುತ್ತದೆ. ಈ ಬಗ್ಗೆ ಇತ್ತೀಚಿಗೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇಂದು ಸೆ.22 ಶಾಸಕರಾದ ವಿಶ್ವಾಸ್ ವೈದ್ಯ, ಎನ್.ಎಚ್ ಕೋನರೆಡ್ಡಿ ಸಮ್ಮುಖದಲ್ಲಿ ನೀರು ಬಿಡಲಾಯಿತು.

ಇದನ್ನೂ ಓದಿ: ಕಾವೇರಿ ವಿವಾದ: ನ್ಯಾಯಾಲಯದ ಆದೇಶ ಪಾಲನೆ ಮಾಡಿದರೆ ಜನರ ಬದುಕು ನಶಿಸಿ ಹೋಗುತ್ತದೆ; ನಿರ್ಮಲಾನಂದನಾಥ ಶ್ರೀ 

ಸವದತ್ತಿ, ಧಾರವಾಡ ಜಿಲ್ಲೆಯಲ್ಲಿ ನೀರು ಬಿಡುವಂತೆ ಇತ್ತೀಚಿಗೆ ರೈತರು ಪ್ರತಿಭಟನೆ ನಡೆಸಿದ್ದರು. ಮಲಪ್ರಭಾ ಜಲಾಶಯ 37 ಟಿಎಂಸಿ ಸಾಮರ್ಥ್ಯ ಹೊಂದಿದೆ. ಮಳೆ ಕೊರತೆಯಿಂದ 21 ಟಿಎಂಸಿ ಮಾತ್ರ ನೀರು ಸಂಗ್ರಹವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ