AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿ ಖಾತೆಗೆ ಹಣ ಜಮೆ ತಡವಾಗುತ್ತಿರುವುದೇಕೆ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಕಾರಣ ಇಲ್ಲಿದೆ

23 ಲಕ್ಷ ಜನರದ್ದು ಕೆವೈಸಿ, ಆಧಾರ್ ಇತ್ಯಾದಿ ತೊಂದರೆ ಇತ್ತು. ಅದೆಲ್ಲವನ್ನೂ ಸರಿ ಪಡಿಸಿ ಈಗ ಏಳು ಲಕ್ಷ ಜನ ಉಳಿದಿದ್ದಾರೆ. ಶೇ 90ರಷ್ಟು ಸರಿ ಅಗಿದ್ದು ಇನ್ನೊಂದು ಹತ್ತು ಪರ್ಸಂಟ್ ಒಂದು ತಿಂಗಳಲ್ಲಿ ಸರಿ ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಖಾತೆಗೆ ಹಣ ಜಮೆ ತಡವಾಗುತ್ತಿರುವುದೇಕೆ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಕಾರಣ ಇಲ್ಲಿದೆ
ಲಕ್ಷ್ಮೀ ಹೆಬ್ಬಾಳ್ಕರ್
ಸಹದೇವ್​ ಮಾನೆ
| Edited By: |

Updated on: Nov 07, 2023 | 3:43 PM

Share

ಬೆಳಗಾವಿ, ನವೆಂಬರ್ 7: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ (Gruha Lakshmi Scheme) ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ವಿಳಂಬವಾಗುತ್ತಿರುವುದು ಮತ್ತು ಆರ್ಥಿಕ‌ ಇಲಾಖೆ ಸೂಚನೆ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಪ್ರತಿಕ್ರಿಯಿಸಿದ್ದಾರೆ. ಆಯಾ ತಿಂಗಳ 20ರ ಒಳಗಾಗಿ ಗೃಹಲಕ್ಷ್ಮಿ ಖಾತೆಗೆ ಹಣ ಜಮಾವಣೆ ಮಾಡುವಂತೆ ಆರ್ಥಿಕ‌ ಇಲಾಖೆ ಸೂಚನೆ ನೀಡಿತ್ತು. ಈ ಬಗ್ಗೆ ಬೆಳಗಾವಿಯಲ್ಲಿ (Belagavi) ‘ಟಿವಿ9’ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ಎರಡು ತಿಂಗಳದ್ದು ಎಲ್ಲರಿಗೂ ಹಣ ಬಂದಿದೆ ಎಂದಿದ್ದಾರೆ.

ಈ ತಿಂಗಳದ್ದು ಸುಮಾರು ಒಂದು ಕೋಟಿ ಹತ್ತು ಲಕ್ಷ ಜನರಿಗೆ ಸರ್ಕಾರದಿಂದ ಹಣ ಬಿಡುಗಡೆ ಆಗಿದೆ. ಕೆವೈಸಿ ತೊಂದರೆ, ತಾಂತ್ರಿಕ ತೊಂದರೆ ಆಗಿದ್ದರಿಂದ ಹಣ ವರ್ಗಾವಣೆಗೆ ತೊಂದರೆ ಆಗಿದೆ. ಸರ್ಕಾರದಿಂದ ಹಣ ಬರುವುದು ಕೂಡ ಲೇಟ್ ಆಗ್ತಿದೆ. ತಡವಾದರೂ ಒಮ್ಮೆಯೇ ನಾಲ್ಕು ಸಾವಿರ ಹಣ ಜಮಾ ಆಗುತ್ತದೆ. ಅಗಸ್ಟ್ 30ರ‌ ನಂತರ ನೋಂದಣಿ ಮಾಡಿಸಿದವರಿಗೆ ಒಂದು ಕಂತಿನ ಹಣ ಬಂದಿದೆ ಎಂದು ಹೆಬ್ಬಾಳ್ಕರ್ ತಿಳಿಸಿದ್ದಾರೆ.

ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಇಲಾಖೆಯಿಂದ ಆಗ್ತಿದೆ. ಬೆಂಗಳೂರಿನ ಬಾಲ ಭವನದಲ್ಲಿ ಪ್ರತಿಯೊಂದು ಜಿಲ್ಲೆಯ ಸಿಡಿಪಿಒ ಕರೆದು ಕ್ಲಿಯರ್ ಮಾಡುತ್ತಿದ್ದೇವೆ. ಆರ್ಥಿಕ ಇಲಾಖೆಯ ಸುತ್ತೋಲೆಯನ್ನು ಸೋಮವಾರ ನೋಡಿದ್ದೇನೆ. ಇದು ಬಹಳ ಒಳ್ಳೆಯದು, ಜನರಿಗೆ ಹಣ ಯಾವಾಗ ಬರುತ್ತೆ ಅಂತಾ ಗೊಂದಲವಿತ್ತು. 15ರಿಂದ 20ರ ಒಳಗೆ ಗೃಹಲಕ್ಷ್ಮಿ ಹಣ ಬರುತ್ತೆ ಅನ್ನೋ ವಿಶ್ವಾಸವಿರಲಿ. ಆರ್ಥಿಕ ಇಲಾಖೆ ಹೀಗೆ ಮಾಡುವುದರಿಂದ ಒಳ್ಳೆಯದಾಗಿದೆ. ಸರ್ಕಾರದಿಂದ ಖಾತೆಗೆ ಹಣ ಬರಲು 25ದಿನ ಬೇಕಾಗುತ್ತಿತ್ತು. ಈಗ ಅದನ್ನ ಬಹಳ ಸರಳೀಕರಣ ಮಾಡಿದ್ದೇವೆ. ಸರ್ಕಾರ ಟ್ರೆಶರಿಗೆ ಕಳುಹಿಸಿ ಅಲ್ಲಿಂದ ನಮ್ಮ ಇಲಾಖೆಯ ಪ್ರಧಾನ ಕಚೇರಿಯಿಂದ ಎಲ್ಲರಿಗೂ ಹಣ ಹೋಗುವಂತೆ ಮಾಡಿದ್ದೇವೆ. 23 ಲಕ್ಷ ಜನರದ್ದು ಕೆವೈಸಿ, ಆಧಾರ್ ಇತ್ಯಾದಿ ತೊಂದರೆ ಇತ್ತು. ಅದೆಲ್ಲವನ್ನೂ ಸರಿ ಪಡಿಸಿ ಈಗ ಏಳು ಲಕ್ಷ ಜನ ಉಳಿದಿದ್ದಾರೆ. ಶೇ 90ರಷ್ಟು ಸರಿ ಅಗಿದ್ದು ಇನ್ನೊಂದು ಹತ್ತು ಪರ್ಸಂಟ್ ಒಂದು ತಿಂಗಳಲ್ಲಿ ಸರಿ ಮಾಡುತ್ತೇವೆ.

ಇದನ್ನೂ ಓದಿ: ಗೃಹ ಲಕ್ಷ್ಮೀಯರ ಖಾತೆಗೆ ಬೀಳದ ಹಣ, ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದ ಯಜಮಾನಿಯರು

ಈವರೆಗೆ ಗೃಹಲಕ್ಷ್ಮಿ ಯೋಜನೆಯ ಹಣ 30 ನೇ ತಾರೀಖು ಬರುತ್ತೆ, 20ಕ್ಕೆ ಬರುತ್ತೆ ಅನ್ನೋ ಗೊಂದಲ ಜನರಲ್ಲಿ ಇತ್ತು. ಈಗ ಒಂದು ದಿನಾಂಕ ಗೊತ್ತಾಗುವುದರಿಂದ ಬ್ಯಾಂಕ್​ಗೆ ಅಲೆಯುವ ಸ್ಥಿತಿ ತಪ್ಪಲಿದೆ. ಎಲ್ಲರಿಗೂ ಹಣ ಸಿಗಲಿದೆ, ಯಾರೂ ತಲೆ ಕೆಡಸಿಕೊಳ್ಳಬೇಡಿ ಎಂದು ಸಚಿವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ