AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆಗೆ ಪತ್ನಿ ಹಾಕಿದ ಸ್ಕೆಚ್ ಹೇಗಿತ್ತು ಗೊತ್ತಾ? ಬೆಚ್ಚಿಬೀಳಿಸುವ ಸ್ಟೋರಿ

ಜನವರಿ 13ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಕ್ರಾಸ್ ಬಳಿ ರಮೇಶ್ ಮಾದಿಗರ ಶವ ಪತ್ತೆಯಾಗಿತ್ತು. ಈ ಹಿನ್ನೆಲೆ ಕೊಲೆಯ ಆರೋಪಿಗಳಿಗಾಗಿ ಬಲೆ ಬೀಸಿದ್ದ ಪೊಲೀಸರಿಗೆ ಬೆಚ್ಚಿಬೀಳಿಸುವ ಸಂಗತಿ ಬಯಲಾಗಿದೆ. ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆಗೆ ಪತ್ನಿಯೇ ಪ್ಲ್ಯಾನ್ ರೂಪಿಸಿದ್ದಾಳೆ.

ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆಗೆ ಪತ್ನಿ ಹಾಕಿದ ಸ್ಕೆಚ್ ಹೇಗಿತ್ತು ಗೊತ್ತಾ? ಬೆಚ್ಚಿಬೀಳಿಸುವ ಸ್ಟೋರಿ
ಆರೋಪಿಗಳನ್ನು ಕರೆದುಕೊಂಡು ಹೋಗುತ್ತಿರುವ ಪೊಲೀಸರು
TV9 Web
| Edited By: |

Updated on: Jan 17, 2022 | 8:26 AM

Share

ಬೆಳಗಾವಿ: ಜ.13ರಂದು ರಮೇಶ್ ಮಾದಿಗರ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ರಮೇಶ್ ಹತ್ಯೆಗೈದಿದ್ದ ಪತ್ನಿ ಶ್ರೀದೇವಿ ಮಾದಿಗರ(30) ಮತ್ತು ಪ್ರಿಯಕರ ಬಸವರಾಜ ಹರಿಜನ(20)ನನ್ನು ಬೆಳಗಾವಿ ಜಿಲ್ಲೆ ಕಿತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜನವರಿ 13ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಕ್ರಾಸ್ ಬಳಿ ರಮೇಶ್ ಮಾದಿಗರ ಶವ ಪತ್ತೆಯಾಗಿತ್ತು. ಈ ಹಿನ್ನೆಲೆ ಕೊಲೆಯ ಆರೋಪಿಗಳಿಗಾಗಿ ಬಲೆ ಬೀಸಿದ್ದ ಪೊಲೀಸರಿಗೆ ಬೆಚ್ಚಿಬೀಳಿಸುವ ಸಂಗತಿ ಬಯಲಾಗಿದೆ. ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆಗೆ ಪತ್ನಿಯೇ ಪ್ಲ್ಯಾನ್ ರೂಪಿಸಿದ್ದಾಳೆ. ಶ್ರೀದೇವಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕ ಬಸವರಾಜ ಶ್ರೀದೇವಿಯ ಪತಿಯ ಕೊಲೆ ಮಾಡಿದ್ದಾನೆ. ರಮೇಶ್ ಮಾದಿಗರ ಗುಪ್ತಾಂಗಕ್ಕೆ ಒದ್ದು, ಕತ್ತು ಹಿಸುಕಿ ಬಸವರಾಜ್ ಹತ್ಯೆಗೈದಿದ್ದ. ಬಳಿಕ ಶ್ರೀದೇವಿಗೆ ಹತ್ಯೆ ವಿಚಾರ ತಿಳಿಸಿ ಪರಾರಿಯಾಗಿದ್ದ. ಸದ್ಯ ಕಿತ್ತೂರು ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಧಾರವಾಡ ತಾಲೂಕಿನ ಬೋಗೂರ ನಿವಾಸಿಯಾಗಿರುವ ಆರೋಪಿ ಬಸವರಾಜ, ಮೃತ ರಮೇಶ್ ಪತ್ನಿ ಶ್ರಿದೇವಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಹೀಗಾಗಿ ಇಬ್ಬರೂ ಒಂದಾಗಲು ಬಸವರಾಜ ಜೊತೆಗೂಡಿ ಗಂಡನ ಹತ್ಯೆಗೆ ಶ್ರಿದೇವಿ ಸ್ಕೆಚ್ ಹಾಕಿದ್ದಳು. ಜನವರಿ 12ರಂದು ರಮೇಶ್‌ಗೆ ಮನೆಯಲ್ಲೇ ಫೋನ್ ಬಿಟ್ಟು ಹೋಗುವಂತೆ ಹೇಳಿದ್ದಳು. ಮನೆಯಲ್ಲಿ ಫೋನ್ ಬಿಟ್ಟು ಹಿರೇಬಾಗೇವಾಡಿಗೆ ಕಟ್ಟಡ ಕಾಮಗಾರಿ ಕೆಲಸಕ್ಕೆ ರಮೇಶ್ ತೆರಳಿದ್ದ. ಈ ವೇಳೆ ರಮೇಶ್‌ ಕೆಲಸ‌ ಮಾಡುವ ಸ್ಥಳಕ್ಕೆ ಆರೋಪಿ ಬಸವರಾಜ ಹೋಗಿದ್ದಾನೆ. ಬಳಿಕ ಕಿತ್ತೂರಿಗೆ ಹೋಗಿ ಬರೋಣ ಬಾ ಅಂತಾ ರಮೇಶ್‌ನನ್ನು ಕರೆದುಕೊಂಡು ಹೋಗಿ ಗುಪ್ತಾಂಗಕ್ಕೆ ಕಾಲಿನಿಂದ ಒದ್ದು, ಕತ್ತು ಹಿಸುಕಿ ರಮೇಶ್ ಕೊಲೆ ಮಾಡಿದ್ದಾನೆ.

ರಮೇಶ್ ಹತ್ಯೆ ಬಳಿಕ ರಮೇಶ್ ಪತ್ನಿ ಶ್ರಿದೇವಿಗೆ ವಿಚಾರ ತಿಳಿಸಿ ಎಸ್ಕೇಪ್ ಆಗಿದ್ದಾನೆ. ಶ್ರಿದೇವಿ ಮೇಲೆ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಪ್ರಕರಣ ಬಯಲಾಗಿದೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Pandit Birju Maharaj Died: ಖ್ಯಾತ ಕಥಕ್​ ನೃತ್ಯಪಟು, ಪದ್ಮವಿಭೂಷಣ ಪುರಸ್ಕೃತ ಬಿರ್ಜೂ ಮಹಾರಾಜ್​ ನಿಧನ

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ