AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಪತಿಗೆ ವಿಷ ಕೊಟ್ಟು ಕೊಲೆಗೆ ಯತ್ನಿಸಿದ ಪತ್ನಿ; ವಿಷ ಬರೆಸಿದ್ದ ಉಪ್ಪಿಟ್ಟು ತಿಂದ ಬೆಕ್ಕು, ನಾಯಿ ಸಾವು!

ಆಸ್ತಿಗಾಗಿ ಮಹಿಯೊಬ್ಬಳು ತನ್ನ ಪತಿಗೆ ಆಹಾರದಲ್ಲಿ ವಿಷಕೊಟ್ಟು ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸದ್ಯ ಐಸಿಯುವಿನಲ್ಲಿ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ, ವಿಷ ಬೆರೆಸಿದ ಆಹಾರ ಸೇವಿಸಿ ಬೆಕ್ಕು, ನಾಯಿ ಸಾವನ್ನಪ್ಪಿದೆ.

ಬೆಳಗಾವಿ: ಪತಿಗೆ ವಿಷ ಕೊಟ್ಟು ಕೊಲೆಗೆ ಯತ್ನಿಸಿದ ಪತ್ನಿ; ವಿಷ ಬರೆಸಿದ್ದ ಉಪ್ಪಿಟ್ಟು ತಿಂದ ಬೆಕ್ಕು, ನಾಯಿ ಸಾವು!
ಪತಿಗೆ ವಿಷಕೊಟ್ಟು ಕೊಲೆ ಮಾಡಲು ಯತ್ನಿಸಿದ ಪತಿ
Sahadev Mane
| Edited By: |

Updated on: Aug 18, 2023 | 9:45 PM

Share

ಬೆಳಗಾವಿ, ಆಗಸ್ಟ್ 18: ಆಸ್ತಿಗಾಗಿ ಮಹಿಳೆಯೊಬ್ಬಳು ಸಹೋದರನ ಮಾತು ಕೇಳಿ ತನ್ನ ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಬೆರೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ನಡೆದಿದೆ. ವಿಷಯುಕ್ತ ಉಪ್ಪಿಟ್ಟು ತಿಂದ ನಿಂಗಪ್ಪಾ ಹಮಾನಿ (35) ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಎರಡು ಎಕರೆ ಆಸ್ತಿಗಾಗಿ ಸಹೋದರನ ಮಾತು ಕೇಳಿ ಸಾವಕ್ಕ ಹಮಾನಿ (32) ತನ್ನ ಪತಿ ನಿಂಗಪ್ಪಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಟ್ಟಿದ್ದಾಳೆ. ಉಪ್ಪಿಟ್ಟು ತಿಂದ ನಂತರ ನಿಂಗಪ್ಪ ಒದ್ದಾಡುವುದನ್ನ ಕಂಡ ಕುಟುಂಬಸ್ಥರು, ಕೂಡಲೇ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಐಸಿಯುವಿನಲ್ಲಿ ನಿಂಗಪ್ಪನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ : ಮಗಳ ಚಿತೆಗೆ ಹಾರಿ ತಂದೆಯಿಂದ ಆತ್ಮಹತ್ಯೆ ಯತ್ನ

ಪತಿಗೆ ವಿಷ ಬೆರೆಸಿದ ನಂತರ ಅನುಮಾನ ಬರಬಾರದೆಂದು ವಿಷ ಬೆರೆಸಿದ್ದ ಉಪ್ಪಿಟ್ಟನ್ನು ಸಾವಕ್ಕ ಹಮಾನಿ ತಿಪ್ಪೆಗೆಸದಿದ್ದಳು. ಆದರೆ, ಹೊಟ್ಟೆ ತುಂಬಿಸಿಕೊಳ್ಳಲೆಂದು ಬಂದ ಎರಡು ಮೂಕ ಪ್ರಾಣಿಗಳಾದ ಬೆಕ್ಕು ಮತ್ತು ನಾಯಿ ಉಪ್ಪಿಟ್ಟು ಸೇವಿಸಿ ಸಾವನ್ನಪ್ಪಿವೆ. ಪ್ರಕರಣ ಸಂಬಂಧ ಸವದತ್ತಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳಾದ ಸಾವಕ್ಕ ಮತ್ತು ಆಕೆಯ ಸಹೋದರ ಫಕೀರಪ್ಪ ಸಿಂದೋಗಿ ಅವರನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ