Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಪತಿಗೆ ವಿಷ ಕೊಟ್ಟು ಕೊಲೆಗೆ ಯತ್ನಿಸಿದ ಪತ್ನಿ; ವಿಷ ಬರೆಸಿದ್ದ ಉಪ್ಪಿಟ್ಟು ತಿಂದ ಬೆಕ್ಕು, ನಾಯಿ ಸಾವು!

ಆಸ್ತಿಗಾಗಿ ಮಹಿಯೊಬ್ಬಳು ತನ್ನ ಪತಿಗೆ ಆಹಾರದಲ್ಲಿ ವಿಷಕೊಟ್ಟು ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸದ್ಯ ಐಸಿಯುವಿನಲ್ಲಿ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ, ವಿಷ ಬೆರೆಸಿದ ಆಹಾರ ಸೇವಿಸಿ ಬೆಕ್ಕು, ನಾಯಿ ಸಾವನ್ನಪ್ಪಿದೆ.

ಬೆಳಗಾವಿ: ಪತಿಗೆ ವಿಷ ಕೊಟ್ಟು ಕೊಲೆಗೆ ಯತ್ನಿಸಿದ ಪತ್ನಿ; ವಿಷ ಬರೆಸಿದ್ದ ಉಪ್ಪಿಟ್ಟು ತಿಂದ ಬೆಕ್ಕು, ನಾಯಿ ಸಾವು!
ಪತಿಗೆ ವಿಷಕೊಟ್ಟು ಕೊಲೆ ಮಾಡಲು ಯತ್ನಿಸಿದ ಪತಿ
Follow us
Sahadev Mane
| Updated By: Rakesh Nayak Manchi

Updated on: Aug 18, 2023 | 9:45 PM

ಬೆಳಗಾವಿ, ಆಗಸ್ಟ್ 18: ಆಸ್ತಿಗಾಗಿ ಮಹಿಳೆಯೊಬ್ಬಳು ಸಹೋದರನ ಮಾತು ಕೇಳಿ ತನ್ನ ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಬೆರೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ನಡೆದಿದೆ. ವಿಷಯುಕ್ತ ಉಪ್ಪಿಟ್ಟು ತಿಂದ ನಿಂಗಪ್ಪಾ ಹಮಾನಿ (35) ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಎರಡು ಎಕರೆ ಆಸ್ತಿಗಾಗಿ ಸಹೋದರನ ಮಾತು ಕೇಳಿ ಸಾವಕ್ಕ ಹಮಾನಿ (32) ತನ್ನ ಪತಿ ನಿಂಗಪ್ಪಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಟ್ಟಿದ್ದಾಳೆ. ಉಪ್ಪಿಟ್ಟು ತಿಂದ ನಂತರ ನಿಂಗಪ್ಪ ಒದ್ದಾಡುವುದನ್ನ ಕಂಡ ಕುಟುಂಬಸ್ಥರು, ಕೂಡಲೇ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಐಸಿಯುವಿನಲ್ಲಿ ನಿಂಗಪ್ಪನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ : ಮಗಳ ಚಿತೆಗೆ ಹಾರಿ ತಂದೆಯಿಂದ ಆತ್ಮಹತ್ಯೆ ಯತ್ನ

ಪತಿಗೆ ವಿಷ ಬೆರೆಸಿದ ನಂತರ ಅನುಮಾನ ಬರಬಾರದೆಂದು ವಿಷ ಬೆರೆಸಿದ್ದ ಉಪ್ಪಿಟ್ಟನ್ನು ಸಾವಕ್ಕ ಹಮಾನಿ ತಿಪ್ಪೆಗೆಸದಿದ್ದಳು. ಆದರೆ, ಹೊಟ್ಟೆ ತುಂಬಿಸಿಕೊಳ್ಳಲೆಂದು ಬಂದ ಎರಡು ಮೂಕ ಪ್ರಾಣಿಗಳಾದ ಬೆಕ್ಕು ಮತ್ತು ನಾಯಿ ಉಪ್ಪಿಟ್ಟು ಸೇವಿಸಿ ಸಾವನ್ನಪ್ಪಿವೆ. ಪ್ರಕರಣ ಸಂಬಂಧ ಸವದತ್ತಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳಾದ ಸಾವಕ್ಕ ಮತ್ತು ಆಕೆಯ ಸಹೋದರ ಫಕೀರಪ್ಪ ಸಿಂದೋಗಿ ಅವರನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ