ಬೆಳಗಾವಿ: ಪತಿಗೆ ವಿಷ ಕೊಟ್ಟು ಕೊಲೆಗೆ ಯತ್ನಿಸಿದ ಪತ್ನಿ; ವಿಷ ಬರೆಸಿದ್ದ ಉಪ್ಪಿಟ್ಟು ತಿಂದ ಬೆಕ್ಕು, ನಾಯಿ ಸಾವು!

ಆಸ್ತಿಗಾಗಿ ಮಹಿಯೊಬ್ಬಳು ತನ್ನ ಪತಿಗೆ ಆಹಾರದಲ್ಲಿ ವಿಷಕೊಟ್ಟು ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸದ್ಯ ಐಸಿಯುವಿನಲ್ಲಿ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ, ವಿಷ ಬೆರೆಸಿದ ಆಹಾರ ಸೇವಿಸಿ ಬೆಕ್ಕು, ನಾಯಿ ಸಾವನ್ನಪ್ಪಿದೆ.

ಬೆಳಗಾವಿ: ಪತಿಗೆ ವಿಷ ಕೊಟ್ಟು ಕೊಲೆಗೆ ಯತ್ನಿಸಿದ ಪತ್ನಿ; ವಿಷ ಬರೆಸಿದ್ದ ಉಪ್ಪಿಟ್ಟು ತಿಂದ ಬೆಕ್ಕು, ನಾಯಿ ಸಾವು!
ಪತಿಗೆ ವಿಷಕೊಟ್ಟು ಕೊಲೆ ಮಾಡಲು ಯತ್ನಿಸಿದ ಪತಿ
Follow us
| Updated By: Rakesh Nayak Manchi

Updated on: Aug 18, 2023 | 9:45 PM

ಬೆಳಗಾವಿ, ಆಗಸ್ಟ್ 18: ಆಸ್ತಿಗಾಗಿ ಮಹಿಳೆಯೊಬ್ಬಳು ಸಹೋದರನ ಮಾತು ಕೇಳಿ ತನ್ನ ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಬೆರೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ನಡೆದಿದೆ. ವಿಷಯುಕ್ತ ಉಪ್ಪಿಟ್ಟು ತಿಂದ ನಿಂಗಪ್ಪಾ ಹಮಾನಿ (35) ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಎರಡು ಎಕರೆ ಆಸ್ತಿಗಾಗಿ ಸಹೋದರನ ಮಾತು ಕೇಳಿ ಸಾವಕ್ಕ ಹಮಾನಿ (32) ತನ್ನ ಪತಿ ನಿಂಗಪ್ಪಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಟ್ಟಿದ್ದಾಳೆ. ಉಪ್ಪಿಟ್ಟು ತಿಂದ ನಂತರ ನಿಂಗಪ್ಪ ಒದ್ದಾಡುವುದನ್ನ ಕಂಡ ಕುಟುಂಬಸ್ಥರು, ಕೂಡಲೇ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಐಸಿಯುವಿನಲ್ಲಿ ನಿಂಗಪ್ಪನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ : ಮಗಳ ಚಿತೆಗೆ ಹಾರಿ ತಂದೆಯಿಂದ ಆತ್ಮಹತ್ಯೆ ಯತ್ನ

ಪತಿಗೆ ವಿಷ ಬೆರೆಸಿದ ನಂತರ ಅನುಮಾನ ಬರಬಾರದೆಂದು ವಿಷ ಬೆರೆಸಿದ್ದ ಉಪ್ಪಿಟ್ಟನ್ನು ಸಾವಕ್ಕ ಹಮಾನಿ ತಿಪ್ಪೆಗೆಸದಿದ್ದಳು. ಆದರೆ, ಹೊಟ್ಟೆ ತುಂಬಿಸಿಕೊಳ್ಳಲೆಂದು ಬಂದ ಎರಡು ಮೂಕ ಪ್ರಾಣಿಗಳಾದ ಬೆಕ್ಕು ಮತ್ತು ನಾಯಿ ಉಪ್ಪಿಟ್ಟು ಸೇವಿಸಿ ಸಾವನ್ನಪ್ಪಿವೆ. ಪ್ರಕರಣ ಸಂಬಂಧ ಸವದತ್ತಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳಾದ ಸಾವಕ್ಕ ಮತ್ತು ಆಕೆಯ ಸಹೋದರ ಫಕೀರಪ್ಪ ಸಿಂದೋಗಿ ಅವರನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ